<p><strong>ಬೆಂಗಳೂರು</strong>: ನಾಗರಿಕ ಸೇವೆಗಳ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ಸಂದರ್ಶನದ ಮಾದರಿಯನ್ನೇ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ನಡೆಸುವ ಸಂದರ್ಶನದಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.<br /> <br /> ವಿಧಾನಸಭೆಯಲ್ಲಿ ಸೋಮವಾರ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿಯಮ 69ರ ಅಡಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಮುಖ್ಯಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಸಂದರ್ಶನಕ್ಕೂ ಮೊದಲೇ ಯುಪಿಎಸ್ಸಿ ಪ್ರಕಟಿಸುವುದಿಲ್ಲ. ಆ ಪದ್ಧತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಲ್ಲೂ (ಕೆಪಿಎಸ್ಸಿ) ಜಾರಿಗೆ ತರುವ ಕುರಿತು ಚರ್ಚೆ ನಡೆದಿದೆ ಎಂದರು.<br /> <br /> ಮುಖ್ಯಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳು ಯುಪಿಎಸ್ಸಿ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿ ಅವರಿಗೆ ಗೊತ್ತಾಗುವುದಿಲ್ಲ. ಸಂದರ್ಶನ ನಡೆದ ನಂತರ ಮುಖ್ಯಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಒಟ್ಟಿಗೆ ಪ್ರಕಟಿಸಲಾಗುತ್ತದೆ. ಇದರಿಂದ ಪಾರದರ್ಶಕವಾಗಿ ಸಂದರ್ಶನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.<br /> <br /> ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರವನ್ನು ಸಾಧ್ಯವಾದ ಮಟ್ಟಿಗೆ ತಡೆಯಲಾಗುವುದು. ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಈಚೆಗೆ ನಡೆದ ಸಂದರ್ಶನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖಾ ಸಂಸ್ಥೆಯಿಂದ ವಿಚಾರಣೆ ನಡೆಸಿ ವರದಿ ತರಿಸಿಕೊಳ್ಳಲಾಗುವುದು. ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.<br /> <br /> ಡಾ.ಮೈತ್ರಿ ಅವರು ಲಿಖಿತ ಪರೀಕ್ಷೆಯಲ್ಲಿ 1,009 ಅಂಕಗಳನ್ನು ಪಡೆದಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅವರು, ಆ ಸಮುದಾಯದ ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಉಪ ವಿಭಾಗಾಧಿಕಾರಿ ಹುದ್ದೆಗೆ ಆಯ್ಕೆಯಾಗಿಲ್ಲ. ಕೆಪಿಎಸ್ಸಿ ಸದಸ್ಯರೊಬ್ಬರು ದೂರವಾಣಿ ಕರೆ ಮಾಡಿ ರೂ 75 ಲಕ್ಷ ಕೇಳಿದ್ದರು. ಹಣ ನೀಡದ ಕಾರಣ ಉಪ ವಿಭಾಗಾಧಿಕಾರಿ ಹುದ್ದೆ ತಪ್ಪಿಸಿದ್ದಾರೆ.<br /> <br /> ಲಿಖಿತ ಪರೀಕ್ಷೆಯಲ್ಲಿ 937 ಅಂಕಗಳನ್ನು ಪಡೆದಿರುವ ಮತ್ತೊಬ್ಬರನ್ನು ಆ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಮೈತ್ರಿ ದೂರು ನೀಡಿದ್ದಾರೆ ಎಂದು ತಿಳಿಸಿದರು.<br /> <br /> ಈ ಬಗ್ಗೆ 2-3 ವಾರಗಳಲ್ಲಿ ತನಿಖೆ ನಡೆಸಿ, ವರದಿ ಆಧಾರದ ಮೇಲೆ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುವುದು. ನೇಮಕಾತಿಯಲ್ಲಿ ಅನ್ಯಾಯ ಆಗಿದ್ದರೆ ಸರಿಪಡಿಸಲಾಗುವುದು. ತನಿಖೆ ಆಗುವವರೆಗೂ ಆಯ್ಕೆಪಟ್ಟಿ ತಡೆಹಿಡಿಯಲಾಗುವುದು. ಇದುವರೆಗೆ ಆಯ್ಕೆಪಟ್ಟಿ ಸರ್ಕಾರದ ಕೈಸೇರಿಲ್ಲ ಎಂದರು.<br /> <br /> `ಕ್ಷೇತ್ರದ ಜನತೆ ಮನವಿ ಮಾಡಿದಾಗ, ಅವರು ಸೂಚಿಸಿದ ಅಭ್ಯರ್ಥಿಗೆ ಅವಕಾಶ ಮಾಡಿಕೊಡಿ ಎಂದು ಕೆಪಿಎಸ್ಸಿ ಅಧ್ಯಕ್ಷರಿಗೆ, ಸದಸ್ಯರಿಗೆ ರಾಜಕಾರಣಿಗಳು ಮನವಿ ಮಾಡುವುದು ಸಹಜ. ಆದರೆ, ಅರ್ಹತೆ ಇರುವವರನ್ನು ಬಿಟ್ಟು, ಮೆರಿಟ್ ಇಲ್ಲದವರಿಗೆ ಕೊಡಿ' ಎನ್ನುವುದು ಸರಿಯಲ್ಲ ಎಂದರು.<br /> <br /> <strong>ಬಂಧನಕ್ಕೆ ಆಗ್ರಹ: ಆ</strong>ಯೋಗ ನಡೆಸಿದ ಸ್ಪರ್ಧಾತ್ಮ ಪರೀಕ್ಷೆ ಬರೆಯದೆ ಪತ್ರಾಂಕಿತ ಅಧಿಕಾರಿಯಾಗಿ ಆಯ್ಕೆಯಾಗಿರುವುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ ಎಂಬ ವರದಿಯನ್ನು ಕೆಲ ಮಾಧ್ಯಮಗಳು ಪ್ರಕಟಿಸಿವೆ. ಇದು ನಿಜ ಆಗಿದ್ದರೆ ಆ ಅಧಿಕಾರಿಯನ್ನು ಕೂಡಲೇ ಬಂಧಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.<br /> <br /> ಆಯ್ಕೆಯಾಗದ ಅಭ್ಯರ್ಥಿಗಳು ಮಾಧ್ಯಮಗಳ ಮೊರೆ ಹೋಗಿ, ಕೆಪಿಎಸ್ಸಿಗೆ ಕಳಂಕ ತರುವ ವ್ಯವಸ್ಥಿತ ಸಂಚು ನಡೆಸಿರುವ ಬಗ್ಗೆ ಸಂಶಯ ಇದೆ. ನಿಜವಾಗಿಯೂ ಲೋಪ ಆಗಿದೆ ಎಂದು ಲಿಖಿತವಾಗಿ ದೂರು ನೀಡಿದ್ದರೆ, ಆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಆದರೆ, ಮಾಧ್ಯಮಗಳ ವರದಿ ಆಧರಿಸಿ ತನಿಖೆ ನಡೆಸುವುದು ಸರಿಯಲ್ಲ ಎಂದರು.<br /> <br /> ಸಂದರ್ಶನದಲ್ಲಿ ಅಂಕಗಳನ್ನು ನೀಡುವ ಪರಮಾಧಿಕಾರ ಸದಸ್ಯರು, ಅಧ್ಯಕ್ಷರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಅವರು ನೀಡುವ ಅಂಕಗಳನ್ನು ಪ್ರಶ್ನೆ ಮಾಡುವಂತಿಲ್ಲ. ಲೋಪ ಆಗಿದ್ದರೆ ದೂರುದಾರರು ಆಯೋಗದ ಕಾರ್ಯದರ್ಶಿಗೆ ತಿಳಿಸಬೇಕು.<br /> <br /> ಅವರು ಆ ವಿಷಯವನ್ನು ಸದಸ್ಯರು, ಅಧ್ಯಕ್ಷರ ಗಮನಕ್ಕೆ ತರಬೇಕು. ಅವರು ಸ್ಪಂದಿಸದಿದ್ದರೆ ಕಾರ್ಯದರ್ಶಿಗಳು ಸರ್ಕಾರದ ಗಮನಕ್ಕೆ ತರಬೇಕು. ಈ ಪ್ರಕ್ರಿಯೆ ನಡೆದಿದೆಯೇ ಎಂದು ಅವರು ಪ್ರಶ್ನಿಸಿದರು.<br /> <br /> ಸಂದರ್ಶನಕ್ಕೆ ನಿಗದಿಪಡಿಸಿರುವ 200 ಅಂಕಗಳನ್ನು 20ಕ್ಕೆ ಇಳಿಸಬೇಕು. ಭ್ರಷ್ಟಾಚಾರದ ಬಗ್ಗೆ ಧೈರ್ಯವಾಗಿ ದೂರು ನೀಡಿರುವ ಮೈತ್ರಿ ಅವರಿಗೆ ರಕ್ಷಣೆ ನೀಡಬೇಕು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಾಗರಿಕ ಸೇವೆಗಳ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ಸಂದರ್ಶನದ ಮಾದರಿಯನ್ನೇ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ನಡೆಸುವ ಸಂದರ್ಶನದಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.<br /> <br /> ವಿಧಾನಸಭೆಯಲ್ಲಿ ಸೋಮವಾರ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿಯಮ 69ರ ಅಡಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಮುಖ್ಯಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಸಂದರ್ಶನಕ್ಕೂ ಮೊದಲೇ ಯುಪಿಎಸ್ಸಿ ಪ್ರಕಟಿಸುವುದಿಲ್ಲ. ಆ ಪದ್ಧತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಲ್ಲೂ (ಕೆಪಿಎಸ್ಸಿ) ಜಾರಿಗೆ ತರುವ ಕುರಿತು ಚರ್ಚೆ ನಡೆದಿದೆ ಎಂದರು.<br /> <br /> ಮುಖ್ಯಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳು ಯುಪಿಎಸ್ಸಿ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿ ಅವರಿಗೆ ಗೊತ್ತಾಗುವುದಿಲ್ಲ. ಸಂದರ್ಶನ ನಡೆದ ನಂತರ ಮುಖ್ಯಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಒಟ್ಟಿಗೆ ಪ್ರಕಟಿಸಲಾಗುತ್ತದೆ. ಇದರಿಂದ ಪಾರದರ್ಶಕವಾಗಿ ಸಂದರ್ಶನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.<br /> <br /> ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರವನ್ನು ಸಾಧ್ಯವಾದ ಮಟ್ಟಿಗೆ ತಡೆಯಲಾಗುವುದು. ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಈಚೆಗೆ ನಡೆದ ಸಂದರ್ಶನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖಾ ಸಂಸ್ಥೆಯಿಂದ ವಿಚಾರಣೆ ನಡೆಸಿ ವರದಿ ತರಿಸಿಕೊಳ್ಳಲಾಗುವುದು. ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.<br /> <br /> ಡಾ.ಮೈತ್ರಿ ಅವರು ಲಿಖಿತ ಪರೀಕ್ಷೆಯಲ್ಲಿ 1,009 ಅಂಕಗಳನ್ನು ಪಡೆದಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅವರು, ಆ ಸಮುದಾಯದ ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಉಪ ವಿಭಾಗಾಧಿಕಾರಿ ಹುದ್ದೆಗೆ ಆಯ್ಕೆಯಾಗಿಲ್ಲ. ಕೆಪಿಎಸ್ಸಿ ಸದಸ್ಯರೊಬ್ಬರು ದೂರವಾಣಿ ಕರೆ ಮಾಡಿ ರೂ 75 ಲಕ್ಷ ಕೇಳಿದ್ದರು. ಹಣ ನೀಡದ ಕಾರಣ ಉಪ ವಿಭಾಗಾಧಿಕಾರಿ ಹುದ್ದೆ ತಪ್ಪಿಸಿದ್ದಾರೆ.<br /> <br /> ಲಿಖಿತ ಪರೀಕ್ಷೆಯಲ್ಲಿ 937 ಅಂಕಗಳನ್ನು ಪಡೆದಿರುವ ಮತ್ತೊಬ್ಬರನ್ನು ಆ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಮೈತ್ರಿ ದೂರು ನೀಡಿದ್ದಾರೆ ಎಂದು ತಿಳಿಸಿದರು.<br /> <br /> ಈ ಬಗ್ಗೆ 2-3 ವಾರಗಳಲ್ಲಿ ತನಿಖೆ ನಡೆಸಿ, ವರದಿ ಆಧಾರದ ಮೇಲೆ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುವುದು. ನೇಮಕಾತಿಯಲ್ಲಿ ಅನ್ಯಾಯ ಆಗಿದ್ದರೆ ಸರಿಪಡಿಸಲಾಗುವುದು. ತನಿಖೆ ಆಗುವವರೆಗೂ ಆಯ್ಕೆಪಟ್ಟಿ ತಡೆಹಿಡಿಯಲಾಗುವುದು. ಇದುವರೆಗೆ ಆಯ್ಕೆಪಟ್ಟಿ ಸರ್ಕಾರದ ಕೈಸೇರಿಲ್ಲ ಎಂದರು.<br /> <br /> `ಕ್ಷೇತ್ರದ ಜನತೆ ಮನವಿ ಮಾಡಿದಾಗ, ಅವರು ಸೂಚಿಸಿದ ಅಭ್ಯರ್ಥಿಗೆ ಅವಕಾಶ ಮಾಡಿಕೊಡಿ ಎಂದು ಕೆಪಿಎಸ್ಸಿ ಅಧ್ಯಕ್ಷರಿಗೆ, ಸದಸ್ಯರಿಗೆ ರಾಜಕಾರಣಿಗಳು ಮನವಿ ಮಾಡುವುದು ಸಹಜ. ಆದರೆ, ಅರ್ಹತೆ ಇರುವವರನ್ನು ಬಿಟ್ಟು, ಮೆರಿಟ್ ಇಲ್ಲದವರಿಗೆ ಕೊಡಿ' ಎನ್ನುವುದು ಸರಿಯಲ್ಲ ಎಂದರು.<br /> <br /> <strong>ಬಂಧನಕ್ಕೆ ಆಗ್ರಹ: ಆ</strong>ಯೋಗ ನಡೆಸಿದ ಸ್ಪರ್ಧಾತ್ಮ ಪರೀಕ್ಷೆ ಬರೆಯದೆ ಪತ್ರಾಂಕಿತ ಅಧಿಕಾರಿಯಾಗಿ ಆಯ್ಕೆಯಾಗಿರುವುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ ಎಂಬ ವರದಿಯನ್ನು ಕೆಲ ಮಾಧ್ಯಮಗಳು ಪ್ರಕಟಿಸಿವೆ. ಇದು ನಿಜ ಆಗಿದ್ದರೆ ಆ ಅಧಿಕಾರಿಯನ್ನು ಕೂಡಲೇ ಬಂಧಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.<br /> <br /> ಆಯ್ಕೆಯಾಗದ ಅಭ್ಯರ್ಥಿಗಳು ಮಾಧ್ಯಮಗಳ ಮೊರೆ ಹೋಗಿ, ಕೆಪಿಎಸ್ಸಿಗೆ ಕಳಂಕ ತರುವ ವ್ಯವಸ್ಥಿತ ಸಂಚು ನಡೆಸಿರುವ ಬಗ್ಗೆ ಸಂಶಯ ಇದೆ. ನಿಜವಾಗಿಯೂ ಲೋಪ ಆಗಿದೆ ಎಂದು ಲಿಖಿತವಾಗಿ ದೂರು ನೀಡಿದ್ದರೆ, ಆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಆದರೆ, ಮಾಧ್ಯಮಗಳ ವರದಿ ಆಧರಿಸಿ ತನಿಖೆ ನಡೆಸುವುದು ಸರಿಯಲ್ಲ ಎಂದರು.<br /> <br /> ಸಂದರ್ಶನದಲ್ಲಿ ಅಂಕಗಳನ್ನು ನೀಡುವ ಪರಮಾಧಿಕಾರ ಸದಸ್ಯರು, ಅಧ್ಯಕ್ಷರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಅವರು ನೀಡುವ ಅಂಕಗಳನ್ನು ಪ್ರಶ್ನೆ ಮಾಡುವಂತಿಲ್ಲ. ಲೋಪ ಆಗಿದ್ದರೆ ದೂರುದಾರರು ಆಯೋಗದ ಕಾರ್ಯದರ್ಶಿಗೆ ತಿಳಿಸಬೇಕು.<br /> <br /> ಅವರು ಆ ವಿಷಯವನ್ನು ಸದಸ್ಯರು, ಅಧ್ಯಕ್ಷರ ಗಮನಕ್ಕೆ ತರಬೇಕು. ಅವರು ಸ್ಪಂದಿಸದಿದ್ದರೆ ಕಾರ್ಯದರ್ಶಿಗಳು ಸರ್ಕಾರದ ಗಮನಕ್ಕೆ ತರಬೇಕು. ಈ ಪ್ರಕ್ರಿಯೆ ನಡೆದಿದೆಯೇ ಎಂದು ಅವರು ಪ್ರಶ್ನಿಸಿದರು.<br /> <br /> ಸಂದರ್ಶನಕ್ಕೆ ನಿಗದಿಪಡಿಸಿರುವ 200 ಅಂಕಗಳನ್ನು 20ಕ್ಕೆ ಇಳಿಸಬೇಕು. ಭ್ರಷ್ಟಾಚಾರದ ಬಗ್ಗೆ ಧೈರ್ಯವಾಗಿ ದೂರು ನೀಡಿರುವ ಮೈತ್ರಿ ಅವರಿಗೆ ರಕ್ಷಣೆ ನೀಡಬೇಕು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>