<p><strong>ಚಿತ್ರದುರ್ಗ: </strong>ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಚುರುಕುಗೊಳ್ಳುತ್ತಿದೆ. ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ, ಅಭ್ಯರ್ಥಿಗಳು ಬಹುದಿನಗಳಿಂದಲೇ ಪ್ರಚಾರ ಕಾರ್ಯದಲ್ಲಿ ತೊಡಗಿರುವುದರಿಂದ ಚುನಾವಣಾ ಕಣ ರಂಗೇರಿದೆ.<br /> <br /> ಶಿಕ್ಷಕರ ಮನವೊಲಿಸಲು ಅಭ್ಯರ್ಥಿಗಳು ಎಲ್ಲ ರೀತಿಯ ಹರಸಾಹಸ ಮಾಡುತ್ತ್ದ್ದಿದು, ಹತ್ತು ಹಲವು ರೀತಿಯ ಆಮಿಷಗಳನ್ನು ತೋರಿಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗ ಆರಂಭ ಆಗಿರುವುದರಿಂದ ಅಭ್ಯರ್ಥಿಗಳು ಪ್ರತಿನಿತ್ಯ ಮೌಲ್ಯಮಾಪನ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ.<br /> <br /> ಶಿಕ್ಷಕರನ್ನು ಸುಲಭವಾಗಿ ಭೇಟಿಯಾಗಬಹುದು ಎನ್ನುವ ಲೆಕ್ಕಾಚಾರ ಅಭ್ಯರ್ಥಿಗಳದ್ದು. ಎಲ್ಲ ಸ್ಥಳಗಳಿಗೆ ತೆರಳುವ ಬದಲು ಒಂದೇ ಸ್ಥಳದಲ್ಲಿ ಬಹುತೇಕ ಶಿಕ್ಷಕರನ್ನು ಮುಖಾಮುಖಿ ಭೇಟಿಯಾಗಬಹುದು ಎನ್ನುವುದು ಅಭ್ಯರ್ಥಿಗಳ ಅಭಿಪ್ರಾಯ.<br /> <br /> ಇದರಿಂದಾಗಿ ಪ್ರತಿದಿನ ಮೌಲ್ಯಮಾಪನ ಆರಂಭವಾಗುವ ಮುನ್ನವೇ ಅಭ್ಯರ್ಥಿಗಳು ಮೌಲ್ಯಮಾಪನ ಕೇಂದ್ರಗಳ ಮುಂದೆ ಹಾಜರಾಗಿ ಶಿಕ್ಷಕರಿಂದ ಮತಯಾಚಿಸುತ್ತಿದ್ದಾರೆ. ತಮ್ಮ ವೈಯಕ್ತಿಕ ವಿವರಗಳ ಕರಪತ್ರಗಳನ್ನು ನೀಡಿ ತಮ್ಮನ್ನು ಬೆಂಬಲಿಸುವಂತೆ ಕೋರುವ ದೃಶ್ಯ ಸಾಮಾನ್ಯವಾಗುತ್ತಿದೆ.<br /> <br /> ನಗರದಲ್ಲಿ 6 ಶಾಲೆಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ. ವಿದ್ಯಾವಿಕಾಸ, ಸಂತ ಜೋಸೆಫರ ಕಾನ್ವೆಂಟ್, ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ, ವಾಸವಿ ಶಾಲೆ ಹಾಗೂ ಬಾಲಕರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದೆ.<br /> <br /> ಗುರುವಾರ ಇನ್ನೂ ಒಂದು ಹೆಜ್ಜೆ ಮುಂದಿಟ್ಟ ಅಭ್ಯರ್ಥಿಯೊಬ್ಬರು, ಶಾಲೆಯೊಂದರ ಶತಮಾನೋತ್ಸವದ ಹೆಸರಿನಲ್ಲಿ ಶಿಕ್ಷಕರಿಗೆ ಸಿಹಿ ಊಟ ಆಯೋಜಿಸಿದ್ದರು. ಮೌಲ್ಯಮಾಪನ ಕೇಂದ್ರಗಳಿಗೆ ಶಾಲೆಗೆ ತೆರಳಲು ಮತ್ತು ವಾಪಸ್ ಆಗಮಿಸಲು ಬಸ್ ವ್ಯವಸ್ಥೆ ಸಹ ಮಾಡಲಾಗಿತ್ತು.ಇನ್ನೂ ನಾಲ್ಕೈದು ದಿನಗಳ ಕಾಲ ಮೌಲ್ಯಮಾಪನ ನಡೆಯಲಿದ್ದು, ಈ ಸನ್ನಿವೇಶ ಪುನರಾವರ್ತನೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಚುರುಕುಗೊಳ್ಳುತ್ತಿದೆ. ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ, ಅಭ್ಯರ್ಥಿಗಳು ಬಹುದಿನಗಳಿಂದಲೇ ಪ್ರಚಾರ ಕಾರ್ಯದಲ್ಲಿ ತೊಡಗಿರುವುದರಿಂದ ಚುನಾವಣಾ ಕಣ ರಂಗೇರಿದೆ.<br /> <br /> ಶಿಕ್ಷಕರ ಮನವೊಲಿಸಲು ಅಭ್ಯರ್ಥಿಗಳು ಎಲ್ಲ ರೀತಿಯ ಹರಸಾಹಸ ಮಾಡುತ್ತ್ದ್ದಿದು, ಹತ್ತು ಹಲವು ರೀತಿಯ ಆಮಿಷಗಳನ್ನು ತೋರಿಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗ ಆರಂಭ ಆಗಿರುವುದರಿಂದ ಅಭ್ಯರ್ಥಿಗಳು ಪ್ರತಿನಿತ್ಯ ಮೌಲ್ಯಮಾಪನ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ.<br /> <br /> ಶಿಕ್ಷಕರನ್ನು ಸುಲಭವಾಗಿ ಭೇಟಿಯಾಗಬಹುದು ಎನ್ನುವ ಲೆಕ್ಕಾಚಾರ ಅಭ್ಯರ್ಥಿಗಳದ್ದು. ಎಲ್ಲ ಸ್ಥಳಗಳಿಗೆ ತೆರಳುವ ಬದಲು ಒಂದೇ ಸ್ಥಳದಲ್ಲಿ ಬಹುತೇಕ ಶಿಕ್ಷಕರನ್ನು ಮುಖಾಮುಖಿ ಭೇಟಿಯಾಗಬಹುದು ಎನ್ನುವುದು ಅಭ್ಯರ್ಥಿಗಳ ಅಭಿಪ್ರಾಯ.<br /> <br /> ಇದರಿಂದಾಗಿ ಪ್ರತಿದಿನ ಮೌಲ್ಯಮಾಪನ ಆರಂಭವಾಗುವ ಮುನ್ನವೇ ಅಭ್ಯರ್ಥಿಗಳು ಮೌಲ್ಯಮಾಪನ ಕೇಂದ್ರಗಳ ಮುಂದೆ ಹಾಜರಾಗಿ ಶಿಕ್ಷಕರಿಂದ ಮತಯಾಚಿಸುತ್ತಿದ್ದಾರೆ. ತಮ್ಮ ವೈಯಕ್ತಿಕ ವಿವರಗಳ ಕರಪತ್ರಗಳನ್ನು ನೀಡಿ ತಮ್ಮನ್ನು ಬೆಂಬಲಿಸುವಂತೆ ಕೋರುವ ದೃಶ್ಯ ಸಾಮಾನ್ಯವಾಗುತ್ತಿದೆ.<br /> <br /> ನಗರದಲ್ಲಿ 6 ಶಾಲೆಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ. ವಿದ್ಯಾವಿಕಾಸ, ಸಂತ ಜೋಸೆಫರ ಕಾನ್ವೆಂಟ್, ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ, ವಾಸವಿ ಶಾಲೆ ಹಾಗೂ ಬಾಲಕರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದೆ.<br /> <br /> ಗುರುವಾರ ಇನ್ನೂ ಒಂದು ಹೆಜ್ಜೆ ಮುಂದಿಟ್ಟ ಅಭ್ಯರ್ಥಿಯೊಬ್ಬರು, ಶಾಲೆಯೊಂದರ ಶತಮಾನೋತ್ಸವದ ಹೆಸರಿನಲ್ಲಿ ಶಿಕ್ಷಕರಿಗೆ ಸಿಹಿ ಊಟ ಆಯೋಜಿಸಿದ್ದರು. ಮೌಲ್ಯಮಾಪನ ಕೇಂದ್ರಗಳಿಗೆ ಶಾಲೆಗೆ ತೆರಳಲು ಮತ್ತು ವಾಪಸ್ ಆಗಮಿಸಲು ಬಸ್ ವ್ಯವಸ್ಥೆ ಸಹ ಮಾಡಲಾಗಿತ್ತು.ಇನ್ನೂ ನಾಲ್ಕೈದು ದಿನಗಳ ಕಾಲ ಮೌಲ್ಯಮಾಪನ ನಡೆಯಲಿದ್ದು, ಈ ಸನ್ನಿವೇಶ ಪುನರಾವರ್ತನೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>