<p>ವಿಜಾಪುರ: `ವಿವಾಹವೆಂದರೆ ಗಂಡು-ಹೆಣ್ಣು ಒಟ್ಟಿಗೆ ಸೇರಿ ಹೇಗೋ ಬದುಕುವುದಲ್ಲ. ಅದೊಂದು ಸಾಮಾಜಿಕ ಹೊಣೆಗಾರಿಕೆ. ನಮ್ಮನ್ನು ನಾವು ಅರಿತು ಜವಾಬ್ದಾರಿಯಿಂದ ಬದುಕುವ ಪದ್ಧತಿ~ ಎಂದು ವಿಜಾಪುರ-ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.<br /> <br /> ತಾಲ್ಲೂಕಿನ ಕತಕನಹಳ್ಳಿ ಗ್ರಾಮದಲ್ಲಿ ಗುರುಚಕ್ರವರ್ತಿ ಸದಾಶಿವ ಜಾತ್ರೆಯ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.<br /> <br /> `ನವ ವಿವಾಹಿತರು ಸಂಸ್ಕಾರಯುತ ಜೀವನ ನಡೆಸಿ, ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಯಶಸ್ವಿ ಜೀವನಕ್ಕೆ ಸಂಸ್ಕಾರ ಅತ್ಯಗತ್ಯ. ಸನ್ಮಾರ್ಗದಲ್ಲಿ ನಡೆದು ಈ ದೇಶವನ್ನು ಸ್ವರ್ಗವನ್ನಾಗಿಸಲು ಎಲ್ಲರೂ ಶ್ರಮಿಸಬೇಕು~ ಎಂದರು.<br /> <br /> ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 56 ಜೋಡಿಗಳನ್ನು ಕತಕನಹಳ್ಳಿ ಸದಾಶಿವ ಮಠದ ಶಿವಯ್ಯ ಸ್ವಾಮೀಜಿ ಆಶೀರ್ವದಿಸಿದರು.<br /> <br /> ಶಾಸಕರಾದ ಅಪ್ಪು ಪಟ್ಟಣಶೆಟ್ಟಿ, ಎಂ.ಬಿ. ಪಾಟೀಲ, ವಿಠ್ಠಲ ಕಟಕಧೋಂಡ, ಮುಖಂಡರಾದ ಬಾಬುಗೌಡ ಬಿರಾದಾರ, ವಿಜಯಕುಮಾರ ಪಾಟೀಲ, ಎಸ್.ಎಂ. ಪಾಟೀಲ ಗಣಿಹಾರ, ಸಂಗಮೇಶ ಬಬಲೇಶ್ವರ, ಸುನೀಲ್ ಪಾಟೀಲ, ಈರಣ್ಣ ಪಟ್ಟಣಶೆಟ್ಟಿ, ಗಿರಿಧರ ರಾಜು ಇತರರು ಈ ಸಂದರ್ಭದಲ್ಲಿದ್ದರು.<br /> <br /> ಜಾತ್ರೆಗೆ ಆಗಮಿಸಿದ್ದ ಸಹಸ್ರಾರು ಭಕ್ತರು ಮಾದಲಿ, ಸಜ್ಜೆ ರೊಟ್ಟಿ, ಅನ್ನ-ಸಾರು ಸವಿದರು. <br /> <br /> ರಾತ್ರಿ ಸಾರವಾಡದ ಬಸವೇಶ್ವರ ನಾಟ್ಯ ಸಂಘದವರಿಂದ `ಸಂಗ್ಯಾ ಬಾಳ್ಯಾ~ ನಾಟಕ, ಸಾಲೋಟಗಿಯ ಶಿವಯೋಗೇಶ್ವರ ಭಜನಾ ಮಂಡಳಿ ಹಾಗೂ ಹಡಲಗೇರಿಯ ಹುಲಿಗೆಮ್ಮದೇವಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿತು. <br /> <br /> ಜಾತ್ರೆಯ ಅಂಗವಾಗಿ ಜಾನುವಾರುಗಳ ಪ್ರದರ್ಶನ ಹಾಗೂ ಮಾರಾಟವೂ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ: `ವಿವಾಹವೆಂದರೆ ಗಂಡು-ಹೆಣ್ಣು ಒಟ್ಟಿಗೆ ಸೇರಿ ಹೇಗೋ ಬದುಕುವುದಲ್ಲ. ಅದೊಂದು ಸಾಮಾಜಿಕ ಹೊಣೆಗಾರಿಕೆ. ನಮ್ಮನ್ನು ನಾವು ಅರಿತು ಜವಾಬ್ದಾರಿಯಿಂದ ಬದುಕುವ ಪದ್ಧತಿ~ ಎಂದು ವಿಜಾಪುರ-ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.<br /> <br /> ತಾಲ್ಲೂಕಿನ ಕತಕನಹಳ್ಳಿ ಗ್ರಾಮದಲ್ಲಿ ಗುರುಚಕ್ರವರ್ತಿ ಸದಾಶಿವ ಜಾತ್ರೆಯ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.<br /> <br /> `ನವ ವಿವಾಹಿತರು ಸಂಸ್ಕಾರಯುತ ಜೀವನ ನಡೆಸಿ, ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಯಶಸ್ವಿ ಜೀವನಕ್ಕೆ ಸಂಸ್ಕಾರ ಅತ್ಯಗತ್ಯ. ಸನ್ಮಾರ್ಗದಲ್ಲಿ ನಡೆದು ಈ ದೇಶವನ್ನು ಸ್ವರ್ಗವನ್ನಾಗಿಸಲು ಎಲ್ಲರೂ ಶ್ರಮಿಸಬೇಕು~ ಎಂದರು.<br /> <br /> ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 56 ಜೋಡಿಗಳನ್ನು ಕತಕನಹಳ್ಳಿ ಸದಾಶಿವ ಮಠದ ಶಿವಯ್ಯ ಸ್ವಾಮೀಜಿ ಆಶೀರ್ವದಿಸಿದರು.<br /> <br /> ಶಾಸಕರಾದ ಅಪ್ಪು ಪಟ್ಟಣಶೆಟ್ಟಿ, ಎಂ.ಬಿ. ಪಾಟೀಲ, ವಿಠ್ಠಲ ಕಟಕಧೋಂಡ, ಮುಖಂಡರಾದ ಬಾಬುಗೌಡ ಬಿರಾದಾರ, ವಿಜಯಕುಮಾರ ಪಾಟೀಲ, ಎಸ್.ಎಂ. ಪಾಟೀಲ ಗಣಿಹಾರ, ಸಂಗಮೇಶ ಬಬಲೇಶ್ವರ, ಸುನೀಲ್ ಪಾಟೀಲ, ಈರಣ್ಣ ಪಟ್ಟಣಶೆಟ್ಟಿ, ಗಿರಿಧರ ರಾಜು ಇತರರು ಈ ಸಂದರ್ಭದಲ್ಲಿದ್ದರು.<br /> <br /> ಜಾತ್ರೆಗೆ ಆಗಮಿಸಿದ್ದ ಸಹಸ್ರಾರು ಭಕ್ತರು ಮಾದಲಿ, ಸಜ್ಜೆ ರೊಟ್ಟಿ, ಅನ್ನ-ಸಾರು ಸವಿದರು. <br /> <br /> ರಾತ್ರಿ ಸಾರವಾಡದ ಬಸವೇಶ್ವರ ನಾಟ್ಯ ಸಂಘದವರಿಂದ `ಸಂಗ್ಯಾ ಬಾಳ್ಯಾ~ ನಾಟಕ, ಸಾಲೋಟಗಿಯ ಶಿವಯೋಗೇಶ್ವರ ಭಜನಾ ಮಂಡಳಿ ಹಾಗೂ ಹಡಲಗೇರಿಯ ಹುಲಿಗೆಮ್ಮದೇವಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿತು. <br /> <br /> ಜಾತ್ರೆಯ ಅಂಗವಾಗಿ ಜಾನುವಾರುಗಳ ಪ್ರದರ್ಶನ ಹಾಗೂ ಮಾರಾಟವೂ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>