<p><strong>ಗುಲ್ಬರ್ಗ: </strong>ರಾಜ್ಯದಲ್ಲಿನ 5 ಜಿಲ್ಲಾ ಕೇಂದ್ರ ಗಳಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೆ ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಮಾಡಿದ್ದು, ಈ ಆದೇಶ ಮೇರೆಗೆ ಎಲ್ಲ ಉಪನ್ಯಾಸಕರು ಹಾಗೂ ಪ್ರಾಚಾರ್ಯರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಂ. ಸಾಳೂಂಕೆ ತಿಳಿಸಿದ್ದಾರೆ.<br /> <br /> ಪ್ರಾಚಾರ್ಯ ಹಾಗೂ ಉಪನ್ಯಾಸಕರ ಸಂಘದಿಂದ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ನಡೆಸಲಾಗುತ್ತಿರುವುದರಿಂದ ಮೌಲ್ಯಮಾಪನ ಕಾರ್ಯ ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಅಡಚಣೆ ಉಂಟಾಗುತ್ತಿದೆ. <br /> <br /> ಮುಷ್ಕರ ನಿರತ ಪ್ರಾಚಾರ್ಯರರು ಹಾಗೂ ಉಪನ್ಯಾಸಕರು ತಕ್ಷಣವೇ ಮೌಲ್ಯಮಾಪನ ಕಾರ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಮೌಲ್ಯಮಾಪನ ಕಾರ್ಯ ಮುಕ್ತಾಯಗೊಳಿಸಬೇಕು. ಇಲ್ಲದೆ ಇದ್ದಲ್ಲಿ ಮುಷ್ಕರ ನಿರತ ಸಿಬ್ಬಂದಿ ವಿರುದ್ಧ ಇಲಾಖೆಯ ನಿಯಮನುಸಾರ ಶಿಸ್ತಿನ ಕ್ರಮ ಜರುಗಿಸುತ್ತದೆ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ: </strong>ರಾಜ್ಯದಲ್ಲಿನ 5 ಜಿಲ್ಲಾ ಕೇಂದ್ರ ಗಳಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೆ ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಮಾಡಿದ್ದು, ಈ ಆದೇಶ ಮೇರೆಗೆ ಎಲ್ಲ ಉಪನ್ಯಾಸಕರು ಹಾಗೂ ಪ್ರಾಚಾರ್ಯರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಂ. ಸಾಳೂಂಕೆ ತಿಳಿಸಿದ್ದಾರೆ.<br /> <br /> ಪ್ರಾಚಾರ್ಯ ಹಾಗೂ ಉಪನ್ಯಾಸಕರ ಸಂಘದಿಂದ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ನಡೆಸಲಾಗುತ್ತಿರುವುದರಿಂದ ಮೌಲ್ಯಮಾಪನ ಕಾರ್ಯ ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಅಡಚಣೆ ಉಂಟಾಗುತ್ತಿದೆ. <br /> <br /> ಮುಷ್ಕರ ನಿರತ ಪ್ರಾಚಾರ್ಯರರು ಹಾಗೂ ಉಪನ್ಯಾಸಕರು ತಕ್ಷಣವೇ ಮೌಲ್ಯಮಾಪನ ಕಾರ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಮೌಲ್ಯಮಾಪನ ಕಾರ್ಯ ಮುಕ್ತಾಯಗೊಳಿಸಬೇಕು. ಇಲ್ಲದೆ ಇದ್ದಲ್ಲಿ ಮುಷ್ಕರ ನಿರತ ಸಿಬ್ಬಂದಿ ವಿರುದ್ಧ ಇಲಾಖೆಯ ನಿಯಮನುಸಾರ ಶಿಸ್ತಿನ ಕ್ರಮ ಜರುಗಿಸುತ್ತದೆ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>