<p><strong>ಬೆಂಗಳೂರು:</strong> ಬಿಬಿಎಂಪಿಯು ನಾಡಪ್ರಭು ಕೆಂಪೇಗೌಡ ದಿನಾಚರಣೆ ಪ್ರಯುಕ್ತ ಭಾನುವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ `ಮೇಯರ್ ಕಪ್~ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಯುಕ್ತರ `ಎ~ ತಂಡ ಗೆಲುವು ಸಾಧಿಸಿತು.<br /> <br /> ಬೆಳಿಗ್ಗೆ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ ಉಪ ಮೇಯರ್ ಎಸ್. ಹರೀಶ್ ನೇತೃತ್ವದ ಮೇಯರ್ `ಎ~ ತಂಡವು ನಿಗದಿತ 20 ಓವರ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಆನಂತರ ಉತ್ತಮ ಪ್ರದರ್ಶನ ನೀಡಿದ ಎಂ.ಕೆ. ಶಂಕರಲಿಂಗೇಗೌಡ ನೇತೃತ್ವದ ಆಯುಕ್ತರ `ಎ~ ತಂಡವು 18 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.<br /> <br /> ಮಧ್ಯಾಹ್ನ ನಡೆದ ಸೌಹಾರ್ದ ಪಂದ್ಯದಲ್ಲಿ ಪಾಲಿಕೆ ಸದಸ್ಯ ರಮೇಶ್ರಾಜು ನೇತೃತ್ವದ ಮೇಯರ್ `ಬಿ~ ತಂಡ ಜಯ ಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಮೇಯರ್ `ಬಿ~ ತಂಡವು 15 ಓವರ್ಗಳಲ್ಲಿ 137 ರನ್ ಗಳಿಸಿದರೆ, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಶರಣಪ್ಪ ಖಂಡ್ರೆ ನೇತೃತ್ವದ ಮಾಧ್ಯಮ ತಂಡವು 15 ಓವರ್ಗಳಲ್ಲಿ ಏಳು ಕಳೆದುಕೊಂಡು 122 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.<br /> <br /> ಇದಕ್ಕೂ ಮುನ್ನ ನಿವೃತ್ತ ಕ್ರಿಕೆಟಿಗ ಸುನಿಲ್ ಜೋಷಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕ ಎಂ. ನಾಗರಾಜ್ ವೀಕ್ಷಕ ವಿವರಣೆ ನೀಡಿದರು. ಏಪ್ರಿಲ್ 6 ರಂದು ನಡೆಯುವ ಕೆಂಪೇಗೌಡ ದಿನಾಚರಣೆ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯು ನಾಡಪ್ರಭು ಕೆಂಪೇಗೌಡ ದಿನಾಚರಣೆ ಪ್ರಯುಕ್ತ ಭಾನುವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ `ಮೇಯರ್ ಕಪ್~ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಯುಕ್ತರ `ಎ~ ತಂಡ ಗೆಲುವು ಸಾಧಿಸಿತು.<br /> <br /> ಬೆಳಿಗ್ಗೆ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ ಉಪ ಮೇಯರ್ ಎಸ್. ಹರೀಶ್ ನೇತೃತ್ವದ ಮೇಯರ್ `ಎ~ ತಂಡವು ನಿಗದಿತ 20 ಓವರ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಆನಂತರ ಉತ್ತಮ ಪ್ರದರ್ಶನ ನೀಡಿದ ಎಂ.ಕೆ. ಶಂಕರಲಿಂಗೇಗೌಡ ನೇತೃತ್ವದ ಆಯುಕ್ತರ `ಎ~ ತಂಡವು 18 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.<br /> <br /> ಮಧ್ಯಾಹ್ನ ನಡೆದ ಸೌಹಾರ್ದ ಪಂದ್ಯದಲ್ಲಿ ಪಾಲಿಕೆ ಸದಸ್ಯ ರಮೇಶ್ರಾಜು ನೇತೃತ್ವದ ಮೇಯರ್ `ಬಿ~ ತಂಡ ಜಯ ಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಮೇಯರ್ `ಬಿ~ ತಂಡವು 15 ಓವರ್ಗಳಲ್ಲಿ 137 ರನ್ ಗಳಿಸಿದರೆ, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಶರಣಪ್ಪ ಖಂಡ್ರೆ ನೇತೃತ್ವದ ಮಾಧ್ಯಮ ತಂಡವು 15 ಓವರ್ಗಳಲ್ಲಿ ಏಳು ಕಳೆದುಕೊಂಡು 122 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.<br /> <br /> ಇದಕ್ಕೂ ಮುನ್ನ ನಿವೃತ್ತ ಕ್ರಿಕೆಟಿಗ ಸುನಿಲ್ ಜೋಷಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕ ಎಂ. ನಾಗರಾಜ್ ವೀಕ್ಷಕ ವಿವರಣೆ ನೀಡಿದರು. ಏಪ್ರಿಲ್ 6 ರಂದು ನಡೆಯುವ ಕೆಂಪೇಗೌಡ ದಿನಾಚರಣೆ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>