<p><strong>ಬೆಂಗಳೂರು:</strong> ನಟಿ ಶ್ರುತಿ ಹಾಗೂ ಪತ್ರಕರ್ತ ಚಂದ್ರಚೂಡ ಅವರ ವಿವಾಹವನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚಂದ್ರಚೂಡ ಅವರ ಮೊದಲನೇ ಪತ್ನಿ ಮಂಜುಳಾ ಕೌಟುಂಬಿಕ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ.<br /> <br /> `ಹಿಂದೂ ವಿವಾಹ ಕಾಯ್ದೆಯ ಪ್ರಕಾರ ಮೊದಲನೇ ಪತ್ನಿಯ ಅನುಮತಿ ಇಲ್ಲದೆ ಎರಡನೇ ಮದುವೆಯಾಗುವಂತಿಲ್ಲ. ಅಲ್ಲದೇ ನನಗೆ ವಿಚ್ಛೇದನವನ್ನೂ ನೀಡದೇ ಚಂದ್ರಚೂಡ ಅವರು ಎರಡನೇ ಮದುವೆಯಾಗಿರುವುದು ಕಾನೂನು ಬಾಹಿರ. ಹೀಗಾಗಿ ಈ ಮದುವೆಯನ್ನು ಅಸಿಂಧುಗೊಳಿಸಬೇಕು' ಎಂದು ಮಂಜುಳಾ ಅರ್ಜಿಯಲ್ಲಿ ಕೋರಿದ್ದಾರೆ.<br /> <br /> `ಚಂದ್ರಚೂಡ ಅವರಿಗೆ ವಿಚ್ಛೇದನ ನೀಡಲು ಇಷ್ಟವಿಲ್ಲ. ಅವರು ಮತ್ತೆ ನನ್ನ ಬಳಿ ಬರಬಹುದು ಎಂಬ ನಂಬಿಕೆಯಿತ್ತು. ಆದರೆ, ಅವರು ಎರಡನೇ ಮದುವೆಯಾಗುವ ಮೂಲಕ ಹಿಂದೂ ವಿವಾಹ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ' ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.<br /> <br /> ಈ ಬಗ್ಗೆ ಪ್ರತಿಕ್ರಿಯಿಸಿರುವ ಚಂದ್ರಚೂಡ, `ಮಂಜುಳಾ ಕಳೆದ 15 ವರ್ಷಗಳಿಂದ ನನ್ನಿಂದ ದೂರವಾಗಿದ್ದಾಳೆ. ಸಂಧಾನದ ಮೂಲಕ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಹಲವು ಬಾರಿ ಹೇಳಿದ್ದೆ. ಈಗ ಈ ವಿಚಾರ ನ್ಯಾಯಾಲಯದ ಮುಂದಿದೆ.</p>.<p>ನ್ಯಾಯಾಲಯ ನೀಡುವ ತೀರ್ಪನ್ನು ಗೌರವಿಸುತ್ತೇನೆ' ಎಂದಿದ್ದಾರೆ.ನಗರ ಕೌಟುಂಬಿಕ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಟಿ ಶ್ರುತಿ ಹಾಗೂ ಪತ್ರಕರ್ತ ಚಂದ್ರಚೂಡ ಅವರ ವಿವಾಹವನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚಂದ್ರಚೂಡ ಅವರ ಮೊದಲನೇ ಪತ್ನಿ ಮಂಜುಳಾ ಕೌಟುಂಬಿಕ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ.<br /> <br /> `ಹಿಂದೂ ವಿವಾಹ ಕಾಯ್ದೆಯ ಪ್ರಕಾರ ಮೊದಲನೇ ಪತ್ನಿಯ ಅನುಮತಿ ಇಲ್ಲದೆ ಎರಡನೇ ಮದುವೆಯಾಗುವಂತಿಲ್ಲ. ಅಲ್ಲದೇ ನನಗೆ ವಿಚ್ಛೇದನವನ್ನೂ ನೀಡದೇ ಚಂದ್ರಚೂಡ ಅವರು ಎರಡನೇ ಮದುವೆಯಾಗಿರುವುದು ಕಾನೂನು ಬಾಹಿರ. ಹೀಗಾಗಿ ಈ ಮದುವೆಯನ್ನು ಅಸಿಂಧುಗೊಳಿಸಬೇಕು' ಎಂದು ಮಂಜುಳಾ ಅರ್ಜಿಯಲ್ಲಿ ಕೋರಿದ್ದಾರೆ.<br /> <br /> `ಚಂದ್ರಚೂಡ ಅವರಿಗೆ ವಿಚ್ಛೇದನ ನೀಡಲು ಇಷ್ಟವಿಲ್ಲ. ಅವರು ಮತ್ತೆ ನನ್ನ ಬಳಿ ಬರಬಹುದು ಎಂಬ ನಂಬಿಕೆಯಿತ್ತು. ಆದರೆ, ಅವರು ಎರಡನೇ ಮದುವೆಯಾಗುವ ಮೂಲಕ ಹಿಂದೂ ವಿವಾಹ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ' ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.<br /> <br /> ಈ ಬಗ್ಗೆ ಪ್ರತಿಕ್ರಿಯಿಸಿರುವ ಚಂದ್ರಚೂಡ, `ಮಂಜುಳಾ ಕಳೆದ 15 ವರ್ಷಗಳಿಂದ ನನ್ನಿಂದ ದೂರವಾಗಿದ್ದಾಳೆ. ಸಂಧಾನದ ಮೂಲಕ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಹಲವು ಬಾರಿ ಹೇಳಿದ್ದೆ. ಈಗ ಈ ವಿಚಾರ ನ್ಯಾಯಾಲಯದ ಮುಂದಿದೆ.</p>.<p>ನ್ಯಾಯಾಲಯ ನೀಡುವ ತೀರ್ಪನ್ನು ಗೌರವಿಸುತ್ತೇನೆ' ಎಂದಿದ್ದಾರೆ.ನಗರ ಕೌಟುಂಬಿಕ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>