<p><strong>ಬೆಂಗಳೂರು:</strong> `ನಮ್ಮ ಮೆಟ್ರೊ~ ರೈಲು ಸಂಚಾರಕ್ಕೆ ಇದೇ 20ರಿಂದ ಚಾಲನೆ ದೊರೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ನಿಲ್ದಾಣಗಳಿರುವ ರಸ್ತೆಗಳು, ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.<br /> <br /> ವಿವಿಧ ಸ್ಥಳಗಳಲ್ಲಿ ಮಂಗಳವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. `ಮೆಟ್ರೊ ರೈಲು ಕಾಮಗಾರಿ ಹಿನ್ನೆಲೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗಿನ ರಸ್ತೆ ಹಾಗೂ ಸಿಎಂಎಚ್ ರಸ್ತೆಯುದ್ದಕ್ಕೂ ಜಲ್ಲಿಕಲ್ಲು, ಮಣ್ಣು, ಇತರೆ ತ್ಯಾಜ್ಯ ಹರಡಿದೆ. ಇದರಿಂದ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ~ ಎಂದರು.<br /> <br /> `ಆ ಹಿನ್ನೆಲೆಯಲ್ಲಿ ಪೂರ್ವ ವಲಯದಲ್ಲಿ ಲಭ್ಯವಿರುವ ತುರ್ತುಪಡೆ ಸಿಬ್ಬಂದಿ, 10 ಟ್ರ್ಯಾಕ್ಟರ್, 5 ಟಿಪ್ಪರ್ ಮತ್ತು 100 ಮಂದಿ ಗ್ಯಾಂಗ್ಮನ್ಗಳ ಸೇವೆ ಬಳಸಿಕೊಂಡು ಈ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದೇ 17ಕ್ಕೂ ಮೊದಲು ಸ್ವಚ್ಛತಾ ಕಾರ್ಯವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದರು.<br /> <br /> `ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಅನಿಲ್ ಕುಂಬ್ಳೆ ವೃತ್ತ, ಎಂ.ಜಿ. ರಸ್ತೆ, ಟ್ರಿನಿಟಿ ವೃತ್ತ, ಮುಂತಾದ ವೃತ್ತಗಳಲ್ಲಿ ಹೂ ಗಿಡಗಳನ್ನು ನೆಟ್ಟಿ, ಸುಂದರ ವಿನ್ಯಾಸ ಮಾಡುವಂತೆ ತೋಟಗಾರಿಕೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗಿದೆ~ ಎಂದರು. <br /> <br /> `ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕೈಗೊಂಡಿದ್ದರೂ ವಾಹನ ಸಂಚಾರ ಒತ್ತಡದಿಂದಾಗಿ ಹೊಸ ಗುಂಡಿಗಳು ನಿರ್ಮಾಣವಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ~ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ನಮ್ಮ ಮೆಟ್ರೊ~ ರೈಲು ಸಂಚಾರಕ್ಕೆ ಇದೇ 20ರಿಂದ ಚಾಲನೆ ದೊರೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ನಿಲ್ದಾಣಗಳಿರುವ ರಸ್ತೆಗಳು, ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.<br /> <br /> ವಿವಿಧ ಸ್ಥಳಗಳಲ್ಲಿ ಮಂಗಳವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. `ಮೆಟ್ರೊ ರೈಲು ಕಾಮಗಾರಿ ಹಿನ್ನೆಲೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗಿನ ರಸ್ತೆ ಹಾಗೂ ಸಿಎಂಎಚ್ ರಸ್ತೆಯುದ್ದಕ್ಕೂ ಜಲ್ಲಿಕಲ್ಲು, ಮಣ್ಣು, ಇತರೆ ತ್ಯಾಜ್ಯ ಹರಡಿದೆ. ಇದರಿಂದ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ~ ಎಂದರು.<br /> <br /> `ಆ ಹಿನ್ನೆಲೆಯಲ್ಲಿ ಪೂರ್ವ ವಲಯದಲ್ಲಿ ಲಭ್ಯವಿರುವ ತುರ್ತುಪಡೆ ಸಿಬ್ಬಂದಿ, 10 ಟ್ರ್ಯಾಕ್ಟರ್, 5 ಟಿಪ್ಪರ್ ಮತ್ತು 100 ಮಂದಿ ಗ್ಯಾಂಗ್ಮನ್ಗಳ ಸೇವೆ ಬಳಸಿಕೊಂಡು ಈ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದೇ 17ಕ್ಕೂ ಮೊದಲು ಸ್ವಚ್ಛತಾ ಕಾರ್ಯವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದರು.<br /> <br /> `ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಅನಿಲ್ ಕುಂಬ್ಳೆ ವೃತ್ತ, ಎಂ.ಜಿ. ರಸ್ತೆ, ಟ್ರಿನಿಟಿ ವೃತ್ತ, ಮುಂತಾದ ವೃತ್ತಗಳಲ್ಲಿ ಹೂ ಗಿಡಗಳನ್ನು ನೆಟ್ಟಿ, ಸುಂದರ ವಿನ್ಯಾಸ ಮಾಡುವಂತೆ ತೋಟಗಾರಿಕೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗಿದೆ~ ಎಂದರು. <br /> <br /> `ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕೈಗೊಂಡಿದ್ದರೂ ವಾಹನ ಸಂಚಾರ ಒತ್ತಡದಿಂದಾಗಿ ಹೊಸ ಗುಂಡಿಗಳು ನಿರ್ಮಾಣವಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ~ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>