<p><strong>ಮೈಸೂರು:</strong> ತಾಲ್ಲೂಕಿನ ಚಿಕ್ಕನಹಳ್ಳಿ ರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಸಿನಕೆರೆ ಬಳಿ ಮೂರು ವರ್ಷದ ಗಂಡು ಚಿರತೆ ಭಾನುವಾರ ಬೆಳಿಗ್ಗೆ ಕಾಣಿಸಿಕೊಂಡು ಆತಂಕದ ವಾತಾವರಣವನ್ನು ಸೃಷ್ಟಿಸಿತು.<br /> ಆಹಾರವಿಲ್ಲದೆ ನಿತ್ರಾಣಗೊಂಡಿದ್ದ ಚಿರತೆ ಓಡಲಾಗದೆ ಅಲ್ಲಲ್ಲೇ ಸುತ್ತಾಡುತ್ತಿತ್ತು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ ಬೆಳಿಗ್ಗೆ 8.30ರ ಸುಮಾರಿನಲ್ಲಿ ಚಿರತೆಯನ್ನು ಕಂಡು ಗಾಬರಿಕೊಂಡು ಓಡಿದರು. ನಂತರ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು.<br /> <br /> ಎಸಿಎಫ್ ದುರ್ಗೇಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ನಿತ್ರಾಣಗೊಂಡ ಚಿರತೆಯನ್ನು ಬಲೆಗೆ ಬೀಳಿಸಲು ಯತ್ನಿಸಿದರು. ಆದರೆ ಸಿಬ್ಬಂದಿಯ ಮೇಲೆ ಚಿರತೆ ತಿರುಗಿಬಿದ್ದಿತು. <br /> <br /> ಕೊನೆಗೆ ಅರಿವಳಿಕೆ ಚುಚ್ಚುಮದ್ದನ್ನು ನೀಡಿ ಬೆಳಿಗ್ಗೆ 11.40 ಸುಮಾರಿನಲ್ಲಿ ಚಿರತೆಯನ್ನು ಬಲೆಗೆ ಬೀಳಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಡಾ.ನಾಗರಾಜ್ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಬೋನಿನಲ್ಲಿ ಸಾಗಿಸಿ ಸುಂಕದಕಟ್ಟೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.<br /> <br /> <strong>ಜನಜಾತ್ರೆ</strong><br /> ಚಿರತೆ ಪ್ರತ್ಯಕ್ಷವಾಗಿರುವ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಸಿನಕರೆಯತ್ತ ದೌಡಾಯಿಸಿದರು. ನಿತ್ರಾಣಗೊಂಡ ಚಿರತೆ ಓಡದ ಪರಿಸ್ಥಿತಿಯನ್ನು ಅರಿತು ಅದರ ಹತ್ತಿರವೇ ಜನರು ಸುಳಿದಾಡತೊಡಗಿದರು. ಚಿರತೆ ಬಳಿ ಸುಳಿದಾಡದಂತೆ ಜನರನ್ನು ಮನವೊಲಿಸಿ ದೂರ ಕಳುಹಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹೆಣಗಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ತಾಲ್ಲೂಕಿನ ಚಿಕ್ಕನಹಳ್ಳಿ ರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಸಿನಕೆರೆ ಬಳಿ ಮೂರು ವರ್ಷದ ಗಂಡು ಚಿರತೆ ಭಾನುವಾರ ಬೆಳಿಗ್ಗೆ ಕಾಣಿಸಿಕೊಂಡು ಆತಂಕದ ವಾತಾವರಣವನ್ನು ಸೃಷ್ಟಿಸಿತು.<br /> ಆಹಾರವಿಲ್ಲದೆ ನಿತ್ರಾಣಗೊಂಡಿದ್ದ ಚಿರತೆ ಓಡಲಾಗದೆ ಅಲ್ಲಲ್ಲೇ ಸುತ್ತಾಡುತ್ತಿತ್ತು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ ಬೆಳಿಗ್ಗೆ 8.30ರ ಸುಮಾರಿನಲ್ಲಿ ಚಿರತೆಯನ್ನು ಕಂಡು ಗಾಬರಿಕೊಂಡು ಓಡಿದರು. ನಂತರ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು.<br /> <br /> ಎಸಿಎಫ್ ದುರ್ಗೇಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ನಿತ್ರಾಣಗೊಂಡ ಚಿರತೆಯನ್ನು ಬಲೆಗೆ ಬೀಳಿಸಲು ಯತ್ನಿಸಿದರು. ಆದರೆ ಸಿಬ್ಬಂದಿಯ ಮೇಲೆ ಚಿರತೆ ತಿರುಗಿಬಿದ್ದಿತು. <br /> <br /> ಕೊನೆಗೆ ಅರಿವಳಿಕೆ ಚುಚ್ಚುಮದ್ದನ್ನು ನೀಡಿ ಬೆಳಿಗ್ಗೆ 11.40 ಸುಮಾರಿನಲ್ಲಿ ಚಿರತೆಯನ್ನು ಬಲೆಗೆ ಬೀಳಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಡಾ.ನಾಗರಾಜ್ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಬೋನಿನಲ್ಲಿ ಸಾಗಿಸಿ ಸುಂಕದಕಟ್ಟೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.<br /> <br /> <strong>ಜನಜಾತ್ರೆ</strong><br /> ಚಿರತೆ ಪ್ರತ್ಯಕ್ಷವಾಗಿರುವ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಸಿನಕರೆಯತ್ತ ದೌಡಾಯಿಸಿದರು. ನಿತ್ರಾಣಗೊಂಡ ಚಿರತೆ ಓಡದ ಪರಿಸ್ಥಿತಿಯನ್ನು ಅರಿತು ಅದರ ಹತ್ತಿರವೇ ಜನರು ಸುಳಿದಾಡತೊಡಗಿದರು. ಚಿರತೆ ಬಳಿ ಸುಳಿದಾಡದಂತೆ ಜನರನ್ನು ಮನವೊಲಿಸಿ ದೂರ ಕಳುಹಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹೆಣಗಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>