<p>ನವದೆಹಲಿ (ಐಎಎನ್ಎಸ್): ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿರುವ ಸುಳ್ಳು ಆರೋಪದ ಮೇಲೆ ಯುವಕನನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ), ದೆಹಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸೋಮವಾರ ನೋಟಿಸ್ ನೀಡಿದೆ.<br /> <br /> ಹಳೇ ದೆಹಲಿ ಪ್ರದೇಶದಲ್ಲಿ 1998ರ ಫೆಬ್ರುವರಿಯಲ್ಲಿ ಮೊಹಮ್ಮದ್ ಅಮೀರ್ ಎಂಬ 18 ವರ್ಷದ ಯುವಕನನ್ನು ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವ ಆಪಾದನೆ ಮೇಲೆ ದೆಹಲಿ ಪೊಲೀಸರು ಬಂಧಿಸಿದ್ದರು. 14 ವರ್ಷಗಳ ಕಾಲ ಸೆರೆಯಲ್ಲಿದ್ದ ಆತನನ್ನು 2012ರ ಜನವರಿಯಲ್ಲಿ ಬಿಡುಗಡೆ ಮಾಡಲಾಯಿತು.<br /> <br /> ‘ಕಾನೂನುಬಾಹಿರವಾಗಿ ಬಂಧನದಲ್ಲಿ ಇರಿಸಿ ಯುವಕನ ಬದುಕನ್ನು ನಾಶ ಮಾಡಲಾಯಿತು. ಬಡತನದಿಂದ ಆತನ ತಂದೆ ಸಾವನ್ನಪ್ಪಿದರು. ಅವರ ಕುಟುಂಬದ ಮೇಲೆ ಹೇರಿದ ಸಾಮಾಜಿಕ ಬಹಿಷ್ಕಾರದ ಆಘಾತಕ್ಕೆ ಒಳಗಾದ ಆತನ ತಾಯಿ ಪಾರ್ಶ್ವಯು ಪೀಡಿತರಾಗಿ, ಅವರ ಮಿದುಳು ನಿಷ್ಕ್ರಿಯಗೊಂಡಿದೆ. ಈ ಪ್ರಕರಣವು ಪೊಲೀಸರ ಕಾರ್ಯವೈಖರಿ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ’ ಎಂದು ನೋಟಿಸ್ನಲ್ಲಿ ಉಲ್ಲೇಕಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿರುವ ಸುಳ್ಳು ಆರೋಪದ ಮೇಲೆ ಯುವಕನನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ), ದೆಹಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸೋಮವಾರ ನೋಟಿಸ್ ನೀಡಿದೆ.<br /> <br /> ಹಳೇ ದೆಹಲಿ ಪ್ರದೇಶದಲ್ಲಿ 1998ರ ಫೆಬ್ರುವರಿಯಲ್ಲಿ ಮೊಹಮ್ಮದ್ ಅಮೀರ್ ಎಂಬ 18 ವರ್ಷದ ಯುವಕನನ್ನು ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವ ಆಪಾದನೆ ಮೇಲೆ ದೆಹಲಿ ಪೊಲೀಸರು ಬಂಧಿಸಿದ್ದರು. 14 ವರ್ಷಗಳ ಕಾಲ ಸೆರೆಯಲ್ಲಿದ್ದ ಆತನನ್ನು 2012ರ ಜನವರಿಯಲ್ಲಿ ಬಿಡುಗಡೆ ಮಾಡಲಾಯಿತು.<br /> <br /> ‘ಕಾನೂನುಬಾಹಿರವಾಗಿ ಬಂಧನದಲ್ಲಿ ಇರಿಸಿ ಯುವಕನ ಬದುಕನ್ನು ನಾಶ ಮಾಡಲಾಯಿತು. ಬಡತನದಿಂದ ಆತನ ತಂದೆ ಸಾವನ್ನಪ್ಪಿದರು. ಅವರ ಕುಟುಂಬದ ಮೇಲೆ ಹೇರಿದ ಸಾಮಾಜಿಕ ಬಹಿಷ್ಕಾರದ ಆಘಾತಕ್ಕೆ ಒಳಗಾದ ಆತನ ತಾಯಿ ಪಾರ್ಶ್ವಯು ಪೀಡಿತರಾಗಿ, ಅವರ ಮಿದುಳು ನಿಷ್ಕ್ರಿಯಗೊಂಡಿದೆ. ಈ ಪ್ರಕರಣವು ಪೊಲೀಸರ ಕಾರ್ಯವೈಖರಿ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ’ ಎಂದು ನೋಟಿಸ್ನಲ್ಲಿ ಉಲ್ಲೇಕಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>