<p><strong>ಕೊಲ್ಹಾರ:</strong> ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ಈಗ ಮೈದುಂಬುತ್ತಾ ಬರುತ್ತಿದೆ.<br /> <br /> ಕಳೆದ ಮೂರ್ನಾಲ್ಕು ತಿಂಗಳಿಂದ ನೀರಿಲ್ಲದೆ ಒಣಗಿದ್ದ ನದಿಯ ಇಕ್ಕೆಲಗಳಲ್ಲಿ ಹಸಿರು ಮೂಡಿ, ಜೀವರಾಶಿಗಳಲ್ಲಿ ಈಗ ಹೊಸ ಉತ್ಸಾಹ ಮೂಡಿದೆ.<br /> <br /> ಬುಧವಾರ ಆಲಮಟ್ಟಿ ಜಲಾಶಯದಲ್ಲಿ 515.7 ಮೀ. ನೀರು ಸಂಗ್ರಹಗೊಂಡಿದ್ದು, ದೂರದ ಗಲಗಲಿಯವರೆಗೂ ಎಲ್ಲಿ ನೋಡಿದರಲ್ಲಿ ಕೃಷ್ಣಾ ನದಿ ನೀರು ಸಾಗರದಂತೆ ವಿಶಾಲವಾಗಿ ಕಾಣುತ್ತಿದೆ.<br /> <br /> ನೆರೆಯ ಮಹಾರಾಷ್ಟ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಕಳೆದ ಹತ್ತು ದಿನಗಳಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಆದರೆ ಈ ಭಾಗದ ಅವಳಿ ಜಿಲ್ಲೆಗಳಾದ ವಿಜಾಪುರ ಮತ್ತು ಬಾಗಲಕೋಟೆಯಲ್ಲಿ ಮಳೆ ಇಲ್ಲದೆ ರೈತರು ಚಿಂತಾಕ್ರಾಂತರಾಗಿದ್ದರೂ, ಕೃಷ್ಣೆಗೆ ನೀರು ಹರಿದು ಬರುತ್ತಿರುವುದರಿಂದ ಹರ್ಷಗೊಂಡಿದ್ದಾರೆ.<br /> <br /> ನದಿಯಲ್ಲಿ ಈಗ ನೀರು ಹೆಚ್ಚಿಗೆ ಸಂಗ್ರಹವಾಗುತ್ತಿರುವುದರಿಂದ ಮೀನುಗಾರಿಕೆಗೂ ಹೆಚ್ಚು ಅನುಕೂಲವಾಗಲಿದೆ. ಕೃಷ್ಣೆಯ ಒಡಲು ತುಂಬುತ್ತಾ ಹೋದಂತೆ ಈ ಭಾಗದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರುತ್ತವೆ. ನದಿಯಿಂದ ಹತ್ತಾರು ಕಿ.ಮೀ. ವರೆಗೂ ಪೈಪ್ಗಳಿಂದ ನೀರು ಒಯ್ಯುವ ರೈತರು ಮೆಕ್ಕೆಜೋಳ, ಕಬ್ಬು, ತರಕಾರಿ ಬೆಳೆಯಲು ಸಾಧ್ಯವಾಗುತ್ತದೆ. ಕೂಲಿ ಕಾರ್ಮಿಕರಿಗೆ ಕೆಲಸ ಸಿಗುತ್ತದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ:</strong> ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ಈಗ ಮೈದುಂಬುತ್ತಾ ಬರುತ್ತಿದೆ.<br /> <br /> ಕಳೆದ ಮೂರ್ನಾಲ್ಕು ತಿಂಗಳಿಂದ ನೀರಿಲ್ಲದೆ ಒಣಗಿದ್ದ ನದಿಯ ಇಕ್ಕೆಲಗಳಲ್ಲಿ ಹಸಿರು ಮೂಡಿ, ಜೀವರಾಶಿಗಳಲ್ಲಿ ಈಗ ಹೊಸ ಉತ್ಸಾಹ ಮೂಡಿದೆ.<br /> <br /> ಬುಧವಾರ ಆಲಮಟ್ಟಿ ಜಲಾಶಯದಲ್ಲಿ 515.7 ಮೀ. ನೀರು ಸಂಗ್ರಹಗೊಂಡಿದ್ದು, ದೂರದ ಗಲಗಲಿಯವರೆಗೂ ಎಲ್ಲಿ ನೋಡಿದರಲ್ಲಿ ಕೃಷ್ಣಾ ನದಿ ನೀರು ಸಾಗರದಂತೆ ವಿಶಾಲವಾಗಿ ಕಾಣುತ್ತಿದೆ.<br /> <br /> ನೆರೆಯ ಮಹಾರಾಷ್ಟ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಕಳೆದ ಹತ್ತು ದಿನಗಳಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಆದರೆ ಈ ಭಾಗದ ಅವಳಿ ಜಿಲ್ಲೆಗಳಾದ ವಿಜಾಪುರ ಮತ್ತು ಬಾಗಲಕೋಟೆಯಲ್ಲಿ ಮಳೆ ಇಲ್ಲದೆ ರೈತರು ಚಿಂತಾಕ್ರಾಂತರಾಗಿದ್ದರೂ, ಕೃಷ್ಣೆಗೆ ನೀರು ಹರಿದು ಬರುತ್ತಿರುವುದರಿಂದ ಹರ್ಷಗೊಂಡಿದ್ದಾರೆ.<br /> <br /> ನದಿಯಲ್ಲಿ ಈಗ ನೀರು ಹೆಚ್ಚಿಗೆ ಸಂಗ್ರಹವಾಗುತ್ತಿರುವುದರಿಂದ ಮೀನುಗಾರಿಕೆಗೂ ಹೆಚ್ಚು ಅನುಕೂಲವಾಗಲಿದೆ. ಕೃಷ್ಣೆಯ ಒಡಲು ತುಂಬುತ್ತಾ ಹೋದಂತೆ ಈ ಭಾಗದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರುತ್ತವೆ. ನದಿಯಿಂದ ಹತ್ತಾರು ಕಿ.ಮೀ. ವರೆಗೂ ಪೈಪ್ಗಳಿಂದ ನೀರು ಒಯ್ಯುವ ರೈತರು ಮೆಕ್ಕೆಜೋಳ, ಕಬ್ಬು, ತರಕಾರಿ ಬೆಳೆಯಲು ಸಾಧ್ಯವಾಗುತ್ತದೆ. ಕೂಲಿ ಕಾರ್ಮಿಕರಿಗೆ ಕೆಲಸ ಸಿಗುತ್ತದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>