<p><strong>ಗೌರಿಬಿದನೂರು: </strong>ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಆರ್ಥಿಕ ನೀತಿಯಿಂದ ಜನಸಾಮಾನ್ಯರ ಬದುಕು ಜರ್ಜರಿತವಾಗಿದೆ ಎಂದು ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ಹೇಳಿದರು.</p>.<p>ಪಟ್ಟಣದ ನದಿ ದಡದ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ಮಂಗಳವಾರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುವುದರಲ್ಲಿ ಕಾಲ ಕಳೆಯುತ್ತಿವೆ ಎಂದರು.<br /> <br /> ದೇಶದಲ್ಲಿ 40 ಕೋಟಿ ಜನರಿಗೆ ವಸತಿಯಿಲ್ಲ. 70 ಕೋಟಿ ಕುಟುಂಬಕ್ಕೆ ಸ್ನಾನ ಗೃಹ, ಶೌಚಾಲಯಗಳಿಲ್ಲ. ಬಹುರಾಷ್ಟ್ರೀಯ ಕಂಪೆನಿಗಳ ಪರ ಯೋಚಿಸುತ್ತಿರುವ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರಾಸಕ್ತ ಹೊಂದಿವೆ ಎಂದು ಟೀಕಿಸಿದರು.<br /> <br /> ಎತ್ತಿನ ಹೊಳೆ ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ನೀರು ದೊರಕುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇತರ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಬಡವರು, ರೈತರ ಬಗ್ಗೆ ಮಾತನಾಡುತ್ತಾರೆ ಎಂದರು.<br /> <br /> ಸಿಪಿಎಂ ರಾಜ್ಯ ಸಮಿತಿ ಸದಸ್ಯ ಸಿದ್ದಗಂಗಪ್ಪ, ತಾಲ್ಲೂಕು ಘಟಕದ ಕಾರ್ಯದರ್ಶಿ ಸಿ.ಸಿ.ಅಶ್ವತ್ಥಪ್ಪ, ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ, ಪಕ್ಷದ ಮುಖಂಡರಾದ ರವಿಚಂದ್ರರೆಡ್ಡಿ, ಎಸ್.ಎಸ್.ರೆಡ್ಡಿ, ಅನ್ವರ್ ಬಾಷಾ, ಆನೂಡಿ ನಾಗರಾಜ್, ನಲ್ಲಪ್ಪ, ರಾಜು ಮತ್ತಿತರರಿದ್ದರು.<br /> <br /> <strong>ಸಂಸದೀಯ ವ್ಯವಸ್ಥೆಗೆ ಅವಮಾನ: ಖಂಡನೆ</strong></p>.<p><strong>ಗುಡಿಬಂಡೆ </strong><strong>ವರದಿ</strong><strong>: </strong>ಸಂಸದೀಯ ವ್ಯವಸ್ಥೆಗೆ ಅವಮಾನ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಮಾಡುತ್ತಿರುವುದನ್ನು ಸಿಪಿಎಂ ನಿಯೋಜಿತ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ಖಂಡಿಸಿದರು.</p>.<p>ಪಟ್ಟಣದ ಗಾಯತ್ರಿ ಪ್ರಸಾದ ಭವನದಲ್ಲಿ ಮಂಗಳವಾರ ಸಿಪಿಎಂ ಆಯೋಜಿಸಿದ್ದ ರಾಜಕೀಯ ಸಮಾವೇಶದಲ್ಲಿ ಮಾತನಾಡಿ, ಈ ದೇಶದ ಸಾರ್ವಭೌಮತ್ವವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಬಹುರಾಷ್ಟ್ರಿಯ ಕಂಪೆನಿಗಳಿಗೆ ಒತ್ತೆ ಇಟ್ಟಿವೆ. ವೀರಪ್ಪ ಮೊಯಿಲಿಯಂಥ ಕಾರ್ಪೊರೇಟ್ ದಲ್ಲಾಳಿಯನ್ನು ನಮ್ಮ ಸಂಸದ ಎಂದು ಹೇಳಿಕೊಳ್ಳುವ ದೌರ್ಭಾಗ್ಯ ಕ್ಷೇತ್ರದ ಜನತೆಗೆ ಬಾರದಿರಲಿ ಎಂದರು.<br /> <br /> ಗುಜರಾತ್ನಲ್ಲಿ ಮಕ್ಕಳ ಪೌಷ್ಟಿಕ ಅಂಶ ಪ್ರಮಾಣ ಗಮನಿಸಿದರೆ ಅಲ್ಲಿನ ಅಭಿವೃದ್ಧಿಯ ಸತ್ಯಾಂಶ ತಿಳಿಯುತ್ತದೆ. ರೈತರ ಕೃಷಿ ಭೂಮಿ ಕಿತ್ತುಕೊಂಡು ಖಾಸಗಿ ಕಂಪೆನಿಗಳಿಗೆ ನೀಡಿರುವುದೇ ಅವರ ಸಾಧನೆ ಎಂದರು.<br /> <br /> ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಎಚ್.ಪಿ ಲಕ್ಷ್ಮಿನಾರಾಯಣ, ತಾಲ್ಲೂಕು ಕಾರ್ಯದರ್ಶಿ ಜಯರಾಮರೆಡ್ಡಿ, ತಾಲ್ಲಾಕು ಪಂಚಾಯತಿ ಉಪಾಧ್ಯಕ್ಷ ಆದಿನಾರಾಯಣರೆಡ್ಡಿ, ಸದಸ್ಯ ಮುನಿರೆಡ್ಡಿ, ಮುಖಂಡರಾದ ಭೈರಪ್ಪ, ಪವಿತ್ರಾ, ಶಿವಪ್ಪ, ಹನುಮಂತರೆಡ್ಡಿ, ಅಶ್ವತ್ಥರೆಡ್ಡಿ, ವೆಂಕಟಶಿವಾರೆಡ್ಡಿ, ಅಶ್ವತ್ಥಪ್ಪ, ಅಶೋಕ್, ಭಾಗ್ಯಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಆರ್ಥಿಕ ನೀತಿಯಿಂದ ಜನಸಾಮಾನ್ಯರ ಬದುಕು ಜರ್ಜರಿತವಾಗಿದೆ ಎಂದು ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ಹೇಳಿದರು.</p>.<p>ಪಟ್ಟಣದ ನದಿ ದಡದ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ಮಂಗಳವಾರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುವುದರಲ್ಲಿ ಕಾಲ ಕಳೆಯುತ್ತಿವೆ ಎಂದರು.<br /> <br /> ದೇಶದಲ್ಲಿ 40 ಕೋಟಿ ಜನರಿಗೆ ವಸತಿಯಿಲ್ಲ. 70 ಕೋಟಿ ಕುಟುಂಬಕ್ಕೆ ಸ್ನಾನ ಗೃಹ, ಶೌಚಾಲಯಗಳಿಲ್ಲ. ಬಹುರಾಷ್ಟ್ರೀಯ ಕಂಪೆನಿಗಳ ಪರ ಯೋಚಿಸುತ್ತಿರುವ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರಾಸಕ್ತ ಹೊಂದಿವೆ ಎಂದು ಟೀಕಿಸಿದರು.<br /> <br /> ಎತ್ತಿನ ಹೊಳೆ ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ನೀರು ದೊರಕುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇತರ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಬಡವರು, ರೈತರ ಬಗ್ಗೆ ಮಾತನಾಡುತ್ತಾರೆ ಎಂದರು.<br /> <br /> ಸಿಪಿಎಂ ರಾಜ್ಯ ಸಮಿತಿ ಸದಸ್ಯ ಸಿದ್ದಗಂಗಪ್ಪ, ತಾಲ್ಲೂಕು ಘಟಕದ ಕಾರ್ಯದರ್ಶಿ ಸಿ.ಸಿ.ಅಶ್ವತ್ಥಪ್ಪ, ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ, ಪಕ್ಷದ ಮುಖಂಡರಾದ ರವಿಚಂದ್ರರೆಡ್ಡಿ, ಎಸ್.ಎಸ್.ರೆಡ್ಡಿ, ಅನ್ವರ್ ಬಾಷಾ, ಆನೂಡಿ ನಾಗರಾಜ್, ನಲ್ಲಪ್ಪ, ರಾಜು ಮತ್ತಿತರರಿದ್ದರು.<br /> <br /> <strong>ಸಂಸದೀಯ ವ್ಯವಸ್ಥೆಗೆ ಅವಮಾನ: ಖಂಡನೆ</strong></p>.<p><strong>ಗುಡಿಬಂಡೆ </strong><strong>ವರದಿ</strong><strong>: </strong>ಸಂಸದೀಯ ವ್ಯವಸ್ಥೆಗೆ ಅವಮಾನ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಮಾಡುತ್ತಿರುವುದನ್ನು ಸಿಪಿಎಂ ನಿಯೋಜಿತ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ಖಂಡಿಸಿದರು.</p>.<p>ಪಟ್ಟಣದ ಗಾಯತ್ರಿ ಪ್ರಸಾದ ಭವನದಲ್ಲಿ ಮಂಗಳವಾರ ಸಿಪಿಎಂ ಆಯೋಜಿಸಿದ್ದ ರಾಜಕೀಯ ಸಮಾವೇಶದಲ್ಲಿ ಮಾತನಾಡಿ, ಈ ದೇಶದ ಸಾರ್ವಭೌಮತ್ವವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಬಹುರಾಷ್ಟ್ರಿಯ ಕಂಪೆನಿಗಳಿಗೆ ಒತ್ತೆ ಇಟ್ಟಿವೆ. ವೀರಪ್ಪ ಮೊಯಿಲಿಯಂಥ ಕಾರ್ಪೊರೇಟ್ ದಲ್ಲಾಳಿಯನ್ನು ನಮ್ಮ ಸಂಸದ ಎಂದು ಹೇಳಿಕೊಳ್ಳುವ ದೌರ್ಭಾಗ್ಯ ಕ್ಷೇತ್ರದ ಜನತೆಗೆ ಬಾರದಿರಲಿ ಎಂದರು.<br /> <br /> ಗುಜರಾತ್ನಲ್ಲಿ ಮಕ್ಕಳ ಪೌಷ್ಟಿಕ ಅಂಶ ಪ್ರಮಾಣ ಗಮನಿಸಿದರೆ ಅಲ್ಲಿನ ಅಭಿವೃದ್ಧಿಯ ಸತ್ಯಾಂಶ ತಿಳಿಯುತ್ತದೆ. ರೈತರ ಕೃಷಿ ಭೂಮಿ ಕಿತ್ತುಕೊಂಡು ಖಾಸಗಿ ಕಂಪೆನಿಗಳಿಗೆ ನೀಡಿರುವುದೇ ಅವರ ಸಾಧನೆ ಎಂದರು.<br /> <br /> ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಎಚ್.ಪಿ ಲಕ್ಷ್ಮಿನಾರಾಯಣ, ತಾಲ್ಲೂಕು ಕಾರ್ಯದರ್ಶಿ ಜಯರಾಮರೆಡ್ಡಿ, ತಾಲ್ಲಾಕು ಪಂಚಾಯತಿ ಉಪಾಧ್ಯಕ್ಷ ಆದಿನಾರಾಯಣರೆಡ್ಡಿ, ಸದಸ್ಯ ಮುನಿರೆಡ್ಡಿ, ಮುಖಂಡರಾದ ಭೈರಪ್ಪ, ಪವಿತ್ರಾ, ಶಿವಪ್ಪ, ಹನುಮಂತರೆಡ್ಡಿ, ಅಶ್ವತ್ಥರೆಡ್ಡಿ, ವೆಂಕಟಶಿವಾರೆಡ್ಡಿ, ಅಶ್ವತ್ಥಪ್ಪ, ಅಶೋಕ್, ಭಾಗ್ಯಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>