<p><strong>ಬೆಂಗಳೂರು: </strong>‘ದಲಿತರ ಮೇಲೆ ಹಲ್ಲೆ ನಡೆಸುವ ಮೊದಲು ನನ್ನನ್ನು ಗುಂಡಿಕ್ಕಿ ಕೊಲ್ಲಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಪ್ರಚಂಡ ಹಾಗೂ ಬುದ್ಧಿವಂತಿಕೆಯ ರಾಜಕೀಯದ ಸೂಚನೆ’ ಎಂದು ಚಿಂತಕ ಡಾ.ಜಿ. ರಾಮಕೃಷ್ಣ ಹೇಳಿದರು.<br /> <br /> ಸಮಕಾಲೀನ ವಿಚಾರ ವೇದಿಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗುರುವಾರ ಆಯೋಜಿಸಿದ್ದ ‘ಗೋ ರಕ್ಷಣೆಯ ರಾಜಕೀಯ’ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಗೋ ರಕ್ಷಕರ ಹೆಸರಿನಲ್ಲಿ ಮುಖವಾಡ ಧರಿಸಿರುವವರು ದಲಿತರ ಮೇಲೆ ಹಲ್ಲೆಗಳನ್ನು ನಡೆಸಿದ್ದರು. ಅಂತಹ ಗೂಂಡಾ ಪಡೆಗಳಿಗೆ ನೇರ, ಪರೋಕ್ಷ<br /> ವಾಗಿ ಬೆಂಬಲ ನೀಡಿದ್ದ ಮೋದಿ, ಈಗ ಭಾವೋದ್ವೇಗದಿಂದ ಮಾತನಾಡುತ್ತಿರುವುದು ಅವರ ಚಾಣಾಕ್ಷ ರಾಜಕೀಯ ನಡೆಯಾಗಿದೆ’ ಎಂದರು.<br /> <br /> ‘ಸತ್ತ ದನದ ಚರ್ಮ ಸುಲಿದರೆಂದು ದಲಿತರ ಮೇಲೆ ಗೋರಕ್ಷಕರು ನಡೆಸಿದ ಹಲ್ಲೆಯನ್ನು ಖಂಡಿಸಿ ಗುಜರಾತಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾ<br /> ಗುತ್ತಿದೆ. ಇದರಿಂದ ಮೌನ ಮುರಿದಿರುವ ಮೋದಿ, ಬೂಟಾಟಿಕೆಯ ಮಾತುಗಳನ್ನಾಡಿದ್ದಾರೆ’ ಎಂದು ದೂರಿದರು.<br /> <br /> ‘ಆಹಾರಕ್ಕಾಗಿ ಚಳವಳಿ ನಡೆಸಬೇಕು. ಆದರೆ, ಪರಂಪರಾನುಗತವಾಗಿ ಆಹಾರ ಪದ್ಧತಿಯೊಂದನ್ನು ರೂಢಿಸಿಕೊಂಡು ಬರುತ್ತಿರುವವರ ವಿರುದ್ಧ ಹೋರಾಟ ಮಾಡುತ್ತಿರುವುದು ವಿಪರ್ಯಾಸ. ಯಾರೋ ದನದ ಮಾಂಸ ತಿಂದರೆ ನಾವು ಮುನಿಸಿಕೊಳ್ಳಬೇಕಿಲ್ಲ. ಅವರವರ ಆಹಾರ ಪದ್ಧತಿಗಳನ್ನು ಗೌರವಿಸಬೇಕು’ ಎಂದು ಹೇಳಿದರು.<br /> <br /> ಸಾಹಿತಿ ಕೆ.ಮರುಳಸಿದ್ದಪ್ಪ ಮಾತನಾಡಿ, ‘ಗೋವಿನ ವಿಚಾರ ಇಟ್ಟುಕೊಂಡು ಬಿಜೆಪಿ ಕಳೆದ 15–20 ವರ್ಷಗಳಿಂದ ರಾಜಕೀಯ ಮಾಡುತ್ತಿದೆ. ಗೋರಕ್ಷಣೆಯನ್ನು ಮುಸ್ಲಿಮರ ವಿರುದ್ಧದ ಅಸ್ತ್ರವಾಗಿ ಪ್ರಯೋಗಿಸಿದ್ದ ಬಿಜೆಪಿ, ಈಗ ದಲಿತರ ವಿರುದ್ಧದ ಅಸ್ತ್ರವಾಗಿ ಬಳಸುತ್ತಿದೆ’ ಎಂದರು.<br /> <br /> ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಘಟಕದ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರು, ‘ಮುಂದಿನ ಲೋಕಸಭೆ, ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡಿರುವ ಬಿಜೆಪಿಗೆ ಒಂದು ಅಜೆಂಡಾ ಬೇಕಿದೆ. ಈ ಕಾರಣಕ್ಕಾಗಿ ಗೋ ರಕ್ಷಣೆ ಹೆಸರಲ್ಲಿ ರಾಜಕೀಯ ನಡೆಸುತ್ತಿದೆ. ದಲಿತರ ಮೇಲೆ ಹಲ್ಲೆ ನಡೆಸುವ ಆರ್ಎಸ್ಎಸ್ ಕಾರ್ಯಕರ್ತರ ಚರ್ಮ ಸುಲಿಯಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಅವರು, ‘ಮುಂದಿನ ದಿನಗಳಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಲ್ಲೆಗಳು ನಡೆಯಬಹುದು. ಹೀಗಾಗಿ ಮುಸ್ಲಿಮರು ಎಚ್ಚರಿಕೆಯಿಂದ ಇರಬೇಕು’ ಎಂದರು.<br /> <br /> ***<br /> ಕೇಂದ್ರ ಸರ್ಕಾರ ದಲಿತರ ಪರವಲ್ಲ. ದಲಿತರ ಮೇಲಿನ ಪ್ರೀತಿಗಿಂತ ಮತ ಬ್ಯಾಂಕ್ ರಾಜಕಾರಣ ಮೋದಿ ಅವರ ನಡೆಗಳಲ್ಲಿ ಕಂಡುಬರುತ್ತಿದೆ.<br /> <em><strong>-ಗೌರಿ ಲಂಕೇಶ್, ಪತ್ರಕರ್ತೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ದಲಿತರ ಮೇಲೆ ಹಲ್ಲೆ ನಡೆಸುವ ಮೊದಲು ನನ್ನನ್ನು ಗುಂಡಿಕ್ಕಿ ಕೊಲ್ಲಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಪ್ರಚಂಡ ಹಾಗೂ ಬುದ್ಧಿವಂತಿಕೆಯ ರಾಜಕೀಯದ ಸೂಚನೆ’ ಎಂದು ಚಿಂತಕ ಡಾ.ಜಿ. ರಾಮಕೃಷ್ಣ ಹೇಳಿದರು.<br /> <br /> ಸಮಕಾಲೀನ ವಿಚಾರ ವೇದಿಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗುರುವಾರ ಆಯೋಜಿಸಿದ್ದ ‘ಗೋ ರಕ್ಷಣೆಯ ರಾಜಕೀಯ’ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಗೋ ರಕ್ಷಕರ ಹೆಸರಿನಲ್ಲಿ ಮುಖವಾಡ ಧರಿಸಿರುವವರು ದಲಿತರ ಮೇಲೆ ಹಲ್ಲೆಗಳನ್ನು ನಡೆಸಿದ್ದರು. ಅಂತಹ ಗೂಂಡಾ ಪಡೆಗಳಿಗೆ ನೇರ, ಪರೋಕ್ಷ<br /> ವಾಗಿ ಬೆಂಬಲ ನೀಡಿದ್ದ ಮೋದಿ, ಈಗ ಭಾವೋದ್ವೇಗದಿಂದ ಮಾತನಾಡುತ್ತಿರುವುದು ಅವರ ಚಾಣಾಕ್ಷ ರಾಜಕೀಯ ನಡೆಯಾಗಿದೆ’ ಎಂದರು.<br /> <br /> ‘ಸತ್ತ ದನದ ಚರ್ಮ ಸುಲಿದರೆಂದು ದಲಿತರ ಮೇಲೆ ಗೋರಕ್ಷಕರು ನಡೆಸಿದ ಹಲ್ಲೆಯನ್ನು ಖಂಡಿಸಿ ಗುಜರಾತಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾ<br /> ಗುತ್ತಿದೆ. ಇದರಿಂದ ಮೌನ ಮುರಿದಿರುವ ಮೋದಿ, ಬೂಟಾಟಿಕೆಯ ಮಾತುಗಳನ್ನಾಡಿದ್ದಾರೆ’ ಎಂದು ದೂರಿದರು.<br /> <br /> ‘ಆಹಾರಕ್ಕಾಗಿ ಚಳವಳಿ ನಡೆಸಬೇಕು. ಆದರೆ, ಪರಂಪರಾನುಗತವಾಗಿ ಆಹಾರ ಪದ್ಧತಿಯೊಂದನ್ನು ರೂಢಿಸಿಕೊಂಡು ಬರುತ್ತಿರುವವರ ವಿರುದ್ಧ ಹೋರಾಟ ಮಾಡುತ್ತಿರುವುದು ವಿಪರ್ಯಾಸ. ಯಾರೋ ದನದ ಮಾಂಸ ತಿಂದರೆ ನಾವು ಮುನಿಸಿಕೊಳ್ಳಬೇಕಿಲ್ಲ. ಅವರವರ ಆಹಾರ ಪದ್ಧತಿಗಳನ್ನು ಗೌರವಿಸಬೇಕು’ ಎಂದು ಹೇಳಿದರು.<br /> <br /> ಸಾಹಿತಿ ಕೆ.ಮರುಳಸಿದ್ದಪ್ಪ ಮಾತನಾಡಿ, ‘ಗೋವಿನ ವಿಚಾರ ಇಟ್ಟುಕೊಂಡು ಬಿಜೆಪಿ ಕಳೆದ 15–20 ವರ್ಷಗಳಿಂದ ರಾಜಕೀಯ ಮಾಡುತ್ತಿದೆ. ಗೋರಕ್ಷಣೆಯನ್ನು ಮುಸ್ಲಿಮರ ವಿರುದ್ಧದ ಅಸ್ತ್ರವಾಗಿ ಪ್ರಯೋಗಿಸಿದ್ದ ಬಿಜೆಪಿ, ಈಗ ದಲಿತರ ವಿರುದ್ಧದ ಅಸ್ತ್ರವಾಗಿ ಬಳಸುತ್ತಿದೆ’ ಎಂದರು.<br /> <br /> ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಘಟಕದ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರು, ‘ಮುಂದಿನ ಲೋಕಸಭೆ, ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡಿರುವ ಬಿಜೆಪಿಗೆ ಒಂದು ಅಜೆಂಡಾ ಬೇಕಿದೆ. ಈ ಕಾರಣಕ್ಕಾಗಿ ಗೋ ರಕ್ಷಣೆ ಹೆಸರಲ್ಲಿ ರಾಜಕೀಯ ನಡೆಸುತ್ತಿದೆ. ದಲಿತರ ಮೇಲೆ ಹಲ್ಲೆ ನಡೆಸುವ ಆರ್ಎಸ್ಎಸ್ ಕಾರ್ಯಕರ್ತರ ಚರ್ಮ ಸುಲಿಯಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಅವರು, ‘ಮುಂದಿನ ದಿನಗಳಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಲ್ಲೆಗಳು ನಡೆಯಬಹುದು. ಹೀಗಾಗಿ ಮುಸ್ಲಿಮರು ಎಚ್ಚರಿಕೆಯಿಂದ ಇರಬೇಕು’ ಎಂದರು.<br /> <br /> ***<br /> ಕೇಂದ್ರ ಸರ್ಕಾರ ದಲಿತರ ಪರವಲ್ಲ. ದಲಿತರ ಮೇಲಿನ ಪ್ರೀತಿಗಿಂತ ಮತ ಬ್ಯಾಂಕ್ ರಾಜಕಾರಣ ಮೋದಿ ಅವರ ನಡೆಗಳಲ್ಲಿ ಕಂಡುಬರುತ್ತಿದೆ.<br /> <em><strong>-ಗೌರಿ ಲಂಕೇಶ್, ಪತ್ರಕರ್ತೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>