<p><strong>ವಿಜಾಪುರ:</strong> ಯುವ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆಯ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಅಭ್ಯರ್ಥಿಯ ಬೆಂಬಲಿಗನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬುಧವಾರ ಇಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.</p>.<p>`ಇರ್ಫಾನ್ ಕಲಾದಗಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿ, ತನ್ನ ಸಹಚರರೊಂದಿಗೆ ಜೀಪ್ನಲ್ಲಿ ಪರಾರಿಯಾಗಿದ್ದಾನೆ. ಆತನ ಪತ್ತೆ ಕಾರ್ಯ ನಡೆದಿದೆ. ಆತನ ಬೆಂಬಲದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸೈಯದ್ಗೌಸ್ ಅಲಿಯಾಸ್ ಆಸೀಫ್ ಇನಾಮದಾರ ಎಂಬಾತನನ್ನು ಬಂಧಿಸಲಾಗಿದೆ~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಡಿ.ಸಿ. ರಾಜಪ್ಪ ಹೇಳಿದರು.</p>.<p>`ವಿಜಾಪುರ ನಗರ ವಿಧಾನಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಫಯಾಜ್ ಮುಶ್ರಿಫ್ ಬೆಂಬಲಿತ ಮೊಯಿನ್ಅಹ್ಮದ್ ಶೇಖ್ ಮತ್ತು ಇರ್ಫಾನ್ ಕಲಾದಗಿ ಬೆಂಬಲಿತ ಸೈಯದ್ಗೌಸ್ ಅಲಿಯಾಸ್ ಆಸೀಫ್ ಇನಾಮದಾರ ಸ್ಪರ್ಧಿಸಿದ್ದರು~ ಎಂದು ರಾಜಪ್ಪ ಹೇಳಿದರು.</p>.<p>`ಚುನಾವಣೆಗೆ ಸ್ಪರ್ಧಿಸದಂತೆ ಕಳೆದ ಮೂರು ದಿನಗಳಿಂದ ಆತ ನನ್ನ ಮೇಲೆ ಒತ್ತಡ ತಂದಿದ್ದ. ಜೀವ ಬೆದರಿಕೆಯನ್ನೂ ಹಾಕಿದ್ದ. ಮುಂಜಾನೆ 9.20ರ ಸುಮಾರು ಏಕಾಏಕಿ ನನ್ನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ~ ಎಂದು ಮತ್ತೊಬ್ಬ ಅಭ್ಯರ್ಥಿ ಮೊಯಿನ್ಅಹ್ಮದ್ ಶೇಖ್ ದೂರು ನೀಡಿದ್ದಾರೆ.</p>.<p>`ಆತ್ಮರಕ್ಷಣೆಗಾಗಿ ಇರ್ಫಾನ್ ಕಲಾದಗಿ ಪಿಸ್ತೂಲ್ ಪರವಾನಿಗೆ ಪಡೆದಿದ್ದ. ಅದೇ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾನೆ. ಆತನಿಗೆ ನೀಡಿರುವ ಪಿಸ್ತೂಲ್ನ ಪರವಾನಿಗೆಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು~ ಎಂದರು.</p>.<p>`ಬಂದೂಕು ಸಂಸ್ಕೃತಿ ಕಾಂಗ್ರೆಸ್ನಲ್ಲಿ ಇಲ್ಲ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ವರದಿ ಪಡೆದು ಅಭ್ಯರ್ಥಿ ಅಥವಾ ಸದಸ್ಯ ತಪ್ಪಿತಸ್ಥನಾಗಿದ್ದರೆ ಆತನನ್ನು ಅನರ್ಹ ಗೊಳಿಸಲಾಗುವುದು~ ಎಂದು ಚುನಾವಣಾಧಿಕಾರಿ ಧ್ಯಾನಪ್ರಕಾಶ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ:</strong> ಯುವ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆಯ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಅಭ್ಯರ್ಥಿಯ ಬೆಂಬಲಿಗನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬುಧವಾರ ಇಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.</p>.<p>`ಇರ್ಫಾನ್ ಕಲಾದಗಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿ, ತನ್ನ ಸಹಚರರೊಂದಿಗೆ ಜೀಪ್ನಲ್ಲಿ ಪರಾರಿಯಾಗಿದ್ದಾನೆ. ಆತನ ಪತ್ತೆ ಕಾರ್ಯ ನಡೆದಿದೆ. ಆತನ ಬೆಂಬಲದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸೈಯದ್ಗೌಸ್ ಅಲಿಯಾಸ್ ಆಸೀಫ್ ಇನಾಮದಾರ ಎಂಬಾತನನ್ನು ಬಂಧಿಸಲಾಗಿದೆ~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಡಿ.ಸಿ. ರಾಜಪ್ಪ ಹೇಳಿದರು.</p>.<p>`ವಿಜಾಪುರ ನಗರ ವಿಧಾನಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಫಯಾಜ್ ಮುಶ್ರಿಫ್ ಬೆಂಬಲಿತ ಮೊಯಿನ್ಅಹ್ಮದ್ ಶೇಖ್ ಮತ್ತು ಇರ್ಫಾನ್ ಕಲಾದಗಿ ಬೆಂಬಲಿತ ಸೈಯದ್ಗೌಸ್ ಅಲಿಯಾಸ್ ಆಸೀಫ್ ಇನಾಮದಾರ ಸ್ಪರ್ಧಿಸಿದ್ದರು~ ಎಂದು ರಾಜಪ್ಪ ಹೇಳಿದರು.</p>.<p>`ಚುನಾವಣೆಗೆ ಸ್ಪರ್ಧಿಸದಂತೆ ಕಳೆದ ಮೂರು ದಿನಗಳಿಂದ ಆತ ನನ್ನ ಮೇಲೆ ಒತ್ತಡ ತಂದಿದ್ದ. ಜೀವ ಬೆದರಿಕೆಯನ್ನೂ ಹಾಕಿದ್ದ. ಮುಂಜಾನೆ 9.20ರ ಸುಮಾರು ಏಕಾಏಕಿ ನನ್ನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ~ ಎಂದು ಮತ್ತೊಬ್ಬ ಅಭ್ಯರ್ಥಿ ಮೊಯಿನ್ಅಹ್ಮದ್ ಶೇಖ್ ದೂರು ನೀಡಿದ್ದಾರೆ.</p>.<p>`ಆತ್ಮರಕ್ಷಣೆಗಾಗಿ ಇರ್ಫಾನ್ ಕಲಾದಗಿ ಪಿಸ್ತೂಲ್ ಪರವಾನಿಗೆ ಪಡೆದಿದ್ದ. ಅದೇ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾನೆ. ಆತನಿಗೆ ನೀಡಿರುವ ಪಿಸ್ತೂಲ್ನ ಪರವಾನಿಗೆಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು~ ಎಂದರು.</p>.<p>`ಬಂದೂಕು ಸಂಸ್ಕೃತಿ ಕಾಂಗ್ರೆಸ್ನಲ್ಲಿ ಇಲ್ಲ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ವರದಿ ಪಡೆದು ಅಭ್ಯರ್ಥಿ ಅಥವಾ ಸದಸ್ಯ ತಪ್ಪಿತಸ್ಥನಾಗಿದ್ದರೆ ಆತನನ್ನು ಅನರ್ಹ ಗೊಳಿಸಲಾಗುವುದು~ ಎಂದು ಚುನಾವಣಾಧಿಕಾರಿ ಧ್ಯಾನಪ್ರಕಾಶ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>