<p><strong>ಬೆಂಗಳೂರು: </strong>`ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಡಿಕೆ ಬೆಳೆಗಾರರಿಂದ ಬಾಕಿ ಇರುವ ಸಾಲ ವಸೂಲಾತಿಗೆ ಸಿವಿಲ್ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿರುವುದನ್ನು ಕೂಡಲೇ ವಾಪಸ್ ಪಡೆಯಬೇಕು~ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ ಎಚ್. ಎಂ.ನಟರಾಜ ಬಾಳೆಮನೆ ಆಗ್ರಹಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಈಗಾಗಲೇ ಕೇಂದ್ರ ಸರ್ಕಾರದಿಂದ ನೇಮಕವಾದ ಅಧಿಕಾರಿ ಗೋರಕ್ಸಿಂಗ್ ಅವರ ನೇತೃತೃದ ಸಮಿತಿಯು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರತಿಯೊಬ್ಬ ಅಡಿಕೆ ಬೆಳೆಗಾರರ ಹತ್ತು ಎಕರೆಗಳಷ್ಟು ಒಣಗಿದ ಬೆಳೆಗೆ ಸಾಲ ಮನ್ನಾ ಮಾಡುವಂತೆ ಶಿಫಾರಸು ಮಾಡಿದೆ~ ಎಂದರು.<br /> <br /> `ಅಡಿಕೆ ಬೆಳೆಗೆ ಹಳದಿ ಎಲೆ ರೋಗ, ಬೇರುಹುಳು, ಸುಳಿ ಕೊರೆಯುವ ರೋಗ ಇತ್ಯಾದಿ ದೀರ್ಘಕಾಲದ ಸಮಸ್ಯೆಗಳಿಂದ ರೈತರು ಬಳಲುತ್ತಿರುವಾಗ ಏಪ್ರಿಲ್ ತಿಂಗಳೊಳಗೆ ಸಾಲ ಪಾವತಿಸಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಬೇಕು~ ಎಂದರು.<br /> <br /> `ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದರಿಂದ ಸಾಲ ಮರುಪಾವತಿ ಮಾಡದ ರೈತರನ್ನು ಬಂಧಿಸುವ ಸಂಭವವಿದೆ. ಹೀಗಾದರೆ, ರೈತರು ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ~ ಎಂದು ಹೇಳಿದರು.<br /> <br /> ಗೋಷ್ಠಿಯಲ್ಲಿ ರೈತರಾದ ಜಯಂತ್ ಮತ್ತು ಬಿ.ಕೆ.ರವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಡಿಕೆ ಬೆಳೆಗಾರರಿಂದ ಬಾಕಿ ಇರುವ ಸಾಲ ವಸೂಲಾತಿಗೆ ಸಿವಿಲ್ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿರುವುದನ್ನು ಕೂಡಲೇ ವಾಪಸ್ ಪಡೆಯಬೇಕು~ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ ಎಚ್. ಎಂ.ನಟರಾಜ ಬಾಳೆಮನೆ ಆಗ್ರಹಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಈಗಾಗಲೇ ಕೇಂದ್ರ ಸರ್ಕಾರದಿಂದ ನೇಮಕವಾದ ಅಧಿಕಾರಿ ಗೋರಕ್ಸಿಂಗ್ ಅವರ ನೇತೃತೃದ ಸಮಿತಿಯು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರತಿಯೊಬ್ಬ ಅಡಿಕೆ ಬೆಳೆಗಾರರ ಹತ್ತು ಎಕರೆಗಳಷ್ಟು ಒಣಗಿದ ಬೆಳೆಗೆ ಸಾಲ ಮನ್ನಾ ಮಾಡುವಂತೆ ಶಿಫಾರಸು ಮಾಡಿದೆ~ ಎಂದರು.<br /> <br /> `ಅಡಿಕೆ ಬೆಳೆಗೆ ಹಳದಿ ಎಲೆ ರೋಗ, ಬೇರುಹುಳು, ಸುಳಿ ಕೊರೆಯುವ ರೋಗ ಇತ್ಯಾದಿ ದೀರ್ಘಕಾಲದ ಸಮಸ್ಯೆಗಳಿಂದ ರೈತರು ಬಳಲುತ್ತಿರುವಾಗ ಏಪ್ರಿಲ್ ತಿಂಗಳೊಳಗೆ ಸಾಲ ಪಾವತಿಸಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಬೇಕು~ ಎಂದರು.<br /> <br /> `ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದರಿಂದ ಸಾಲ ಮರುಪಾವತಿ ಮಾಡದ ರೈತರನ್ನು ಬಂಧಿಸುವ ಸಂಭವವಿದೆ. ಹೀಗಾದರೆ, ರೈತರು ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ~ ಎಂದು ಹೇಳಿದರು.<br /> <br /> ಗೋಷ್ಠಿಯಲ್ಲಿ ರೈತರಾದ ಜಯಂತ್ ಮತ್ತು ಬಿ.ಕೆ.ರವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>