<p><strong>ಶಿವಮೊಗ್ಗ: </strong>ಯಕ್ಷಗಾನ ಕಲೆಗೆ ಸ್ಥಳಿಯ ಪ್ರತಿಭೆಗಳ ಸಹಕಾರ ಹಾಗೂ ಪ್ರೋತ್ಸಾಹದ ಅಗತ್ಯ ಎಂದು ಕೊಂಕಣಿ ಅಕಾಡೆಮಿಯ ಮಾಜಿ ಸದಸ್ಯ ಬಿ.ಎಸ್.ಕಾಮತ್ ಅಭಿಪ್ರಾಯಪಟ್ಟರು.<br /> <br /> ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಶ್ರೀಮಾತಾ ಮಹಿಳಾ ಯಕ್ಷಕಲಾ ಟ್ರಸ್ಟ್ ಹಮ್ಮಿಕೊಂಡಿದ್ದ ಯಕ್ಷಕಲಾ ಸಿಂಚನ–3 ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಯಕ್ಷಗಾನ ಕಲೆಯನ್ನು ಆರಾಧಿಸುವ ಸ್ಥಳಿಯ ಪ್ರತಿಭೆಗಳು ಹೆಚ್ಚು ಬೇಕಾಗಿದ್ದು, ಈ ಕಲೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಶಕ್ತಿ ಅವರಲ್ಲಿರುತ್ತದೆ ಎಂದರು.<br /> <br /> ಮಲೆನಾಡಿನಲ್ಲಿರುವ ಯಕ್ಷಗಾನ ಸಂಸ್ಕೃತಿಯನ್ನು ಉಳಿಸಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಲೆಯ ಆರಾಧಕರು ಹೆಚ್ಚಾಗುತ್ತಿದ್ದಾರೆ ಎಂದು ತಿಳಿಸಿದರು. ನಂತರ ಸಿದ್ಧಾಪುರದ ವೇಷಭೂಷಣ ನಿರ್ಮಾತೃ ಎಂ.ಆರ್.ನಾಯಕ್ ಅವರನ್ನು ಸನ್ಮಾನಿಸಲಾಯಿತು. ರವೀಂದ್ರನಗರ ಗಣಪತಿ ದೇವಸ್ಥಾನದ ಅರ್ಚಕ ಅ.ಪ.ರಾಮಭಟ್ಟ ಉದ್ಘಾಟಿಸಿದರು.ಶ್ರೀಮಾತಾ ಮಹಿಳಾ ಯಕ್ಷಕಲಾ ಟ್ರಸ್ಟ್ ನ ಅಧ್ಯಕ್ಷೆ ರಮಾಶಾಸ್ತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಯಕ್ಷಗಾನ ಕಲೆಗೆ ಸ್ಥಳಿಯ ಪ್ರತಿಭೆಗಳ ಸಹಕಾರ ಹಾಗೂ ಪ್ರೋತ್ಸಾಹದ ಅಗತ್ಯ ಎಂದು ಕೊಂಕಣಿ ಅಕಾಡೆಮಿಯ ಮಾಜಿ ಸದಸ್ಯ ಬಿ.ಎಸ್.ಕಾಮತ್ ಅಭಿಪ್ರಾಯಪಟ್ಟರು.<br /> <br /> ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಶ್ರೀಮಾತಾ ಮಹಿಳಾ ಯಕ್ಷಕಲಾ ಟ್ರಸ್ಟ್ ಹಮ್ಮಿಕೊಂಡಿದ್ದ ಯಕ್ಷಕಲಾ ಸಿಂಚನ–3 ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಯಕ್ಷಗಾನ ಕಲೆಯನ್ನು ಆರಾಧಿಸುವ ಸ್ಥಳಿಯ ಪ್ರತಿಭೆಗಳು ಹೆಚ್ಚು ಬೇಕಾಗಿದ್ದು, ಈ ಕಲೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಶಕ್ತಿ ಅವರಲ್ಲಿರುತ್ತದೆ ಎಂದರು.<br /> <br /> ಮಲೆನಾಡಿನಲ್ಲಿರುವ ಯಕ್ಷಗಾನ ಸಂಸ್ಕೃತಿಯನ್ನು ಉಳಿಸಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಲೆಯ ಆರಾಧಕರು ಹೆಚ್ಚಾಗುತ್ತಿದ್ದಾರೆ ಎಂದು ತಿಳಿಸಿದರು. ನಂತರ ಸಿದ್ಧಾಪುರದ ವೇಷಭೂಷಣ ನಿರ್ಮಾತೃ ಎಂ.ಆರ್.ನಾಯಕ್ ಅವರನ್ನು ಸನ್ಮಾನಿಸಲಾಯಿತು. ರವೀಂದ್ರನಗರ ಗಣಪತಿ ದೇವಸ್ಥಾನದ ಅರ್ಚಕ ಅ.ಪ.ರಾಮಭಟ್ಟ ಉದ್ಘಾಟಿಸಿದರು.ಶ್ರೀಮಾತಾ ಮಹಿಳಾ ಯಕ್ಷಕಲಾ ಟ್ರಸ್ಟ್ ನ ಅಧ್ಯಕ್ಷೆ ರಮಾಶಾಸ್ತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>