<p>ತುಮಕೂರು: ಸಮಾಜವನ್ನು ಹಿಂದಕ್ಕೆ ಎಳೆಯುತ್ತಿರುವ ಮೌಢ್ಯವನ್ನು ಪ್ರಶ್ನಿಸಬೇಕಿದೆ. ಹೊಟ್ಟೆ ನೋವಿಗೆ ತಾಯತ ಮದ್ದಲ್ಲ ಎಂಬುದನ್ನು ಪ್ರಶ್ನಿಸುವ ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಸೈಯದ್ ಮುಜೀಬ್ ತಿಳಿಸಿದರು.<br /> <br /> ನಗರದ ಬಿಎಸ್ಎನ್ಎಲ್ ಕಚೇರಿ ಮುಂದೆ ಭಾನುವಾರ ಮೂಢನಂಬಿಕೆ ವಿರೋಧಿ ಮಸೂದೆ ಜಾರಿಗೆ ಒತ್ತಾಯಿಸಿ, ಮಡೆಸ್ನಾನ, ಪಂಕ್ತಿಬೇಧ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.<br /> <br /> ಜಾತಿ ತಾರತಮ್ಯವನ್ನು ಪ್ರತಿಪಾದಿಸುವ ಉಡುಪಿ ಶ್ರೀಕೃಷ್ಣ ಮಠದ ಪಂಕ್ತಿ ಬೇಧ, ಕುಕ್ಕೆ ಸುಬ್ರಮಣ್ಯದಲ್ಲಿ ನಡೆಯುವ ಮಡೆ ಸ್ನಾನ ಜನರನ್ನು ಶೋಷಣೆ ಮಾಡುವ ಪದ್ಧತಿಗಳು. ಸರ್ಕಾರ ಇವುಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.<br /> <br /> ಪೇಜಾವರ ವಿಶ್ವೇಶ್ವ ತೀರ್ಥ ಸ್ವಾಮೀಜಿ ಮಡೆಸ್ನಾನಕ್ಕೆ ಊಟದ ಬದಲು ಪ್ರಸಾದ ಬಳಸಬಹುದು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಿಡುಮಾಮಿಡಿ ಸ್ವಾಮೀಜಿ ಮೂಢನಂಬಿಕೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ನಾವು ದೇವರ ನಂಬಿಕೆಗಳ ವಿರೋಧಿಗಳಲ್ಲ ಎಂದು ಹೇಳಿದರು.<br /> <br /> ನಾಗರಿಕರನ್ನು ಮೂಢನಂಬಿಕೆಗಳಿಂದ ವಂಚಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟಕ್ಕೆ ಜನರು ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿದರು.<br /> <br /> ಸಿಪಿಎಂ ಮುಖಂಡ ಷಣ್ಮುಖಪ್ಪ, ಡಿವೈಎಫ್ಐ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್. ರಾಘವೇಂದ್ರ, ಸ್ಲಂ ಜನಾಂದೋಲನ ಸಮಿತಿಯ ನರಸಿಂಹಮೂರ್ತಿ, ಕೊಳಗೇರಿ ಹಿತರಕ್ಷಣಾ ಸಮಿತಿಯ ಅಲ್ತಾಫ್ ಮೊದಲಾದವರು ಮಾತನಾಡಿದರು.<br /> <br /> ವಿವಿಧ ಸಂಘಟನೆಗಳ ಮುಖಂಡರಾದ ಜೂನಿ, ವೆಂಕಟೇಶ್, ಮೈಲಾರಪ್ಪ, ಷಾಂತಜ್, ಸ್ವಾಮಿ, ಅಜ್ಜಪ್ಪ, ಎಸ್ಎಫ್ಐ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಣ್ಣ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಸಮಾಜವನ್ನು ಹಿಂದಕ್ಕೆ ಎಳೆಯುತ್ತಿರುವ ಮೌಢ್ಯವನ್ನು ಪ್ರಶ್ನಿಸಬೇಕಿದೆ. ಹೊಟ್ಟೆ ನೋವಿಗೆ ತಾಯತ ಮದ್ದಲ್ಲ ಎಂಬುದನ್ನು ಪ್ರಶ್ನಿಸುವ ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಸೈಯದ್ ಮುಜೀಬ್ ತಿಳಿಸಿದರು.<br /> <br /> ನಗರದ ಬಿಎಸ್ಎನ್ಎಲ್ ಕಚೇರಿ ಮುಂದೆ ಭಾನುವಾರ ಮೂಢನಂಬಿಕೆ ವಿರೋಧಿ ಮಸೂದೆ ಜಾರಿಗೆ ಒತ್ತಾಯಿಸಿ, ಮಡೆಸ್ನಾನ, ಪಂಕ್ತಿಬೇಧ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.<br /> <br /> ಜಾತಿ ತಾರತಮ್ಯವನ್ನು ಪ್ರತಿಪಾದಿಸುವ ಉಡುಪಿ ಶ್ರೀಕೃಷ್ಣ ಮಠದ ಪಂಕ್ತಿ ಬೇಧ, ಕುಕ್ಕೆ ಸುಬ್ರಮಣ್ಯದಲ್ಲಿ ನಡೆಯುವ ಮಡೆ ಸ್ನಾನ ಜನರನ್ನು ಶೋಷಣೆ ಮಾಡುವ ಪದ್ಧತಿಗಳು. ಸರ್ಕಾರ ಇವುಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.<br /> <br /> ಪೇಜಾವರ ವಿಶ್ವೇಶ್ವ ತೀರ್ಥ ಸ್ವಾಮೀಜಿ ಮಡೆಸ್ನಾನಕ್ಕೆ ಊಟದ ಬದಲು ಪ್ರಸಾದ ಬಳಸಬಹುದು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಿಡುಮಾಮಿಡಿ ಸ್ವಾಮೀಜಿ ಮೂಢನಂಬಿಕೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ನಾವು ದೇವರ ನಂಬಿಕೆಗಳ ವಿರೋಧಿಗಳಲ್ಲ ಎಂದು ಹೇಳಿದರು.<br /> <br /> ನಾಗರಿಕರನ್ನು ಮೂಢನಂಬಿಕೆಗಳಿಂದ ವಂಚಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟಕ್ಕೆ ಜನರು ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿದರು.<br /> <br /> ಸಿಪಿಎಂ ಮುಖಂಡ ಷಣ್ಮುಖಪ್ಪ, ಡಿವೈಎಫ್ಐ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್. ರಾಘವೇಂದ್ರ, ಸ್ಲಂ ಜನಾಂದೋಲನ ಸಮಿತಿಯ ನರಸಿಂಹಮೂರ್ತಿ, ಕೊಳಗೇರಿ ಹಿತರಕ್ಷಣಾ ಸಮಿತಿಯ ಅಲ್ತಾಫ್ ಮೊದಲಾದವರು ಮಾತನಾಡಿದರು.<br /> <br /> ವಿವಿಧ ಸಂಘಟನೆಗಳ ಮುಖಂಡರಾದ ಜೂನಿ, ವೆಂಕಟೇಶ್, ಮೈಲಾರಪ್ಪ, ಷಾಂತಜ್, ಸ್ವಾಮಿ, ಅಜ್ಜಪ್ಪ, ಎಸ್ಎಫ್ಐ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಣ್ಣ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>