<p><strong>ಬೆಂಗಳೂರು:</strong> ಮೈಸೂರು- ಬೆಂಗಳೂರು ನಡುವೆ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸುವಂತೆ ರೈಲ್ವೆ ಇಲಾಖೆಯನ್ನು ಮನವೊಲಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ.<br /> <br /> `ದೇಶದ ವಿವಿಧ ಭಾಗಗಳಲ್ಲಿ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹಲವು ಸುತ್ತಿನ ಮಾತುಕತೆಗಳ ನಂತರ, ಮೈಸೂರು-ಬೆಂಗಳೂರು ನಡುವೆ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಸಾಧ್ಯತೆ ಕುರಿತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಮನ ಒಲಿಸಿದ್ದೇವೆ~ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.<br /> <br /> ಮೈಸೂರು- ಬೆಂಗಳೂರು ನಡುವಿನ ರೈಲು ಸಂಪರ್ಕ ಹೊರತುಪಡಿಸಿ, ದೇಶದ ಪ್ರಮುಖ ವಾಣಿಜ್ಯ, ಪ್ರವಾಸಿ ಮತ್ತು ಧಾರ್ಮಿಕ ಕೇಂದ್ರಗಳ ನಡುವೆ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಹೊಂದಿದೆ.<br /> <br /> ಪುಣೆ-ಮುಂಬೈ-ಅಹಮದಾಬಾದ್, ನವದೆಹಲಿ-ಚಂಡಿಗಢ-ಅಮೃತಸರ, ಹೌರಾ-ಹಲ್ದಿಯಾ, ಚೆನ್ನೈ-ಬೆಂಗಳೂರು-ಕೊಯಮತ್ತೂರು-ಕೊಚ್ಚಿ-ತಿರುವನಂತಪುರ, ನವದೆಹಲಿ-ಆಗ್ರಾ-ಲಕ್ನೊ, ಅಲಹಾಬಾದ್-ಪಟ್ನಾ ಹಾಗೂ ಹೈದರಾಬಾದ್-ದೋರಣಕಲ್-ವಿಜಯವಾಡ-ಚೆನ್ನೈ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈಸೂರು- ಬೆಂಗಳೂರು ನಡುವೆ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸುವಂತೆ ರೈಲ್ವೆ ಇಲಾಖೆಯನ್ನು ಮನವೊಲಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ.<br /> <br /> `ದೇಶದ ವಿವಿಧ ಭಾಗಗಳಲ್ಲಿ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹಲವು ಸುತ್ತಿನ ಮಾತುಕತೆಗಳ ನಂತರ, ಮೈಸೂರು-ಬೆಂಗಳೂರು ನಡುವೆ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಸಾಧ್ಯತೆ ಕುರಿತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಮನ ಒಲಿಸಿದ್ದೇವೆ~ ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.<br /> <br /> ಮೈಸೂರು- ಬೆಂಗಳೂರು ನಡುವಿನ ರೈಲು ಸಂಪರ್ಕ ಹೊರತುಪಡಿಸಿ, ದೇಶದ ಪ್ರಮುಖ ವಾಣಿಜ್ಯ, ಪ್ರವಾಸಿ ಮತ್ತು ಧಾರ್ಮಿಕ ಕೇಂದ್ರಗಳ ನಡುವೆ ಅತಿವೇಗದ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಹೊಂದಿದೆ.<br /> <br /> ಪುಣೆ-ಮುಂಬೈ-ಅಹಮದಾಬಾದ್, ನವದೆಹಲಿ-ಚಂಡಿಗಢ-ಅಮೃತಸರ, ಹೌರಾ-ಹಲ್ದಿಯಾ, ಚೆನ್ನೈ-ಬೆಂಗಳೂರು-ಕೊಯಮತ್ತೂರು-ಕೊಚ್ಚಿ-ತಿರುವನಂತಪುರ, ನವದೆಹಲಿ-ಆಗ್ರಾ-ಲಕ್ನೊ, ಅಲಹಾಬಾದ್-ಪಟ್ನಾ ಹಾಗೂ ಹೈದರಾಬಾದ್-ದೋರಣಕಲ್-ವಿಜಯವಾಡ-ಚೆನ್ನೈ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>