<p><strong>ಪಡುಬಿದ್ರಿ (ಉಡುಪಿ ಜಿಲ್ಲೆ):</strong> ಯುಪಿಸಿಎಲ್ ಯೋಜನೆಯಿಂದ ನಿರಂತರ ಸಮಸ್ಯೆ ಆಗುತ್ತಿದ್ದು, ಒಂದು ವಾರದೊಳಗೆ ಕಂಪೆನಿ ಮುಚ್ಚದಿದ್ದಲ್ಲಿ ಕಂಪೆನಿ ವಿರುದ್ಧ ಹೋರಾಟ ನಡೆಸುವುದಾಗಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಎಚ್ಚರಿಸಿದ್ದಾರೆ. <br /> ಯುಪಿಸಿಎಲ್ ಯೋಜನೆಯಿಂದ ಸಮಸ್ಯೆಗೊಳಗಾಗುತ್ತಿರುವ ಪ್ರದೇಶಕ್ಕೆ ಬುಧವಾರ ಸಂಜೆ ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು.<br /> <br /> ಯೋಜನೆಯಿಂದ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಯನ್ನು ಕಣ್ಣಾರೆ ಕಂಡಿದ್ದೇನೆ. ಜನರ ಸಮಸ್ಯೆ ಕಣ್ಣಾರೆ ಕಂಡು ಸುಮ್ಮನೆ ಕುಳಿತುಕೊಳ್ಳಲು ಆಗದು. ಕರಾವಳಿ ಪ್ರದೇಶವನ್ನು ಭಸ್ಮ ಮಾಡಲು ಹೊರಟಿರುವ ‘ಆಧುನಿಕ ಭಸ್ಮಾಸುರ’ ಯುಪಿಸಿಎಲ್ ಯೋಜನೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ಯೋಜನೆಯನ್ನು ವಾರದೊಳಗೆ ಸ್ಥಗಿತಗೊಳಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಾಗೂ ಕಂಪೆನಿಗೆ, ಇಲಾಖೆಗೆ ಪತ್ರ ಬರೆಯುತ್ತೇನೆ. ಬಳಿಕವೂ ಕ್ರಮ ಕೈಗೊಳ್ಳದಿದ್ದಲ್ಲಿ ಮಾರ್ಚ್ 4ರಂದು ಹೋರಾಟ ಬಗ್ಗೆ ತೀರ್ಮಾನಿಸಲಾಗುವುದು ಎಂದರು.<br /> <br /> ಯೋಜನೆಯಿಂದ ನೀರು, ಗಾಳಿ, ಕೃಷಿ, ಭೂಮಿ ಮೇಲೆ ಅಪಾರ ಹಾನಿಯಾಗಿದೆ. ಇಷ್ಟೆಲ್ಲಾ ಸಮಸ್ಯೆ ಇದ್ದರೂ ಕಂಪೆನಿಯು ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆ ನೀಡುತ್ತಿರುವುದು ಸರಿಯಲ್ಲ. ಈ ಸಮಸ್ಯೆ ಗಂಭೀರವಾಗಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲರೂ ಹೋರಾಟದಲ್ಲಿ ಭಾಗಿಯಾಗಬೇಕು. ಸಾರ್ವಜನಿಕರು ನಡೆಸುವ ಯಾವುದೇ ಹೋರಾಟದಲ್ಲಿ ನಾನು ಸಕ್ರಿಯವಾಗಿ ಭಾಗವಹಿಸುತ್ತೇನೆ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ (ಉಡುಪಿ ಜಿಲ್ಲೆ):</strong> ಯುಪಿಸಿಎಲ್ ಯೋಜನೆಯಿಂದ ನಿರಂತರ ಸಮಸ್ಯೆ ಆಗುತ್ತಿದ್ದು, ಒಂದು ವಾರದೊಳಗೆ ಕಂಪೆನಿ ಮುಚ್ಚದಿದ್ದಲ್ಲಿ ಕಂಪೆನಿ ವಿರುದ್ಧ ಹೋರಾಟ ನಡೆಸುವುದಾಗಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಎಚ್ಚರಿಸಿದ್ದಾರೆ. <br /> ಯುಪಿಸಿಎಲ್ ಯೋಜನೆಯಿಂದ ಸಮಸ್ಯೆಗೊಳಗಾಗುತ್ತಿರುವ ಪ್ರದೇಶಕ್ಕೆ ಬುಧವಾರ ಸಂಜೆ ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು.<br /> <br /> ಯೋಜನೆಯಿಂದ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಯನ್ನು ಕಣ್ಣಾರೆ ಕಂಡಿದ್ದೇನೆ. ಜನರ ಸಮಸ್ಯೆ ಕಣ್ಣಾರೆ ಕಂಡು ಸುಮ್ಮನೆ ಕುಳಿತುಕೊಳ್ಳಲು ಆಗದು. ಕರಾವಳಿ ಪ್ರದೇಶವನ್ನು ಭಸ್ಮ ಮಾಡಲು ಹೊರಟಿರುವ ‘ಆಧುನಿಕ ಭಸ್ಮಾಸುರ’ ಯುಪಿಸಿಎಲ್ ಯೋಜನೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ಯೋಜನೆಯನ್ನು ವಾರದೊಳಗೆ ಸ್ಥಗಿತಗೊಳಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಾಗೂ ಕಂಪೆನಿಗೆ, ಇಲಾಖೆಗೆ ಪತ್ರ ಬರೆಯುತ್ತೇನೆ. ಬಳಿಕವೂ ಕ್ರಮ ಕೈಗೊಳ್ಳದಿದ್ದಲ್ಲಿ ಮಾರ್ಚ್ 4ರಂದು ಹೋರಾಟ ಬಗ್ಗೆ ತೀರ್ಮಾನಿಸಲಾಗುವುದು ಎಂದರು.<br /> <br /> ಯೋಜನೆಯಿಂದ ನೀರು, ಗಾಳಿ, ಕೃಷಿ, ಭೂಮಿ ಮೇಲೆ ಅಪಾರ ಹಾನಿಯಾಗಿದೆ. ಇಷ್ಟೆಲ್ಲಾ ಸಮಸ್ಯೆ ಇದ್ದರೂ ಕಂಪೆನಿಯು ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆ ನೀಡುತ್ತಿರುವುದು ಸರಿಯಲ್ಲ. ಈ ಸಮಸ್ಯೆ ಗಂಭೀರವಾಗಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲರೂ ಹೋರಾಟದಲ್ಲಿ ಭಾಗಿಯಾಗಬೇಕು. ಸಾರ್ವಜನಿಕರು ನಡೆಸುವ ಯಾವುದೇ ಹೋರಾಟದಲ್ಲಿ ನಾನು ಸಕ್ರಿಯವಾಗಿ ಭಾಗವಹಿಸುತ್ತೇನೆ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>