<p><strong>ಬೆಂಗಳೂರು (ಪಿಟಿಐ):</strong> ಜಮೀನು ಡಿ ನೋಟಿಫೈ ಮಾಡಿದ ಎರಡು ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಲೋಕಾಯುಕ್ತ ನ್ಯಾಯಾಲಯ ಸೋಮವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.</p>.<p>ಲೋಕಾಯುಕ್ತ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಯಡಿಯೂರಪ್ಪ ಹಾಗೂ ಮಕ್ಕಳಾದ ರಾಘವೇಂದ್ರ, ವಿಜೇಂದ್ರ, ಅಳಿಯ ಸೋಹನ್ ಕುಮಾರ್ ಮತ್ತು ವಸತಿ ಖಾತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಮಾರ್ಚ್ 24ರಂದು ತಪ್ಪದೇ ನ್ಯಾಯಾಲಯದಲ್ಲಿ ಹಾಜರು ಇರಬೇಕೆಂದು ಆದೇಶಿಸಿದ್ದಾರೆ.</p>.<p>ಕಳೆದ ತಿಂಗಳು ಆರಂಭವಾದ ಪ್ರಕರಣಗಳ ವಿಚಾರಣೆಗೆ ಮೂರು ಬಾರಿಯೂ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೋಕಾಯುಕ್ತ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದಾರೆ.</p>.<p>ಸಿರಾಜಿನ್ ಭಾಷಾ ದಾಖಲಿಸಿದ ಈ ಎರಡು ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ, ಗೈರು ಹಾಜರಾಗಿದ್ದ ಯಡಿಯೂರಪ್ಪ ಅವರು ನಂತರ ಬಂಧನದ ಬೀತಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ವಿಚಾರಣೆ ನಡೆದಾಗ ತಾವೇ ಬಂದು ನ್ಯಾಯಾಲಯಕ್ಕೆ ಶರಣಾಗಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ):</strong> ಜಮೀನು ಡಿ ನೋಟಿಫೈ ಮಾಡಿದ ಎರಡು ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಲೋಕಾಯುಕ್ತ ನ್ಯಾಯಾಲಯ ಸೋಮವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.</p>.<p>ಲೋಕಾಯುಕ್ತ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಯಡಿಯೂರಪ್ಪ ಹಾಗೂ ಮಕ್ಕಳಾದ ರಾಘವೇಂದ್ರ, ವಿಜೇಂದ್ರ, ಅಳಿಯ ಸೋಹನ್ ಕುಮಾರ್ ಮತ್ತು ವಸತಿ ಖಾತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಮಾರ್ಚ್ 24ರಂದು ತಪ್ಪದೇ ನ್ಯಾಯಾಲಯದಲ್ಲಿ ಹಾಜರು ಇರಬೇಕೆಂದು ಆದೇಶಿಸಿದ್ದಾರೆ.</p>.<p>ಕಳೆದ ತಿಂಗಳು ಆರಂಭವಾದ ಪ್ರಕರಣಗಳ ವಿಚಾರಣೆಗೆ ಮೂರು ಬಾರಿಯೂ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೋಕಾಯುಕ್ತ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದಾರೆ.</p>.<p>ಸಿರಾಜಿನ್ ಭಾಷಾ ದಾಖಲಿಸಿದ ಈ ಎರಡು ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ, ಗೈರು ಹಾಜರಾಗಿದ್ದ ಯಡಿಯೂರಪ್ಪ ಅವರು ನಂತರ ಬಂಧನದ ಬೀತಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ವಿಚಾರಣೆ ನಡೆದಾಗ ತಾವೇ ಬಂದು ನ್ಯಾಯಾಲಯಕ್ಕೆ ಶರಣಾಗಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>