<p>ಮೊಳಕಾಲ್ಮುರು: ತಾಲ್ಲೂಕಿನ ಮುತ್ತಿಗಾರಹಳ್ಳಿ ಗೋಶಾಲೆಯಲ್ಲಿ ಸಮರ್ಪಕವಾಗಿ ಮೇವು ವಿತರಣೆ ಮಾಡುತ್ತಿಲ್ಲ ಎಂದು ಆರೋಪಿಸಿ ಬಿ.ಜಿ. ಕೆರೆ ಗ್ರಾಮಸ್ಥರು ಸೋಮವಾರ ಗೋಶಾಲೆಗೆ ಮೇವು ಸಾಗಣೆ ಮಾಡುತ್ತಿದ್ದ ಲಾರಿ ತಡೆದು ಪ್ರತಿಭಟನೆ ನಡೆಸಿದರು.<br /> <br /> ಗೋಶಾಲೆಗೆ ಜಾನುವಾರುಗಳನ್ನು ಹೊಡೆದುಕೊಂಡು ಹೋಗುವ ಹೊತ್ತಿಗೆ ಅಲ್ಲಿರುವ ಬೇರೆ ಊರಿನ ಗ್ರಾಮಸ್ಥರು ಮೇವು ಹಾಕಿಕೊಂಡಿರುತ್ತಾರೆ. ಇದರಿಂದ ಮೇವು ಸಿಗದೇ ಖಾಲಿ ಹೊಟ್ಟೆಯಲ್ಲಿ ಜಾನುವಾರುಗಳನ್ನು ವಾಪಾಸ್ ಕರೆದುಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿವಾರು ಮೇವು ವಿತರಣೆ ಮಾಡಬೇಕು ಎಂದು ಗ್ರಾಮದಲ್ಲಿ ನಡೆಯುತ್ತಿದ್ದ ತುರ್ತುಸಭೆಯಲ್ಲಿ ಭಾಗವಹಿದ್ದ ಗಾಮ ಪಂಚಾಯ್ತಿ ಸದಸ್ಯರಿಗೆ ಮನವಿ ಮಾಡಿದರು. <br /> <br /> ನಂತರ ಗ್ರಾಮ ಪಂಚಾಯ್ತಿ ಸಭೆಯಲ್ಲಿ ಈಗಿರುವ ಗೋಶಾಲೆ ಕೊಂಡ್ಲಹಳ್ಳಿ, ಕೋನಸಾಗರ ಭಾಗಕ್ಕೆ ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಡ್ಲಹಳ್ಳಿ- ಬಿ.ಜಿ. ಕೆರೆ ಮಧ್ಯಭಾಗದಲ್ಲಿ ಮತ್ತೊಂದು ಗೋಶಾಲೆ ಆರಂಭಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಜಿಲ್ಲಾಡಳಿತಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ತಾಲ್ಲೂಕಿನ ಮುತ್ತಿಗಾರಹಳ್ಳಿ ಗೋಶಾಲೆಯಲ್ಲಿ ಸಮರ್ಪಕವಾಗಿ ಮೇವು ವಿತರಣೆ ಮಾಡುತ್ತಿಲ್ಲ ಎಂದು ಆರೋಪಿಸಿ ಬಿ.ಜಿ. ಕೆರೆ ಗ್ರಾಮಸ್ಥರು ಸೋಮವಾರ ಗೋಶಾಲೆಗೆ ಮೇವು ಸಾಗಣೆ ಮಾಡುತ್ತಿದ್ದ ಲಾರಿ ತಡೆದು ಪ್ರತಿಭಟನೆ ನಡೆಸಿದರು.<br /> <br /> ಗೋಶಾಲೆಗೆ ಜಾನುವಾರುಗಳನ್ನು ಹೊಡೆದುಕೊಂಡು ಹೋಗುವ ಹೊತ್ತಿಗೆ ಅಲ್ಲಿರುವ ಬೇರೆ ಊರಿನ ಗ್ರಾಮಸ್ಥರು ಮೇವು ಹಾಕಿಕೊಂಡಿರುತ್ತಾರೆ. ಇದರಿಂದ ಮೇವು ಸಿಗದೇ ಖಾಲಿ ಹೊಟ್ಟೆಯಲ್ಲಿ ಜಾನುವಾರುಗಳನ್ನು ವಾಪಾಸ್ ಕರೆದುಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿವಾರು ಮೇವು ವಿತರಣೆ ಮಾಡಬೇಕು ಎಂದು ಗ್ರಾಮದಲ್ಲಿ ನಡೆಯುತ್ತಿದ್ದ ತುರ್ತುಸಭೆಯಲ್ಲಿ ಭಾಗವಹಿದ್ದ ಗಾಮ ಪಂಚಾಯ್ತಿ ಸದಸ್ಯರಿಗೆ ಮನವಿ ಮಾಡಿದರು. <br /> <br /> ನಂತರ ಗ್ರಾಮ ಪಂಚಾಯ್ತಿ ಸಭೆಯಲ್ಲಿ ಈಗಿರುವ ಗೋಶಾಲೆ ಕೊಂಡ್ಲಹಳ್ಳಿ, ಕೋನಸಾಗರ ಭಾಗಕ್ಕೆ ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಡ್ಲಹಳ್ಳಿ- ಬಿ.ಜಿ. ಕೆರೆ ಮಧ್ಯಭಾಗದಲ್ಲಿ ಮತ್ತೊಂದು ಗೋಶಾಲೆ ಆರಂಭಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಜಿಲ್ಲಾಡಳಿತಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>