<p>ಗಂಗಾವತಿ: ಅಧಿಕಾರಿಗಳ ಬೇಜವಾಬ್ದಾರಿ, ಪ್ರಚಾರದ ಕೊರತೆ ಮತ್ತು ಯುವಜನರಲ್ಲಿರುವ ನಿರಾಸಕ್ತಿಯಿಂದಾಗಿ ಯುವಜನ ಮೇಳಗಳು ಕಳಾಹೀನವಾಗುತ್ತಿವೆ ಎಂದು ಶಾಸಕ ಪರಣ್ಣ ಮುನವಳ್ಳಿ ವಿಷಾದ ವ್ಯಕ್ತಪಡಿಸಿದರು.<br /> <br /> ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ತಾಲ್ಲೂಕಿನ ಸಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವಜನ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> “ಯುವಕರಲ್ಲಿ ಅದರಲ್ಲೂ ಗ್ರಾಮೀಣ ಕ್ರೀಡೆಗಳಿಗೆ ವೇದಿಕೆ ಕಲ್ಪಿಸಬಲ್ಲ ಇಂಥ ಮೇಳ ಯಶಸ್ವಿಯಾಗಬೇಕಾದರೆ ಮುಂದಿನ ದಿನದಲ್ಲಿ ಅಧಿಕಾರಿಗಳು ಹೆಚ್ಚು ಚುರುಕಿನಿಂದ ಕಾರ್ಯ ನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.<br /> <br /> ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೆ ಸರ್ಕಾರದ ಗಮನ ಸೆಳೆದು ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಸಂಗಾಪುರ ಗ್ರಾಮದಲ್ಲಿ ಪ್ರೌಢಶಾಲೆ ಆರಂಭವಾಗಲಿದೆ ಎಂದರು.<br /> <br /> ಆನೆಗೊಂದಿ ಕ್ಷೇತ್ರದ ಜಿ.ಪಂ. ಸದಸ್ಯೆ ವಿಜಯಲಕ್ಷ್ಮಿ ಮಾತನಾಡಿ, ‘ರಾಜ್ಯ, ವಲಯಮಟ್ಟದಲ್ಲಿ ಸಾಧನೆ ಮಾಡಿದ ತಂಡಗಳು ತಾಲ್ಲೂಕಿನಲ್ಲಿ ಸಾಕಷ್ಟಿವೆ. ಆದರೆ ಬಿಡುಗಡೆಯಾಗುವ ರೂ, 10-20 ಸಾವಿರ ಹಣ ವ್ಯರ್ಥಮಾಡಿ ಕಾಟಾಚಾರಕ್ಕೆ ಮೇಳ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು. <br /> <br /> ಪ್ರಾಸ್ತಾವಿಕ ಮಾತನಾಡಿದ ಇಲಾಖೆಯ ತಾಲ್ಲೂಕು ಅಧಿಕಾರಿ ತಿಪ್ಪಯ್ಯ ಹಿರೇಮಠ ಅವರು, ‘ಮಾರ್ಚ್ ತಿಂಗಳ ್ಲಒಳಗಾಗಿ ಯುವಜನ ಮೇಳ ಮುಗಿಸಬೇಕೆಂಬ ಷರತ್ತಿದೆ. ಜೊತೆಗೆ ಆನೆಗೊಂದಿ ಉತ್ಸವಕ್ಕೆ ಗಮನ ಕೇಂದ್ರೀಕರಿಸಬೇಕಿದ್ದರಿಂದ ತರಾತುರಿಯಲ್ಲಿ ಮೇವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ಅಧಿಕಾರಿಗಳ ಬೇಜವಾಬ್ದಾರಿ, ಪ್ರಚಾರದ ಕೊರತೆ ಮತ್ತು ಯುವಜನರಲ್ಲಿರುವ ನಿರಾಸಕ್ತಿಯಿಂದಾಗಿ ಯುವಜನ ಮೇಳಗಳು ಕಳಾಹೀನವಾಗುತ್ತಿವೆ ಎಂದು ಶಾಸಕ ಪರಣ್ಣ ಮುನವಳ್ಳಿ ವಿಷಾದ ವ್ಯಕ್ತಪಡಿಸಿದರು.<br /> <br /> ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ತಾಲ್ಲೂಕಿನ ಸಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವಜನ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> “ಯುವಕರಲ್ಲಿ ಅದರಲ್ಲೂ ಗ್ರಾಮೀಣ ಕ್ರೀಡೆಗಳಿಗೆ ವೇದಿಕೆ ಕಲ್ಪಿಸಬಲ್ಲ ಇಂಥ ಮೇಳ ಯಶಸ್ವಿಯಾಗಬೇಕಾದರೆ ಮುಂದಿನ ದಿನದಲ್ಲಿ ಅಧಿಕಾರಿಗಳು ಹೆಚ್ಚು ಚುರುಕಿನಿಂದ ಕಾರ್ಯ ನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.<br /> <br /> ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೆ ಸರ್ಕಾರದ ಗಮನ ಸೆಳೆದು ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಸಂಗಾಪುರ ಗ್ರಾಮದಲ್ಲಿ ಪ್ರೌಢಶಾಲೆ ಆರಂಭವಾಗಲಿದೆ ಎಂದರು.<br /> <br /> ಆನೆಗೊಂದಿ ಕ್ಷೇತ್ರದ ಜಿ.ಪಂ. ಸದಸ್ಯೆ ವಿಜಯಲಕ್ಷ್ಮಿ ಮಾತನಾಡಿ, ‘ರಾಜ್ಯ, ವಲಯಮಟ್ಟದಲ್ಲಿ ಸಾಧನೆ ಮಾಡಿದ ತಂಡಗಳು ತಾಲ್ಲೂಕಿನಲ್ಲಿ ಸಾಕಷ್ಟಿವೆ. ಆದರೆ ಬಿಡುಗಡೆಯಾಗುವ ರೂ, 10-20 ಸಾವಿರ ಹಣ ವ್ಯರ್ಥಮಾಡಿ ಕಾಟಾಚಾರಕ್ಕೆ ಮೇಳ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು. <br /> <br /> ಪ್ರಾಸ್ತಾವಿಕ ಮಾತನಾಡಿದ ಇಲಾಖೆಯ ತಾಲ್ಲೂಕು ಅಧಿಕಾರಿ ತಿಪ್ಪಯ್ಯ ಹಿರೇಮಠ ಅವರು, ‘ಮಾರ್ಚ್ ತಿಂಗಳ ್ಲಒಳಗಾಗಿ ಯುವಜನ ಮೇಳ ಮುಗಿಸಬೇಕೆಂಬ ಷರತ್ತಿದೆ. ಜೊತೆಗೆ ಆನೆಗೊಂದಿ ಉತ್ಸವಕ್ಕೆ ಗಮನ ಕೇಂದ್ರೀಕರಿಸಬೇಕಿದ್ದರಿಂದ ತರಾತುರಿಯಲ್ಲಿ ಮೇವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>