<p><strong>ನವದೆಹಲಿ (ಪಿಟಿಐ): </strong>ಹಣಕಾಸಿನ ಅವ್ಯವಹಾರ ಸಂಬಂಧ ವಿಚಾರಣೆ ನಡೆಸುತ್ತಿರುವ ಶಿಸ್ತು ಸಮಿತಿಯನ್ನು ಪುನರ್ ರಚಿಸಬೇಕು ಎಂದು ಕೋರಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.<br /> <br /> `ಬಿಸಿಸಿಐ ರಚಿಸಿರುವ ಮೂರು ಮಂದಿಯ ಸಮಿತಿ ಅಧಿಕೃತವಾಗಿದೆ~ ಎಂದು ನ್ಯಾಯಮೂರ್ತಿಗಳಾದ ಜೆ.ಎಂ.ಪಂಚಾಲ್ ಹಾಗೂ ಎಚ್.ಎಲ್.ಗೋಖಲೆ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ. <br /> ಈ ಸಮಿತಿಯಲ್ಲಿ ಅರುಣ್ ಜೇಟ್ಲಿ, ಚಿರಾಯು ಅಮಿನ್ ಹಾಗೂ ಜ್ಯೋತಿರಾದಿತ್ಯ ಸಿಂದ್ಯ ಇದ್ದಾರೆ. ಜೇಟ್ಲಿ ಹಾಗೂ ಅಮಿನ್ ಅವರನ್ನು ತೆಗೆಯಬೇಕು ಎಂಬುದು ಮೋದಿ ಕೋರಿಕೆಯಾಗಿತ್ತು. <br /> <br /> `ಸಮಿತಿ ಸದಸ್ಯರು ವಿಚಾರಣೆ ವೇಳೆ ಪೂರ್ವಗ್ರಹ ಪೀಡಿತರಾಗಿರುತ್ತಾರೆ ಎಂದು ನಾವು ಊಹಿಸಿಕೊಳ್ಳಲು ಸಾಧ್ಯವಿಲ್ಲ~ ಎಂದು ಪೀಠ ತಿಳಿಸಿದೆ. <br /> <br /> ಶಿಸ್ತು ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಮಾನತು ಶಿಕ್ಷೆ ರದ್ದು ಮಾಡಬೇಕು ಎಂದು ಕೋರಿ 2010ರ ಜುಲೈನಲ್ಲಿ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಹಣಕಾಸಿನ ಅವ್ಯವಹಾರ ಸಂಬಂಧ ವಿಚಾರಣೆ ನಡೆಸುತ್ತಿರುವ ಶಿಸ್ತು ಸಮಿತಿಯನ್ನು ಪುನರ್ ರಚಿಸಬೇಕು ಎಂದು ಕೋರಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.<br /> <br /> `ಬಿಸಿಸಿಐ ರಚಿಸಿರುವ ಮೂರು ಮಂದಿಯ ಸಮಿತಿ ಅಧಿಕೃತವಾಗಿದೆ~ ಎಂದು ನ್ಯಾಯಮೂರ್ತಿಗಳಾದ ಜೆ.ಎಂ.ಪಂಚಾಲ್ ಹಾಗೂ ಎಚ್.ಎಲ್.ಗೋಖಲೆ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ. <br /> ಈ ಸಮಿತಿಯಲ್ಲಿ ಅರುಣ್ ಜೇಟ್ಲಿ, ಚಿರಾಯು ಅಮಿನ್ ಹಾಗೂ ಜ್ಯೋತಿರಾದಿತ್ಯ ಸಿಂದ್ಯ ಇದ್ದಾರೆ. ಜೇಟ್ಲಿ ಹಾಗೂ ಅಮಿನ್ ಅವರನ್ನು ತೆಗೆಯಬೇಕು ಎಂಬುದು ಮೋದಿ ಕೋರಿಕೆಯಾಗಿತ್ತು. <br /> <br /> `ಸಮಿತಿ ಸದಸ್ಯರು ವಿಚಾರಣೆ ವೇಳೆ ಪೂರ್ವಗ್ರಹ ಪೀಡಿತರಾಗಿರುತ್ತಾರೆ ಎಂದು ನಾವು ಊಹಿಸಿಕೊಳ್ಳಲು ಸಾಧ್ಯವಿಲ್ಲ~ ಎಂದು ಪೀಠ ತಿಳಿಸಿದೆ. <br /> <br /> ಶಿಸ್ತು ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಮಾನತು ಶಿಕ್ಷೆ ರದ್ದು ಮಾಡಬೇಕು ಎಂದು ಕೋರಿ 2010ರ ಜುಲೈನಲ್ಲಿ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>