<p><strong>ಫರಿದಾಬಾದ್ (ಪಿಟಿಐ)</strong>: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾದ ಕಾರಣ ಆಜೀವ ನಿಷೇಧಕ್ಕೊಳಗಾಗಿರುವ ಕಳಂಕಿತ ಕ್ರಿಕೆಟಿಗ ಅಜಿತ್ ಚಾಂಡಿಲಾ ಬಿಸಿಸಿಐ ಶಿಸ್ತು ಸಮಿತಿಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿದ್ದಾರೆ.<br /> <br /> ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಮ್ಮ ಮೇಲೆ ಹೇರಿರುವ ನಿಷೇಧವನ್ನು ಪ್ರಶ್ನಿಸುವ ಗೋಜಿಗೆ ಹೋಗುವುದಿಲ್ಲ ಎಂದು ಚಾಂಡಿಲಾ ಮಂಗಳವಾರ ತಿಳಿಸಿದ್ದಾರೆ.<br /> <br /> ‘ಬಿಸಿಸಿಐ ತೀರ್ಪಿನಿಂದ ನನಗೂ ಹಾಗೂ ನನ್ನ ಕುಟುಂಬದವರಿಗೂ ತುಂಬಾ ನೋವಾಗಿದೆ. ನಾನು ನಿರ್ದೋಷಿ. ನನ್ನಿಂದ ಯಾವ ತಪ್ಪೂ ಆಗಿಲ್ಲ. ಕ್ರಿಕೆಟ್ ನನ್ನ ಉಸಿರು. ಈ ಕ್ರೀಡೆಯನ್ನು ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವವನು ನಾನು. ಬಿಸಿಸಿಐ ನನ್ನ ವಿರುದ್ಧ ಈ ರೀತಿಯ ತೀರ್ಮಾನ ಕೈಗೊಳ್ಳಲಿದೆ ಎಂದು ಕನಸಿನಲ್ಲೂ ಊಹಿಸಿರಲಿಲ್ಲ. ತೀರ್ಪು ಮರುಪರಿಶೀಲಿಸುವಂತೆ ಬಿಸಿಸಿಐಗೆ ಮನವಿ ಮಾಡುತ್ತೇನೆ’ ಎಂದು ರಾಜಸ್ತಾನ ರಾಯಲ್ಸ್ ತಂಡದ ಮಾಜಿ ಆಟಗಾರ ಚಾಂಡಿಲಾ ಹೇಳಿದ್ದಾರೆ.<br /> <br /> ‘ಬಿಸಿಸಿಐ ತೀರ್ಪನ್ನು ನ್ಯಾಯಾಲಯ ದಲ್ಲಿ ಪ್ರಶ್ನಿಸುವ ಆಲೋಚನೆ ಖಂಡಿತಾ ನನ್ನಲ್ಲಿಲ್ಲ. ಬಿಸಿಸಿಐ ಹಾಗೂ ನ್ಯಾಯಾಂಗಕ್ಕೂ ಯಾವ ವಿಷಯದಲ್ಲೂ ಸಾಮ್ಯತೆ ಇಲ್ಲ. ಬಿಸಿಸಿಐ ತನ್ನದೇ ಆದ ನೀತಿ ನಿಯಮಗಳನ್ನು ಹೊಂದಿದೆ. ಈ ನಿಯಮಗಳು ನ್ಯಾಯಾಂಗದ ನಿಯಮಗಳಿಗಿಂತಲೂ ಭಿನ್ನವಾಗಿವೆ. ಮೇಲ್ಮನವಿ ಸಲ್ಲಿಸುವ ಬದಲಿಗೆ ನನ್ನ ಮೇಲಿನ ನಿಷೇಧದ ತೀರ್ಪನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಬಿಸಿಸಿಐಗೆ ಮನವಿ ಮಾಡುತ್ತೇನೆ. ಈಗ ನನ್ನ ಮುಂದಿರುವ ಆಯ್ಕೆ ಇದೊಂದೆ’ ಎಂದಿದ್ದಾರೆ.<br /> <br /> ‘ಹಿಂದೆ ಪ್ರತಿಯೊಬ್ಬ ಆಟಗಾರನಲ್ಲೂ ಭಾರತ ತಂಡದಲ್ಲಿ ಸ್ಥಾನ ಗಳಿಸಬೇಕೆಂಬ ಮಹದಾಸೆ ಇರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ರಾಷ್ಟ್ರೀಯ ತಂಡದಲ್ಲಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಐಪಿಎಲ್ನಲ್ಲಿ ಆಡಬೇಕು ಎಂಬ ಆಸೆ ಎಲ್ಲರಲ್ಲೂ ಮನೆಮಾಡಿದೆ. ಪೋಷಕರಲ್ಲೂ ಇದೇ ಕನಸಿರುತ್ತದೆ’ ಎಂದು ಚಾಂಡಿಲಾ ನುಡಿದಿದ್ದಾರೆ.<br /> <br /> ಐಪಿಎಲ್ ಆರನೇ ಆವೃತ್ತಿಯಲ್ಲಿ ಜರುಗಿದ್ದ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದಲ್ಲಿ ಸಿಕ್ಕಿಬಿದ್ದಿದ್ದ ಚಾಂಡಿಲಾ ಐದು ವರ್ಷಗಳ ನಿಷೇಧ ಶಿಕ್ಷೆಗೂ ಒಳಗಾಗಿದ್ದರು. ಸೋಮವಾರ ಈ ಹಗರಣದ ಸಮಗ್ರ ವಿಚಾರಣೆ ನಡೆಸಿದ್ದ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ನೇತೃತ್ವದ ಶಿಸ್ತು ಸಮಿತಿ ಚಾಂಡಿಲಾ ಮೇಲೆ ಆಜೀವ ನಿಷೇಧ ವಿಧಿಸಿ ತೀರ್ಪು ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫರಿದಾಬಾದ್ (ಪಿಟಿಐ)</strong>: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾದ ಕಾರಣ ಆಜೀವ ನಿಷೇಧಕ್ಕೊಳಗಾಗಿರುವ ಕಳಂಕಿತ ಕ್ರಿಕೆಟಿಗ ಅಜಿತ್ ಚಾಂಡಿಲಾ ಬಿಸಿಸಿಐ ಶಿಸ್ತು ಸಮಿತಿಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿದ್ದಾರೆ.<br /> <br /> ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಮ್ಮ ಮೇಲೆ ಹೇರಿರುವ ನಿಷೇಧವನ್ನು ಪ್ರಶ್ನಿಸುವ ಗೋಜಿಗೆ ಹೋಗುವುದಿಲ್ಲ ಎಂದು ಚಾಂಡಿಲಾ ಮಂಗಳವಾರ ತಿಳಿಸಿದ್ದಾರೆ.<br /> <br /> ‘ಬಿಸಿಸಿಐ ತೀರ್ಪಿನಿಂದ ನನಗೂ ಹಾಗೂ ನನ್ನ ಕುಟುಂಬದವರಿಗೂ ತುಂಬಾ ನೋವಾಗಿದೆ. ನಾನು ನಿರ್ದೋಷಿ. ನನ್ನಿಂದ ಯಾವ ತಪ್ಪೂ ಆಗಿಲ್ಲ. ಕ್ರಿಕೆಟ್ ನನ್ನ ಉಸಿರು. ಈ ಕ್ರೀಡೆಯನ್ನು ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವವನು ನಾನು. ಬಿಸಿಸಿಐ ನನ್ನ ವಿರುದ್ಧ ಈ ರೀತಿಯ ತೀರ್ಮಾನ ಕೈಗೊಳ್ಳಲಿದೆ ಎಂದು ಕನಸಿನಲ್ಲೂ ಊಹಿಸಿರಲಿಲ್ಲ. ತೀರ್ಪು ಮರುಪರಿಶೀಲಿಸುವಂತೆ ಬಿಸಿಸಿಐಗೆ ಮನವಿ ಮಾಡುತ್ತೇನೆ’ ಎಂದು ರಾಜಸ್ತಾನ ರಾಯಲ್ಸ್ ತಂಡದ ಮಾಜಿ ಆಟಗಾರ ಚಾಂಡಿಲಾ ಹೇಳಿದ್ದಾರೆ.<br /> <br /> ‘ಬಿಸಿಸಿಐ ತೀರ್ಪನ್ನು ನ್ಯಾಯಾಲಯ ದಲ್ಲಿ ಪ್ರಶ್ನಿಸುವ ಆಲೋಚನೆ ಖಂಡಿತಾ ನನ್ನಲ್ಲಿಲ್ಲ. ಬಿಸಿಸಿಐ ಹಾಗೂ ನ್ಯಾಯಾಂಗಕ್ಕೂ ಯಾವ ವಿಷಯದಲ್ಲೂ ಸಾಮ್ಯತೆ ಇಲ್ಲ. ಬಿಸಿಸಿಐ ತನ್ನದೇ ಆದ ನೀತಿ ನಿಯಮಗಳನ್ನು ಹೊಂದಿದೆ. ಈ ನಿಯಮಗಳು ನ್ಯಾಯಾಂಗದ ನಿಯಮಗಳಿಗಿಂತಲೂ ಭಿನ್ನವಾಗಿವೆ. ಮೇಲ್ಮನವಿ ಸಲ್ಲಿಸುವ ಬದಲಿಗೆ ನನ್ನ ಮೇಲಿನ ನಿಷೇಧದ ತೀರ್ಪನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಬಿಸಿಸಿಐಗೆ ಮನವಿ ಮಾಡುತ್ತೇನೆ. ಈಗ ನನ್ನ ಮುಂದಿರುವ ಆಯ್ಕೆ ಇದೊಂದೆ’ ಎಂದಿದ್ದಾರೆ.<br /> <br /> ‘ಹಿಂದೆ ಪ್ರತಿಯೊಬ್ಬ ಆಟಗಾರನಲ್ಲೂ ಭಾರತ ತಂಡದಲ್ಲಿ ಸ್ಥಾನ ಗಳಿಸಬೇಕೆಂಬ ಮಹದಾಸೆ ಇರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ರಾಷ್ಟ್ರೀಯ ತಂಡದಲ್ಲಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಐಪಿಎಲ್ನಲ್ಲಿ ಆಡಬೇಕು ಎಂಬ ಆಸೆ ಎಲ್ಲರಲ್ಲೂ ಮನೆಮಾಡಿದೆ. ಪೋಷಕರಲ್ಲೂ ಇದೇ ಕನಸಿರುತ್ತದೆ’ ಎಂದು ಚಾಂಡಿಲಾ ನುಡಿದಿದ್ದಾರೆ.<br /> <br /> ಐಪಿಎಲ್ ಆರನೇ ಆವೃತ್ತಿಯಲ್ಲಿ ಜರುಗಿದ್ದ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದಲ್ಲಿ ಸಿಕ್ಕಿಬಿದ್ದಿದ್ದ ಚಾಂಡಿಲಾ ಐದು ವರ್ಷಗಳ ನಿಷೇಧ ಶಿಕ್ಷೆಗೂ ಒಳಗಾಗಿದ್ದರು. ಸೋಮವಾರ ಈ ಹಗರಣದ ಸಮಗ್ರ ವಿಚಾರಣೆ ನಡೆಸಿದ್ದ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ನೇತೃತ್ವದ ಶಿಸ್ತು ಸಮಿತಿ ಚಾಂಡಿಲಾ ಮೇಲೆ ಆಜೀವ ನಿಷೇಧ ವಿಧಿಸಿ ತೀರ್ಪು ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>