<p><strong>ಬೆಂಗಳೂರು:`</strong>ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಕ್ರಾಂತಿ ಮಾಡಬೇಕಿಲ್ಲ, ಬದಲಿಗೆ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು~ ಎಂದು ರಾಷ್ಟ್ರೀಯ ಪಠ್ಯಕ್ರಮ ಪರಿಷ್ಕರಣೆ ಹಾಗೂ ಪಠ್ಯಪುಸ್ತಕ ರಚನಾ ಸಂಯೋಜಕ ಜೆ.ಎಸ್.ಮೂಡಂಬಡಿತ್ತಾಯ ಹೇಳಿದರು.<br /> <br /> ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘವು ನಗರದ ಕನ್ನಡ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ- ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. <br /> `ಶಿಕ್ಷಣವೆಂಬುದು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ಮಕ್ಕಳಲ್ಲಿರುವ ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಪಠ್ಯೇತರ ವಿಚಾರಗಳಿಗೆ ಒತ್ತು ನೀಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕಲೆಯು ವ್ಯಾಪಾರದ ವಸ್ತುವಾಗದೇ ವ್ಯಕ್ತಿತ್ವ ವಿಕಸನದ ಮಾರ್ಗವಾಗಿ ರೂಪಗೊಳ್ಳಬೇಕು~ ಎಂದು ಸಲಹೆ ನೀಡಿದರು.<br /> <br /> ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಎನ್.ಬಿ.ಪಾಟೀಲ, `ಚಿತ್ರಕಲಾ ವಿಷಯ ಕೇವಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾಗದೇ, ಪ್ರಾಥಮಿಕ ಶಾಲೆಯ ಪಠ್ಯದಲ್ಲಿ ಚಿತ್ರಕಲಾ ವಿಷಯವನ್ನು ಅಳವಡಿಸಬೇಕು. ಆಗ ಮಾತ್ರ ಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ~ ಎಂದು ತಿಳಿಸಿದರು. <br /> <br /> `ಪಠ್ಯಪುಸ್ತಕದಷ್ಟೆ ದೈಹಿಕ ಮತ್ತು ಕಲಾ ಶಿಕ್ಷಣ ಪ್ರಮುಖವಾಗಿದ್ದು, ಬಹುತೇಕ ಶಾಲೆಗಳಲ್ಲಿ ಅರೆಕಾಲಿಕರಾಗಿ ಸೇವೆ ಸಲ್ಲಿಸುತ್ತಿರುವ ಚಿತ್ರಕಲಾ ಶಿಕ್ಷಕರನ್ನು ದೀರ್ಘಾವಧಿಗೆ ನೇಮಿಸಿಕೊಳ್ಳಬೇಕು~ ಎಂದು ಒತ್ತಾಯಿಸಿದರು. <br /> ಚಿತ್ರಕಲಾ ಶಿಕ್ಷಕರಿಗೆ `ಶ್ರಮ ಜೀವಿ~ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಿತ್ರಕಲಾ ಶಿಕ್ಷಣ ಪಠ್ಯವಸ್ತು ರಚನಾ ಸಮಿತಿಯ ಅಧ್ಯಕ್ಷ ಐ.ಎನ್.ಜೋಶಿ, ಲಲಿತಕಲಾ ಅಕಾಡೆಮಿ ಅಧ್ಯಕ್ಷ ಚಿ.ಸು.ಕೃಷ್ಣಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:`</strong>ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಕ್ರಾಂತಿ ಮಾಡಬೇಕಿಲ್ಲ, ಬದಲಿಗೆ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು~ ಎಂದು ರಾಷ್ಟ್ರೀಯ ಪಠ್ಯಕ್ರಮ ಪರಿಷ್ಕರಣೆ ಹಾಗೂ ಪಠ್ಯಪುಸ್ತಕ ರಚನಾ ಸಂಯೋಜಕ ಜೆ.ಎಸ್.ಮೂಡಂಬಡಿತ್ತಾಯ ಹೇಳಿದರು.<br /> <br /> ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘವು ನಗರದ ಕನ್ನಡ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ- ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. <br /> `ಶಿಕ್ಷಣವೆಂಬುದು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ಮಕ್ಕಳಲ್ಲಿರುವ ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಪಠ್ಯೇತರ ವಿಚಾರಗಳಿಗೆ ಒತ್ತು ನೀಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕಲೆಯು ವ್ಯಾಪಾರದ ವಸ್ತುವಾಗದೇ ವ್ಯಕ್ತಿತ್ವ ವಿಕಸನದ ಮಾರ್ಗವಾಗಿ ರೂಪಗೊಳ್ಳಬೇಕು~ ಎಂದು ಸಲಹೆ ನೀಡಿದರು.<br /> <br /> ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಎನ್.ಬಿ.ಪಾಟೀಲ, `ಚಿತ್ರಕಲಾ ವಿಷಯ ಕೇವಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾಗದೇ, ಪ್ರಾಥಮಿಕ ಶಾಲೆಯ ಪಠ್ಯದಲ್ಲಿ ಚಿತ್ರಕಲಾ ವಿಷಯವನ್ನು ಅಳವಡಿಸಬೇಕು. ಆಗ ಮಾತ್ರ ಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ~ ಎಂದು ತಿಳಿಸಿದರು. <br /> <br /> `ಪಠ್ಯಪುಸ್ತಕದಷ್ಟೆ ದೈಹಿಕ ಮತ್ತು ಕಲಾ ಶಿಕ್ಷಣ ಪ್ರಮುಖವಾಗಿದ್ದು, ಬಹುತೇಕ ಶಾಲೆಗಳಲ್ಲಿ ಅರೆಕಾಲಿಕರಾಗಿ ಸೇವೆ ಸಲ್ಲಿಸುತ್ತಿರುವ ಚಿತ್ರಕಲಾ ಶಿಕ್ಷಕರನ್ನು ದೀರ್ಘಾವಧಿಗೆ ನೇಮಿಸಿಕೊಳ್ಳಬೇಕು~ ಎಂದು ಒತ್ತಾಯಿಸಿದರು. <br /> ಚಿತ್ರಕಲಾ ಶಿಕ್ಷಕರಿಗೆ `ಶ್ರಮ ಜೀವಿ~ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಿತ್ರಕಲಾ ಶಿಕ್ಷಣ ಪಠ್ಯವಸ್ತು ರಚನಾ ಸಮಿತಿಯ ಅಧ್ಯಕ್ಷ ಐ.ಎನ್.ಜೋಶಿ, ಲಲಿತಕಲಾ ಅಕಾಡೆಮಿ ಅಧ್ಯಕ್ಷ ಚಿ.ಸು.ಕೃಷ್ಣಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>