<p><strong>ಯಲಹಂಕ:</strong> ಕಟ್ಟಡ ನಿರ್ಮಿಸುವ ಸಲುವಾಗಿ ಪಿಲ್ಲರ್ ನಿಲ್ಲಿಸಲು ಗುಂಡಿಗಳನ್ನು ಅಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಐವರು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಬಾಗಲೂರು ಮುಖ್ಯರಸ್ತೆಯ ಶಿವಪುರದಲ್ಲಿ ಭಾನುವಾರ ನಡೆದಿದೆ.<br /> <br /> ಮೂಲತಃ ಆಂಧ್ರಪ್ರದೇಶದ ಗೋರಂಟ್ಲಾ ತಾಲ್ಲೂಕಿನ ಪೂಲಚೆಟ್ಟಿಪಲ್ಲಿ ಗ್ರಾಮದ ನಿವಾಸಿಗಳಾದ ಸುಬ್ಬಪ್ಪಯ್ಯ (55), ವೆಂಕಟರಮಣಯ್ಯ (55), ಗಂಗೊಳ್ಯಪ್ಪ (45), ರತ್ನಮ್ಮ (40) ಹಾಗೂ ರಮಾದೇವಿ (30) ಗಾಯಗೊಂಡವರು.<br /> <br /> ಶಿವಪುರದ ಶಿವನ ದೇವಸ್ಥಾನದ ಹಿಂಭಾಗದಲ್ಲಿ ಗಿರಿಗೌಡ ಎಂಬುವರಿಗೆ ಸೇರಿದ ನಿವೇಶನವಿದೆ. ಆ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಇತ್ತೀಚೆಗೆ ಜೆಸಿಬಿ ಯಂತ್ರದಿಂದ ಸುಮಾರು 10 ಅಡಿಗಳಷ್ಟು ಆಳದ ಗುಂಡಿ ತೆಗೆಯಲಾಗಿತ್ತು. ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ 23 ಮಂದಿ ಕಾರ್ಮಿಕರು ಪಿಲ್ಲರ್ ನಿಲ್ಲಿಸಲು ಗುಂಡಿಗಳನ್ನು ತೆಗೆಯುತ್ತಿದ್ದರು. ಈ ವೇಳೆ ಮಣ್ಣು ಕುಸಿದು ಅವರ ಮೇಲೆ ಬಿದ್ದಿದೆ. ಕೂಡಲೇ ಸ್ಥಳೀಯರು ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆದು, ಪೊಲೀಸರ ನೆರವಿನಿಂದ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಘಟನೆಯಲ್ಲಿ ಸುಬ್ಬಪ್ಪಯ್ಯ ಅವರ ಎಡಗಾಲಿನ ಮೂಳೆ ಮತ್ತು ರಮಾದೇವಿ ಅವರ ಬಲಗಾಲು ಮುರಿದಿದೆ. ವೆಂಕಟರಮಣ ಅವರ ಹೊಟ್ಟೆ ಮೇಲೆ ಕಲ್ಲು ಬಿದ್ದಿರುವುದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಕಟ್ಟಡ ನಿರ್ಮಿಸುವ ಸಲುವಾಗಿ ಪಿಲ್ಲರ್ ನಿಲ್ಲಿಸಲು ಗುಂಡಿಗಳನ್ನು ಅಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಐವರು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಬಾಗಲೂರು ಮುಖ್ಯರಸ್ತೆಯ ಶಿವಪುರದಲ್ಲಿ ಭಾನುವಾರ ನಡೆದಿದೆ.<br /> <br /> ಮೂಲತಃ ಆಂಧ್ರಪ್ರದೇಶದ ಗೋರಂಟ್ಲಾ ತಾಲ್ಲೂಕಿನ ಪೂಲಚೆಟ್ಟಿಪಲ್ಲಿ ಗ್ರಾಮದ ನಿವಾಸಿಗಳಾದ ಸುಬ್ಬಪ್ಪಯ್ಯ (55), ವೆಂಕಟರಮಣಯ್ಯ (55), ಗಂಗೊಳ್ಯಪ್ಪ (45), ರತ್ನಮ್ಮ (40) ಹಾಗೂ ರಮಾದೇವಿ (30) ಗಾಯಗೊಂಡವರು.<br /> <br /> ಶಿವಪುರದ ಶಿವನ ದೇವಸ್ಥಾನದ ಹಿಂಭಾಗದಲ್ಲಿ ಗಿರಿಗೌಡ ಎಂಬುವರಿಗೆ ಸೇರಿದ ನಿವೇಶನವಿದೆ. ಆ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಇತ್ತೀಚೆಗೆ ಜೆಸಿಬಿ ಯಂತ್ರದಿಂದ ಸುಮಾರು 10 ಅಡಿಗಳಷ್ಟು ಆಳದ ಗುಂಡಿ ತೆಗೆಯಲಾಗಿತ್ತು. ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ 23 ಮಂದಿ ಕಾರ್ಮಿಕರು ಪಿಲ್ಲರ್ ನಿಲ್ಲಿಸಲು ಗುಂಡಿಗಳನ್ನು ತೆಗೆಯುತ್ತಿದ್ದರು. ಈ ವೇಳೆ ಮಣ್ಣು ಕುಸಿದು ಅವರ ಮೇಲೆ ಬಿದ್ದಿದೆ. ಕೂಡಲೇ ಸ್ಥಳೀಯರು ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆದು, ಪೊಲೀಸರ ನೆರವಿನಿಂದ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಘಟನೆಯಲ್ಲಿ ಸುಬ್ಬಪ್ಪಯ್ಯ ಅವರ ಎಡಗಾಲಿನ ಮೂಳೆ ಮತ್ತು ರಮಾದೇವಿ ಅವರ ಬಲಗಾಲು ಮುರಿದಿದೆ. ವೆಂಕಟರಮಣ ಅವರ ಹೊಟ್ಟೆ ಮೇಲೆ ಕಲ್ಲು ಬಿದ್ದಿರುವುದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>