<p><strong>ಬೆಂಗಳೂರು:</strong> `ರಾಜ್ಯದಲ್ಲಿರುವ ಕಾಂಗ್ರೆಸ್ ಅಹಿಂದ ವರ್ಗಗಳ ಸರ್ಕಾರ, ಮೇಲ್ವರ್ಗದವರನ್ನು ತುಳಿಯುವ ಸಲುವಾಗಿಯೇ ಯೋಜನೆ ರೂಪಿಸುತ್ತಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇದು ಶುದ್ಧ ಸುಳ್ಳು' ಎಂದು ಸಂಸದ ಎಚ್.ವಿಶ್ವನಾಥ ತಿಳಿಸಿದರು.<br /> <br /> ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾವು ನಗರದ ಪುರಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ಪ್ರಸ್ತುತ ರಾಜಕಾರಣದಲ್ಲಿ ವಿಶ್ವಕರ್ಮ ಸಮುದಾಯದ ಸ್ಥಿತಿಗತಿಗಳು' ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> `ಹಿಂದುಳಿದವರು, ದಲಿತರು, ಶ್ರಮಿಕರಿಗೆ ಎಲ್ಲ ಕಾಲದಲ್ಲೂ ಪ್ರಾತಿನಿಧ್ಯ ದೊರೆಯಬೇಕಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮುಖ್ಯ ಉದ್ದೇಶ. ಅದನ್ನೇ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಕಲೆಯ ಮೂಲಕ ನಾಡನ್ನು ಸುಂದರಗೊಳಿಸಿರುವುದಲ್ಲದೇ ಸಂಸ್ಕೃತಿಗೆ ತನ್ನದೇ ಕಾಣಿಕೆ ನೀಡಿರುವ ವಿಶ್ವಕರ್ಮ ಸಮುದಾಯಕ್ಕೆ ಅಗತ್ಯವಾಗಿ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು' ಎಂದು ಹೇಳಿದರು.<br /> <br /> ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, `ವಿಶ್ವಕರ್ಮ ಜನಾಂಗವು ನಂಬಿಕೊಂಡಿರುವ ಪಂಚ ಕುಶಲ ಕೆಲಸಗಳ ನೆನಪಿನಾರ್ಥ ಪಂಚಪೀಠಗಳನ್ನು ಸ್ಥಾಪನೆ ಮಾಡಬೇಕು. ಇದರಿಂದ ಸಂಘಟಿತರಾಗಲು ಸಾಧ್ಯ' ಎಂದು ಅಭಿಪ್ರಾಯಪಟ್ಟರು.<br /> <br /> `ಜಾಗತೀಕರಣದ ಭರಾಟೆಯಲ್ಲಿ ಕರ ಕುಶಲ ಕಲೆಗಳು ನಶಿಸುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡಲು ಸಾಲ ನೀಡುವಂತಹ ವ್ಯವಸ್ಥೆಯೂ ಆಗಬೇಕಿದೆ. ಕರಕುಶಲ ಕಲೆಯನ್ನು ಮುಂದಿನ ಜನಾಂಗಕ್ಕೂ ಉಳಿಸುವ ದಿಸೆಯಲ್ಲಿ ವಿಶ್ವಕರ್ಮ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು' ಎಂದು ಮನವಿ ಮಾಡಿದರು.<br /> <br /> ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ, `ರಾಜಕೀಯವಾಗಿ ಹಿಂದುಳಿದ ವಿಶ್ವಕರ್ಮ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ' ಎಂದು ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದಲ್ಲಿರುವ ಕಾಂಗ್ರೆಸ್ ಅಹಿಂದ ವರ್ಗಗಳ ಸರ್ಕಾರ, ಮೇಲ್ವರ್ಗದವರನ್ನು ತುಳಿಯುವ ಸಲುವಾಗಿಯೇ ಯೋಜನೆ ರೂಪಿಸುತ್ತಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇದು ಶುದ್ಧ ಸುಳ್ಳು' ಎಂದು ಸಂಸದ ಎಚ್.ವಿಶ್ವನಾಥ ತಿಳಿಸಿದರು.<br /> <br /> ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾವು ನಗರದ ಪುರಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ಪ್ರಸ್ತುತ ರಾಜಕಾರಣದಲ್ಲಿ ವಿಶ್ವಕರ್ಮ ಸಮುದಾಯದ ಸ್ಥಿತಿಗತಿಗಳು' ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> `ಹಿಂದುಳಿದವರು, ದಲಿತರು, ಶ್ರಮಿಕರಿಗೆ ಎಲ್ಲ ಕಾಲದಲ್ಲೂ ಪ್ರಾತಿನಿಧ್ಯ ದೊರೆಯಬೇಕಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮುಖ್ಯ ಉದ್ದೇಶ. ಅದನ್ನೇ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಕಲೆಯ ಮೂಲಕ ನಾಡನ್ನು ಸುಂದರಗೊಳಿಸಿರುವುದಲ್ಲದೇ ಸಂಸ್ಕೃತಿಗೆ ತನ್ನದೇ ಕಾಣಿಕೆ ನೀಡಿರುವ ವಿಶ್ವಕರ್ಮ ಸಮುದಾಯಕ್ಕೆ ಅಗತ್ಯವಾಗಿ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು' ಎಂದು ಹೇಳಿದರು.<br /> <br /> ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, `ವಿಶ್ವಕರ್ಮ ಜನಾಂಗವು ನಂಬಿಕೊಂಡಿರುವ ಪಂಚ ಕುಶಲ ಕೆಲಸಗಳ ನೆನಪಿನಾರ್ಥ ಪಂಚಪೀಠಗಳನ್ನು ಸ್ಥಾಪನೆ ಮಾಡಬೇಕು. ಇದರಿಂದ ಸಂಘಟಿತರಾಗಲು ಸಾಧ್ಯ' ಎಂದು ಅಭಿಪ್ರಾಯಪಟ್ಟರು.<br /> <br /> `ಜಾಗತೀಕರಣದ ಭರಾಟೆಯಲ್ಲಿ ಕರ ಕುಶಲ ಕಲೆಗಳು ನಶಿಸುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡಲು ಸಾಲ ನೀಡುವಂತಹ ವ್ಯವಸ್ಥೆಯೂ ಆಗಬೇಕಿದೆ. ಕರಕುಶಲ ಕಲೆಯನ್ನು ಮುಂದಿನ ಜನಾಂಗಕ್ಕೂ ಉಳಿಸುವ ದಿಸೆಯಲ್ಲಿ ವಿಶ್ವಕರ್ಮ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು' ಎಂದು ಮನವಿ ಮಾಡಿದರು.<br /> <br /> ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ, `ರಾಜಕೀಯವಾಗಿ ಹಿಂದುಳಿದ ವಿಶ್ವಕರ್ಮ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ' ಎಂದು ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>