<p><strong>ಬೆಂಗಳೂರು: `</strong>ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರಿಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ. ಏಕೆಂದರೆ ಉತ್ತಮ ಆರೋಗ್ಯವಿದ್ದರೆ ಅವರು ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಬಹುದಾಗಿದೆ~ ಎಂದು ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಲೇವಡಿ ಮಾಡಿದರು.<br /> <br /> `ರಾಜ್ಯದಲ್ಲಿ ಅರಣ್ಯ ಸಂಪತ್ತು ನಾಶವಾಗಿದೆ. ಪರಿಣಾಮವಾಗಿ ರಾಜ್ಯ ಹೀನಾಯ ಸ್ಥಿತಿ ತಲುಪಿದೆ. ಇದರಿಂದ ನೋವಾಗುವ ಜತೆಗೆ ಆಕ್ರೋಶವೂ ಉಂಟಾಗುತ್ತದೆ. ಹಾಗಾಗಿ ಸಂಪತ್ತು ಲೂಟಿ ಮಾಡಿದ ರೆಡ್ಡಿ ಸಹೋದರು ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸುವಂತಾಗಲಿ~ ಎಂದರು.<br /> <br /> ಪ್ರೊ. ಹಂಪ ನಾಗರಾಜಯ್ಯ ಅವರ 100ನೇ ಕೃತಿ `ಕುವೆಂಪು ವಿಗ್ನೆಟ್ಸ್ ಆಫ್ ಮ್ಯಾನ್ ಅಂಡ್ ಮಿಷನ್~ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.ಜರ್ಮನಿಯ ವುರ್ಲ್ಸ್ಬರ್ಗ್ ವಿಶ್ವವಿದ್ಯಾಲಯದ ಇಂಡಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎ. ವಿವೇಕ ರೈ, `ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬಂದಿದ್ದರೂ ಕನ್ನಡದ ಲೇಖಕರ ಬಗ್ಗೆ ಮಾಹಿತಿ ನೀಡುವ ವೆಬ್ಸೈಟ್ಗಳು ಇಲ್ಲದಿರುವುದು ದುರದೃಷ್ಟಕರ.<br /> <br /> ಹಾಗಾಗಿ ಕನ್ನಡದ ಶ್ರೇಷ್ಠ ಸಾಹಿತಿಗಳ ವಿವರಗಳನ್ನೊಳಗೊಂಡ ವೆಬ್ಸೈಟ್ ಆರಂಭಿಸಬೇಕು~ ಎಂದರು.ಅಕ್ಷರ ಪ್ರಿಂಟರ್ಸ್ ಪಬ್ಲಿಷರ್ಸ್ ಮಾಲೀಕ ಆರ್. ನಾಗರಾಜ್ ಉಪಸ್ಥಿತರಿದ್ದರು. ಕೃತಿಯ ಬೆಲೆ ರೂ 250.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರಿಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ. ಏಕೆಂದರೆ ಉತ್ತಮ ಆರೋಗ್ಯವಿದ್ದರೆ ಅವರು ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಬಹುದಾಗಿದೆ~ ಎಂದು ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಲೇವಡಿ ಮಾಡಿದರು.<br /> <br /> `ರಾಜ್ಯದಲ್ಲಿ ಅರಣ್ಯ ಸಂಪತ್ತು ನಾಶವಾಗಿದೆ. ಪರಿಣಾಮವಾಗಿ ರಾಜ್ಯ ಹೀನಾಯ ಸ್ಥಿತಿ ತಲುಪಿದೆ. ಇದರಿಂದ ನೋವಾಗುವ ಜತೆಗೆ ಆಕ್ರೋಶವೂ ಉಂಟಾಗುತ್ತದೆ. ಹಾಗಾಗಿ ಸಂಪತ್ತು ಲೂಟಿ ಮಾಡಿದ ರೆಡ್ಡಿ ಸಹೋದರು ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸುವಂತಾಗಲಿ~ ಎಂದರು.<br /> <br /> ಪ್ರೊ. ಹಂಪ ನಾಗರಾಜಯ್ಯ ಅವರ 100ನೇ ಕೃತಿ `ಕುವೆಂಪು ವಿಗ್ನೆಟ್ಸ್ ಆಫ್ ಮ್ಯಾನ್ ಅಂಡ್ ಮಿಷನ್~ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.ಜರ್ಮನಿಯ ವುರ್ಲ್ಸ್ಬರ್ಗ್ ವಿಶ್ವವಿದ್ಯಾಲಯದ ಇಂಡಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎ. ವಿವೇಕ ರೈ, `ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬಂದಿದ್ದರೂ ಕನ್ನಡದ ಲೇಖಕರ ಬಗ್ಗೆ ಮಾಹಿತಿ ನೀಡುವ ವೆಬ್ಸೈಟ್ಗಳು ಇಲ್ಲದಿರುವುದು ದುರದೃಷ್ಟಕರ.<br /> <br /> ಹಾಗಾಗಿ ಕನ್ನಡದ ಶ್ರೇಷ್ಠ ಸಾಹಿತಿಗಳ ವಿವರಗಳನ್ನೊಳಗೊಂಡ ವೆಬ್ಸೈಟ್ ಆರಂಭಿಸಬೇಕು~ ಎಂದರು.ಅಕ್ಷರ ಪ್ರಿಂಟರ್ಸ್ ಪಬ್ಲಿಷರ್ಸ್ ಮಾಲೀಕ ಆರ್. ನಾಗರಾಜ್ ಉಪಸ್ಥಿತರಿದ್ದರು. ಕೃತಿಯ ಬೆಲೆ ರೂ 250.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>