<p>ಅಹಮದಾಬಾದ್: `ಗುಜರಾತ್ನ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಕ್ರಮಗಳನ್ನು ವಿಶ್ವವೇ ಕೊಂಡಾಡುತ್ತಿದೆ. ನನಗೂ ಮೋದಿ ಅವರೇ ಮಾದರಿ~.<br /> <br /> - `ಶಾಂತಿ ಮತ್ತು ಕೋಮು ಸಾಮರಸ್ಯ~ದ ಸಂದೇಶ ಸಾರುವ ಉದ್ದೇಶದಿಂದ ಮೋದಿ ಆರಂಭಿಸಿರುವ ಸದ್ಭಾವನಾ ಉಪವಾಸದ ಎರಡನೆಯ ದಿನವಾದ ಭಾನುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರ್ನಾಟಕದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದು ಹೀಗೆ.<br /> <br /> `ರಾಜ್ಯದ ಆರು ಕೋಟಿ ಕನ್ನಡಿಗರು ಮೋದಿ ಅವರ ಉಪವಾಸದ ಪರವಾಗಿದ್ದಾರೆ. ಅವರ ಪರವಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಮೋದಿ ಅವರು ಉಪವಾಸ ಕಾರ್ಯಕ್ರಮದ ಮೂಲಕ ನವಭಾರತ ಕಟ್ಟುವ ಪ್ರಯತ್ನ ನಡೆಸಿದ್ದಾರೆ~ ಎಂದು ಪ್ರಶಂಸಿಸಿದರು.<br /> <br /> ಸಾಮರಸ್ಯ ಮೂಡಿಸುವ ಉದ್ದೇಶದಿಂದ ರಾಜಕೀಯೇತರವಾದ ಇಂಥ ಪ್ರಯತ್ನಗಳು ದೇಶದ ಮೂಲೆ ಮೂಲೆಗಳಲ್ಲಿ ನಡೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಉನ್ನತ ಧ್ಯೇಯವೊಂದಕ್ಕೆ ಬದ್ಧತೆ ವ್ಯಕ್ತಪಡಿಸಲು ಉಪವಾಸ ಉತ್ತಮ ಮಾರ್ಗ. ಮೋದಿ ಅವರು ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಅಂತರರಾಷ್ಟ್ರೀಯ ಮಟ್ಟದಲ್ಲೂ ಪರಿಗಣಿತವಾಗಿರುವುದು ಸಂತಸದ ವಿಷಯ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಹಮದಾಬಾದ್: `ಗುಜರಾತ್ನ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಕ್ರಮಗಳನ್ನು ವಿಶ್ವವೇ ಕೊಂಡಾಡುತ್ತಿದೆ. ನನಗೂ ಮೋದಿ ಅವರೇ ಮಾದರಿ~.<br /> <br /> - `ಶಾಂತಿ ಮತ್ತು ಕೋಮು ಸಾಮರಸ್ಯ~ದ ಸಂದೇಶ ಸಾರುವ ಉದ್ದೇಶದಿಂದ ಮೋದಿ ಆರಂಭಿಸಿರುವ ಸದ್ಭಾವನಾ ಉಪವಾಸದ ಎರಡನೆಯ ದಿನವಾದ ಭಾನುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರ್ನಾಟಕದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದು ಹೀಗೆ.<br /> <br /> `ರಾಜ್ಯದ ಆರು ಕೋಟಿ ಕನ್ನಡಿಗರು ಮೋದಿ ಅವರ ಉಪವಾಸದ ಪರವಾಗಿದ್ದಾರೆ. ಅವರ ಪರವಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಮೋದಿ ಅವರು ಉಪವಾಸ ಕಾರ್ಯಕ್ರಮದ ಮೂಲಕ ನವಭಾರತ ಕಟ್ಟುವ ಪ್ರಯತ್ನ ನಡೆಸಿದ್ದಾರೆ~ ಎಂದು ಪ್ರಶಂಸಿಸಿದರು.<br /> <br /> ಸಾಮರಸ್ಯ ಮೂಡಿಸುವ ಉದ್ದೇಶದಿಂದ ರಾಜಕೀಯೇತರವಾದ ಇಂಥ ಪ್ರಯತ್ನಗಳು ದೇಶದ ಮೂಲೆ ಮೂಲೆಗಳಲ್ಲಿ ನಡೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಉನ್ನತ ಧ್ಯೇಯವೊಂದಕ್ಕೆ ಬದ್ಧತೆ ವ್ಯಕ್ತಪಡಿಸಲು ಉಪವಾಸ ಉತ್ತಮ ಮಾರ್ಗ. ಮೋದಿ ಅವರು ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಅಂತರರಾಷ್ಟ್ರೀಯ ಮಟ್ಟದಲ್ಲೂ ಪರಿಗಣಿತವಾಗಿರುವುದು ಸಂತಸದ ವಿಷಯ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>