<p><strong>ನವದೆಹಲಿ (ಪಿಟಿಐ): </strong>ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲಾಗುತ್ತದೆ ಎಂಬ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯಿಸಲು ಎನ್ಡಿಎ ಮಿತ್ರಪಕ್ಷ ಜೆಡಿಯು ನಿರಾಕರಿಸಿದೆ.<br /> <br /> `2014ರ ಲೋಕಸಭಾ ಚುನಾವಣೆ ಇನ್ನೂ ದೂರವಿದೆ. ಈ ಅವಧಿಯಲ್ಲಿ ಗಂಗೆಯಲ್ಲಿ ಸಾಕಷ್ಟು ನೀರು ಹರಿದು ಹೋಗುತ್ತದೆ. ಮುಂದೆ ಏನಾಗುತ್ತದೋ ನೋಡೋಣ~ ಎಂದು ಪಕ್ಷದ ಅಧ್ಯಕ್ಷ ಶರದ್ ಯಾದವ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.<br /> <br /> ಮೋದಿ ಅವರನ್ನು ಪ್ರಧಾನಿಯನ್ನಾಗಿ ಬಿಂಬಿಸಲು ನಿಮ್ಮ ಪಕ್ಷಕ್ಕೆ ತಕರಾರು ಇಲ್ಲವೇ ಎಂಬ ಪ್ರಶ್ನೆಗೆ, `ನಾನು ನೀಡಿದ ಪ್ರತಿಕ್ರಿಯೆಯಲ್ಲಿಯೇ ಎಲ್ಲವೂ ಅಡಗಿದೆ~ ಎಂದು ಅವರು ಅರ್ಥಗರ್ಭಿತವಾಗಿ ಹೇಳಿದರು.<br /> <br /> `ಯಾರೋ ನೀಡಿದ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡಬೇಕಾಗಿಲ್ಲ. ಇದು ಅವರ ಪಕ್ಷಕ್ಕೆ ಸಂಬಂಧಪಟ್ಟ ವಿಷಯ. ನೀವು ಈ ಬಗ್ಗೆ ಬಿಜೆಪಿಯನ್ನೇ ಕೇಳುವುದು ಒಳಿತು~ ಎಂದರು.<br /> <br /> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮೋದಿ ಅವರ ನಡುವಿನ ವೈಷಮ್ಯ ಸಾರ್ವಜನಿಕವಾಗಿ ಅನೇಕ ಬಾರಿ ಪ್ರಕಟಗೊಂಡಿದೆ. ನಿತೀಶ್ ಅವರೂ ಪ್ರಧಾನಿ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಇದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲಾಗುತ್ತದೆ ಎಂಬ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯಿಸಲು ಎನ್ಡಿಎ ಮಿತ್ರಪಕ್ಷ ಜೆಡಿಯು ನಿರಾಕರಿಸಿದೆ.<br /> <br /> `2014ರ ಲೋಕಸಭಾ ಚುನಾವಣೆ ಇನ್ನೂ ದೂರವಿದೆ. ಈ ಅವಧಿಯಲ್ಲಿ ಗಂಗೆಯಲ್ಲಿ ಸಾಕಷ್ಟು ನೀರು ಹರಿದು ಹೋಗುತ್ತದೆ. ಮುಂದೆ ಏನಾಗುತ್ತದೋ ನೋಡೋಣ~ ಎಂದು ಪಕ್ಷದ ಅಧ್ಯಕ್ಷ ಶರದ್ ಯಾದವ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.<br /> <br /> ಮೋದಿ ಅವರನ್ನು ಪ್ರಧಾನಿಯನ್ನಾಗಿ ಬಿಂಬಿಸಲು ನಿಮ್ಮ ಪಕ್ಷಕ್ಕೆ ತಕರಾರು ಇಲ್ಲವೇ ಎಂಬ ಪ್ರಶ್ನೆಗೆ, `ನಾನು ನೀಡಿದ ಪ್ರತಿಕ್ರಿಯೆಯಲ್ಲಿಯೇ ಎಲ್ಲವೂ ಅಡಗಿದೆ~ ಎಂದು ಅವರು ಅರ್ಥಗರ್ಭಿತವಾಗಿ ಹೇಳಿದರು.<br /> <br /> `ಯಾರೋ ನೀಡಿದ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡಬೇಕಾಗಿಲ್ಲ. ಇದು ಅವರ ಪಕ್ಷಕ್ಕೆ ಸಂಬಂಧಪಟ್ಟ ವಿಷಯ. ನೀವು ಈ ಬಗ್ಗೆ ಬಿಜೆಪಿಯನ್ನೇ ಕೇಳುವುದು ಒಳಿತು~ ಎಂದರು.<br /> <br /> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮೋದಿ ಅವರ ನಡುವಿನ ವೈಷಮ್ಯ ಸಾರ್ವಜನಿಕವಾಗಿ ಅನೇಕ ಬಾರಿ ಪ್ರಕಟಗೊಂಡಿದೆ. ನಿತೀಶ್ ಅವರೂ ಪ್ರಧಾನಿ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಇದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>