<p><strong>ಮಧುಗಿರಿ: </strong>ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಲ್ಲಿ ಆಯಾ ಗ್ರಾಮ ಪಂಚಾಯ್ತಿಗಳಲ್ಲಿ ಜಾನುವಾರು ಸಂಖ್ಯೆಯನ್ನು ರೈತರು ನೋಂದಾಯಿಸಿ ಕೊಳ್ಳಬೇಕೆಂದು ತಹಶೀಲ್ದಾರ್ ಆರ್. ನಾಗರಾಜಶೆಟ್ಟಿ ತಿಳಿಸಿದ್ದಾರೆ. <br /> <br /> ತಾಲ್ಲೂಕಿನ ದೊಡ್ಡೇರಿಯಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ತಾಲ್ಲೂಕಿನಲ್ಲಿ 5 ಕೆ.ಜಿ. ತೂಕದ 4700 ಮೇವಿನ ಬೀಜದ ಚೀಲಗಳನ್ನು ರೈತರಿಗೆ ವಿತರಣೆ ಮಾಡಲಾಗಿದೆ. ಅಲ್ಲದೆ ನೇರಳೇಕೆರೆ ಹಾಗೂ ದೇವರತೋಪು ಬಳಿ ಗೋಶಾಲೆಯನ್ನು ತೆರೆಯಲು ಸ್ಥಳವನ್ನು ಗುರುತಿಸಿದ್ದು, ಅಗತ್ಯಕ್ಕನುಗುಣವಾಗಿ ಗೋಶಾಲೆ ತೆರೆಯಲಾಗುವುದು ಎಂದರು.<br /> <br /> ಪಡಿತರ ಚೀಟಿ, ಮಾಸಾಶನ, ವಿದ್ಯುಚ್ಛಕ್ತಿ ಸಮಸ್ಯೆ, ಶಾಲಾ ಕಟ್ಟಡ ದುರಸ್ತಿ, ಭಾಗ್ಯಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ 32 ಅರ್ಜಿಗಳನ್ನು 15 ದಿನಗಳೊಳ ಗಾಗಿ ವಿಲೇವಾರಿ ಮಾಡಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಹಾಗೂ ಅದಾಯ ಪ್ರಮಾಣ ಪತ್ರ ಹಾಗೂ ಇತರೆ <br /> ದೃಢೀಕರಣ ಪತ್ರಗಳನ್ನು 7 ದಿನಗಳ ಒಳಗಾಗಿ ನೀಡುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.<br /> <br /> ಜಿಲ್ಲಾ ಪಂಚಾಯ್ತಿ ಸದಸ್ಯೆ ಯಶೋಧ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಎಇಇ ಲೋಕೇಶ್, ಸಿಡಿಪಿಒ ವಾಸಂತಿ ಉಪ್ಪಾರ್, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಕೋಮಲ, ರಂಗಪ್ಪ, ಕೆಂಚಪ್ಪ, ರಾಮಕೃಷ್ಣಪ್ಪ. ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ: </strong>ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಲ್ಲಿ ಆಯಾ ಗ್ರಾಮ ಪಂಚಾಯ್ತಿಗಳಲ್ಲಿ ಜಾನುವಾರು ಸಂಖ್ಯೆಯನ್ನು ರೈತರು ನೋಂದಾಯಿಸಿ ಕೊಳ್ಳಬೇಕೆಂದು ತಹಶೀಲ್ದಾರ್ ಆರ್. ನಾಗರಾಜಶೆಟ್ಟಿ ತಿಳಿಸಿದ್ದಾರೆ. <br /> <br /> ತಾಲ್ಲೂಕಿನ ದೊಡ್ಡೇರಿಯಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ತಾಲ್ಲೂಕಿನಲ್ಲಿ 5 ಕೆ.ಜಿ. ತೂಕದ 4700 ಮೇವಿನ ಬೀಜದ ಚೀಲಗಳನ್ನು ರೈತರಿಗೆ ವಿತರಣೆ ಮಾಡಲಾಗಿದೆ. ಅಲ್ಲದೆ ನೇರಳೇಕೆರೆ ಹಾಗೂ ದೇವರತೋಪು ಬಳಿ ಗೋಶಾಲೆಯನ್ನು ತೆರೆಯಲು ಸ್ಥಳವನ್ನು ಗುರುತಿಸಿದ್ದು, ಅಗತ್ಯಕ್ಕನುಗುಣವಾಗಿ ಗೋಶಾಲೆ ತೆರೆಯಲಾಗುವುದು ಎಂದರು.<br /> <br /> ಪಡಿತರ ಚೀಟಿ, ಮಾಸಾಶನ, ವಿದ್ಯುಚ್ಛಕ್ತಿ ಸಮಸ್ಯೆ, ಶಾಲಾ ಕಟ್ಟಡ ದುರಸ್ತಿ, ಭಾಗ್ಯಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ 32 ಅರ್ಜಿಗಳನ್ನು 15 ದಿನಗಳೊಳ ಗಾಗಿ ವಿಲೇವಾರಿ ಮಾಡಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಹಾಗೂ ಅದಾಯ ಪ್ರಮಾಣ ಪತ್ರ ಹಾಗೂ ಇತರೆ <br /> ದೃಢೀಕರಣ ಪತ್ರಗಳನ್ನು 7 ದಿನಗಳ ಒಳಗಾಗಿ ನೀಡುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.<br /> <br /> ಜಿಲ್ಲಾ ಪಂಚಾಯ್ತಿ ಸದಸ್ಯೆ ಯಶೋಧ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಎಇಇ ಲೋಕೇಶ್, ಸಿಡಿಪಿಒ ವಾಸಂತಿ ಉಪ್ಪಾರ್, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಕೋಮಲ, ರಂಗಪ್ಪ, ಕೆಂಚಪ್ಪ, ರಾಮಕೃಷ್ಣಪ್ಪ. ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>