<p>ಬೆಂಗಳೂರು: ಬಾಕಿ ಇದ್ದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿಯ ಪ್ರಮುಖರ ಸಭೆ ಬುಧವಾರ ಅಂತಿಮಗೊಳಿಸಿ, ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ.<br /> <br /> ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಯಡಿಯೂರಪ್ಪ, ಅನಂತಕುಮಾರ್, ಆರ್.ಅಶೋಕ ಮತ್ತಿತರರು ಪಟ್ಟಿ ಸಮೇತ ದೆಹಲಿಗೆ ತೆರಳಿದರು.<br /> <br /> ಪಕ್ಷದ ಕೇಂದ್ರ ಚುನಾವಣಾ ಸಮಿತಿ ದೆಹಲಿಯಲ್ಲಿ ಗುರುವಾರ ಸಭೆ ಸೇರಲಿದ್ದು, ಅದು ಒಪ್ಪಿಗೆ ಕೊಟ್ಟ ನಂತರ ಪಟ್ಟಿ ಹೊರಬೀಳಲಿದೆ ಎಂದು ಜೋಶಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಉಡುಪಿ– ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕೆ ಇಳಿಸಲು ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ. ಈ ಕ್ಷೇತ್ರದ ಟಿಕೆಟ್ಗಾಗಿ ಪಟ್ಟುಹಿಡಿದಿದ್ದ ಪತ್ರಕರ್ತ ಪ್ರತಾಪ್ ಸಿಂಹ ಅವರಿಗೆ ಮೈಸೂರಿನ<br /> ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದೆ.<br /> <br /> ಪಕ್ಷದ ಪ್ರಮುಖರ ಸಭೆಯ ಈ ತೀರ್ಮಾನ ವಿಧಾನ ಪರಿಷತ್ ಸದಸ್ಯ ಸಿ.ಎಚ್.ವಿಜಯಶಂಕರ್ ಅವರ ಅಸಮಾಧಾನಕ್ಕೂ ಕಾರಣವಾಗಿದೆ. ವಿಜಯಶಂಕರ್ ಅವರಿಗೆ ಹಾಸನದಿಂದ ಸ್ಪರ್ಧಿಸಲು ಸಲಹೆ ಮಾಡಿದ್ದು, ಅದನ್ನು ಅವರು ತಿರಸ್ಕರಿಸಿದ್ದಾರೆ ಎಂದು ಗೊತ್ತಾಗಿದೆ.<br /> <br /> ಪ್ರತಾಪ್ ಸಿಂಹಗೆ ಟಿಕೆಟ್ ನೀಡಿದರೆ ತಾವು ಬಂಡೇಳುವುದಾಗಿಯೂ ಎಚ್ಚರಿಸಿದ್ದಾರೆ. ಹಾಸನದಿಂದ ಯಾವುದೇ ಕಾರಣಕ್ಕೆ ಸ್ಪರ್ಧಿಸುವುದಿಲ್ಲ. ಕೊಟ್ಟರೆ ಮೈಸೂರಿನ ಟಿಕೆಟ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ತುಮಕೂರು ಕ್ಷೇತ್ರದಿಂದ ಯಡಿಯೂರಪ್ಪ ಬೆಂಬಲಿಗರಾದ ಜಿ.ಎಸ್.ಬಸವರಾಜು ಅವರಿಗೇ ಟಿಕೆಟ್ ನೀಡುವ ಸಾಧ್ಯತೆ ಇದೆ. ಅವರ ವಿರುದ್ಧದ ಅಮಾನತು ಆದೇಶವನ್ನು ಹಿಂದಕ್ಕೆ ಪಡೆದ ಬಳಿಕ ಬಿ–ಫಾರಂ ನೀಡಲಾಗುತ್ತದೆ ಎಂದು ಗೊತ್ತಾಗಿದೆ.<br /> <br /> ಬೀದರ್ ಕ್ಷೇತ್ರದಿಂದ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರ ಸೂರ್ಯಕಾಂತ ನಾಗಮಾರಪಲ್ಲಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.<br /> <br /> ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯ ಮಾಜಿ ಅಧ್ಯಕ್ಷ ಪ್ರೊ.ಬಿ.ಶಿವಲಿಂಗಯ್ಯ ಅವರನ್ನು ಮಂಡ್ಯದಿಂದ ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ.<br /> <br /> ಕೋಲಾರದ ಟಿಕೆಟ್ ಡಿ.ಎಸ್.ವೀರಯ್ಯ ಅವರಿಗೆ ಕೈತಪ್ಪುವುದು ಬಹುತೇಕ ಖಚಿತ. ಅವರ ಬದಲಿಗೆ, ಬೇತಮಂಗಲದ ಎಂ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.<br /> <br /> ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಬೇಕೆ ಅಥವಾ ಎನ್ಡಿಎ ಅಂಗಪಕ್ಷವಾಗಿ ಅಂಗೀಕರಿಸಬೇಕೆ ಎನ್ನುವ ವಿಚಾರದಲ್ಲಿ ಗೊಂದಲ ಮುಂದುವರಿದಿದೆ. ದೆಹಲಿಯಲ್ಲಿ ಈ ಗೊಂದಲ ಬಗೆಹರಿಯಲಿದ್ದು, ಅದರ ನಂತರವೇ ಬಳ್ಳಾರಿ ಟಿಕೆಟ್ ಯಾರಿಗೆ ಎನ್ನುವುದು ಗೊತ್ತಾಗಲಿದೆ. ಮೂಲಗಳ ಪ್ರಕಾರ ಶ್ರೀರಾಮುಲು ಅವರಿಗೇ ಟಿಕೆಟ್ ನೀಡುವುದು ಬಹುತೇಕ ಖಚಿತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಾಕಿ ಇದ್ದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿಯ ಪ್ರಮುಖರ ಸಭೆ ಬುಧವಾರ ಅಂತಿಮಗೊಳಿಸಿ, ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ.<br /> <br /> ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಯಡಿಯೂರಪ್ಪ, ಅನಂತಕುಮಾರ್, ಆರ್.ಅಶೋಕ ಮತ್ತಿತರರು ಪಟ್ಟಿ ಸಮೇತ ದೆಹಲಿಗೆ ತೆರಳಿದರು.<br /> <br /> ಪಕ್ಷದ ಕೇಂದ್ರ ಚುನಾವಣಾ ಸಮಿತಿ ದೆಹಲಿಯಲ್ಲಿ ಗುರುವಾರ ಸಭೆ ಸೇರಲಿದ್ದು, ಅದು ಒಪ್ಪಿಗೆ ಕೊಟ್ಟ ನಂತರ ಪಟ್ಟಿ ಹೊರಬೀಳಲಿದೆ ಎಂದು ಜೋಶಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಉಡುಪಿ– ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕೆ ಇಳಿಸಲು ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ. ಈ ಕ್ಷೇತ್ರದ ಟಿಕೆಟ್ಗಾಗಿ ಪಟ್ಟುಹಿಡಿದಿದ್ದ ಪತ್ರಕರ್ತ ಪ್ರತಾಪ್ ಸಿಂಹ ಅವರಿಗೆ ಮೈಸೂರಿನ<br /> ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದೆ.<br /> <br /> ಪಕ್ಷದ ಪ್ರಮುಖರ ಸಭೆಯ ಈ ತೀರ್ಮಾನ ವಿಧಾನ ಪರಿಷತ್ ಸದಸ್ಯ ಸಿ.ಎಚ್.ವಿಜಯಶಂಕರ್ ಅವರ ಅಸಮಾಧಾನಕ್ಕೂ ಕಾರಣವಾಗಿದೆ. ವಿಜಯಶಂಕರ್ ಅವರಿಗೆ ಹಾಸನದಿಂದ ಸ್ಪರ್ಧಿಸಲು ಸಲಹೆ ಮಾಡಿದ್ದು, ಅದನ್ನು ಅವರು ತಿರಸ್ಕರಿಸಿದ್ದಾರೆ ಎಂದು ಗೊತ್ತಾಗಿದೆ.<br /> <br /> ಪ್ರತಾಪ್ ಸಿಂಹಗೆ ಟಿಕೆಟ್ ನೀಡಿದರೆ ತಾವು ಬಂಡೇಳುವುದಾಗಿಯೂ ಎಚ್ಚರಿಸಿದ್ದಾರೆ. ಹಾಸನದಿಂದ ಯಾವುದೇ ಕಾರಣಕ್ಕೆ ಸ್ಪರ್ಧಿಸುವುದಿಲ್ಲ. ಕೊಟ್ಟರೆ ಮೈಸೂರಿನ ಟಿಕೆಟ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ತುಮಕೂರು ಕ್ಷೇತ್ರದಿಂದ ಯಡಿಯೂರಪ್ಪ ಬೆಂಬಲಿಗರಾದ ಜಿ.ಎಸ್.ಬಸವರಾಜು ಅವರಿಗೇ ಟಿಕೆಟ್ ನೀಡುವ ಸಾಧ್ಯತೆ ಇದೆ. ಅವರ ವಿರುದ್ಧದ ಅಮಾನತು ಆದೇಶವನ್ನು ಹಿಂದಕ್ಕೆ ಪಡೆದ ಬಳಿಕ ಬಿ–ಫಾರಂ ನೀಡಲಾಗುತ್ತದೆ ಎಂದು ಗೊತ್ತಾಗಿದೆ.<br /> <br /> ಬೀದರ್ ಕ್ಷೇತ್ರದಿಂದ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರ ಸೂರ್ಯಕಾಂತ ನಾಗಮಾರಪಲ್ಲಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.<br /> <br /> ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯ ಮಾಜಿ ಅಧ್ಯಕ್ಷ ಪ್ರೊ.ಬಿ.ಶಿವಲಿಂಗಯ್ಯ ಅವರನ್ನು ಮಂಡ್ಯದಿಂದ ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ.<br /> <br /> ಕೋಲಾರದ ಟಿಕೆಟ್ ಡಿ.ಎಸ್.ವೀರಯ್ಯ ಅವರಿಗೆ ಕೈತಪ್ಪುವುದು ಬಹುತೇಕ ಖಚಿತ. ಅವರ ಬದಲಿಗೆ, ಬೇತಮಂಗಲದ ಎಂ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.<br /> <br /> ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಬೇಕೆ ಅಥವಾ ಎನ್ಡಿಎ ಅಂಗಪಕ್ಷವಾಗಿ ಅಂಗೀಕರಿಸಬೇಕೆ ಎನ್ನುವ ವಿಚಾರದಲ್ಲಿ ಗೊಂದಲ ಮುಂದುವರಿದಿದೆ. ದೆಹಲಿಯಲ್ಲಿ ಈ ಗೊಂದಲ ಬಗೆಹರಿಯಲಿದ್ದು, ಅದರ ನಂತರವೇ ಬಳ್ಳಾರಿ ಟಿಕೆಟ್ ಯಾರಿಗೆ ಎನ್ನುವುದು ಗೊತ್ತಾಗಲಿದೆ. ಮೂಲಗಳ ಪ್ರಕಾರ ಶ್ರೀರಾಮುಲು ಅವರಿಗೇ ಟಿಕೆಟ್ ನೀಡುವುದು ಬಹುತೇಕ ಖಚಿತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>