<p>ಕೊಲಂಬೋ (ಪಿಟಿಐ): ‘ಪಂದ್ಯದ ಮೊದಲ 15 ಓವರ್ಗಳಲ್ಲಿ ಬೌಲರ್ಗಳು ಉತ್ತಮ ಪ್ರದರ್ಶನ ತೋರಬೇಕು. ಅಂದಾಗ ಪಂದ್ಯದ ವೆುೀಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತದೆ. ಇದು ಪಂದ್ಯದ ಸೋಲು ಗೆಲುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಶ್ರೀಲಂಕಾ ತಂಡದ ನಾಯಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ.<br /> <br /> ವೆಸ್ಟ್ಇಂಡೀಸ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಗೆಲುವು ಪಡೆದ ನಂತರ ಮಾತನಾಡಿದ ಸಂಗಕ್ಕಾರ, ಇದೊಂದು ಉತ್ತಮ ಗೆಲುವು. ವಿಶ್ವಕಪ್ಗೆ ಮುನ್ನ ದೊರೆತ ಈ ಗೆಲುವು ತಂಡದ ಆತ್ಮವಿಶ್ವಾಸ ವನ್ನು ಹೆಚ್ಚಿಸಿದೆ’ ಎಂದು ನುಡಿದರು.<br /> <br /> ಅಭ್ಯಾಸ ಪಂದ್ಯದಲ್ಲಿ ತಂಡ ಆರು ವಿಕೆಟ್ಗಳನ್ನು ಕಳೆದುಕೊಂಡು ಗುರಿ ತಲುಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿ ಸಿದ ನಾಯಕ ಸಂಗಕ್ಕಾರ, ಕೇವಲ ಒಂದು ಅಥವಾ ಎರಡು ವಿಕೆಟ್ನ ್ಲಲಿಯೇ ಗೆಲುವು ಸಾಧಿಸಬಹುದಿತ್ತು. ಬ್ಯಾಟ್ಸ್ಮನ್ಗಳು ಇನ್ನೂ ಉತ್ತಮವಾಗಿ ಆಡಬಹುದಿತ್ತು ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.<br /> ವೆಸ್ಟ್ಇಂಡೀಸ್ ತಂಡದ ನಾಯಕ ಡೆರ್ರಿನ್ ಸಾಮ್ಮಿ ಮಾತನಾಡಿ, ನಾವು ಮೊದಲ 15 ಓವರ್ಗಳಲ್ಲಿ ಉತ್ತಮ ರನ್ಗಳನ್ನು ಪೇರಿಸಬೇಕಿತ್ತು. ತಂಡ ಉತ್ತಮ ಆರಂಭವನ್ನು ಪಡೆಯಿತು. ಆದರೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ವಿಫಲವಾಯಿತು ಎಂದು ಹೇಳಿದರು. <br /> <br /> ತಂಡದ ಕೆಲ ಪ್ರಮುಖ ಆಟಗಾರರು ಬೇಗನೇ ಔಟಾದರು. ಆದರೂ ನಾವು ಆತ್ಮವಿಶ್ವಾಸವನ್ನು ಕಳೆದುಕೊಂಡಿಲ್ಲ ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ತೋರುವುದಾಗಿ ಅವರು ಭರವಸೆ ನೀಡಿದರು. <br /> <br /> ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ವೆಸ್ಟ್ ಇಂಡೀಸ್ ನವದೆಹಲಿಯಲ್ಲಿ ಫೆ. 24ರಂದು ಪ್ರಬಲ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನುಆಡಲಿದೆ. ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ವಿಶ್ವಕಪ್ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಲಂಬೋ (ಪಿಟಿಐ): ‘ಪಂದ್ಯದ ಮೊದಲ 15 ಓವರ್ಗಳಲ್ಲಿ ಬೌಲರ್ಗಳು ಉತ್ತಮ ಪ್ರದರ್ಶನ ತೋರಬೇಕು. ಅಂದಾಗ ಪಂದ್ಯದ ವೆುೀಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತದೆ. ಇದು ಪಂದ್ಯದ ಸೋಲು ಗೆಲುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಶ್ರೀಲಂಕಾ ತಂಡದ ನಾಯಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ.<br /> <br /> ವೆಸ್ಟ್ಇಂಡೀಸ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಗೆಲುವು ಪಡೆದ ನಂತರ ಮಾತನಾಡಿದ ಸಂಗಕ್ಕಾರ, ಇದೊಂದು ಉತ್ತಮ ಗೆಲುವು. ವಿಶ್ವಕಪ್ಗೆ ಮುನ್ನ ದೊರೆತ ಈ ಗೆಲುವು ತಂಡದ ಆತ್ಮವಿಶ್ವಾಸ ವನ್ನು ಹೆಚ್ಚಿಸಿದೆ’ ಎಂದು ನುಡಿದರು.<br /> <br /> ಅಭ್ಯಾಸ ಪಂದ್ಯದಲ್ಲಿ ತಂಡ ಆರು ವಿಕೆಟ್ಗಳನ್ನು ಕಳೆದುಕೊಂಡು ಗುರಿ ತಲುಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿ ಸಿದ ನಾಯಕ ಸಂಗಕ್ಕಾರ, ಕೇವಲ ಒಂದು ಅಥವಾ ಎರಡು ವಿಕೆಟ್ನ ್ಲಲಿಯೇ ಗೆಲುವು ಸಾಧಿಸಬಹುದಿತ್ತು. ಬ್ಯಾಟ್ಸ್ಮನ್ಗಳು ಇನ್ನೂ ಉತ್ತಮವಾಗಿ ಆಡಬಹುದಿತ್ತು ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.<br /> ವೆಸ್ಟ್ಇಂಡೀಸ್ ತಂಡದ ನಾಯಕ ಡೆರ್ರಿನ್ ಸಾಮ್ಮಿ ಮಾತನಾಡಿ, ನಾವು ಮೊದಲ 15 ಓವರ್ಗಳಲ್ಲಿ ಉತ್ತಮ ರನ್ಗಳನ್ನು ಪೇರಿಸಬೇಕಿತ್ತು. ತಂಡ ಉತ್ತಮ ಆರಂಭವನ್ನು ಪಡೆಯಿತು. ಆದರೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ವಿಫಲವಾಯಿತು ಎಂದು ಹೇಳಿದರು. <br /> <br /> ತಂಡದ ಕೆಲ ಪ್ರಮುಖ ಆಟಗಾರರು ಬೇಗನೇ ಔಟಾದರು. ಆದರೂ ನಾವು ಆತ್ಮವಿಶ್ವಾಸವನ್ನು ಕಳೆದುಕೊಂಡಿಲ್ಲ ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ತೋರುವುದಾಗಿ ಅವರು ಭರವಸೆ ನೀಡಿದರು. <br /> <br /> ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ವೆಸ್ಟ್ ಇಂಡೀಸ್ ನವದೆಹಲಿಯಲ್ಲಿ ಫೆ. 24ರಂದು ಪ್ರಬಲ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನುಆಡಲಿದೆ. ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ವಿಶ್ವಕಪ್ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>