<p>ತುಮಕೂರು: ನಗರದ ಟೌನ್ಹಾಲ್ ವೃತ್ತದಲ್ಲಿ ಶುಕ್ರವಾರ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯಕರ್ತರು ಮಂಗಳೂರಿನಲ್ಲಿ ಹೋಂ ಸ್ಟೇ ಮೇಲೆ ನಡೆದ ದಾಳಿ ವಿರೋಧಿಸಿ ಪ್ರತಿಭಟನೆ ನಡೆಸಿದರು.<br /> <br /> ನಗರದ ಟೌನ್ಹಾಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ದಾಳಿ ನಡೆಸುವುದು, ಯುವತಿಯರನ್ನು ಅಸಭ್ಯವಾಗಿ ಎಳೆದಾಡುವುದು, ಹುಟ್ಟುಹಬ್ಬದ ಆಚರಣೆಯನ್ನು ಸಹ ಅಕ್ರಮ ಎಂದು ಪರಿಗಣಿಸಿ ಅಸಭ್ಯವಾಗಿ ವರ್ತಿಸುವುದು ಮಂಗಳೂರಿನಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಇದರ ಹಿಂದೆ ಕೆಲವು ರಾಜಕೀಯ ಪ್ರೇರಿತ ಸಂಘಟನೆಗಳ ಕೈವಾಡವಿದೆ. ಈ ಬಗ್ಗೆ ತನಿಖೆ ನಡೆಸಿ ನಿರಂತರವಾಗಿ ನಡೆಯುವ ದಾಳಿಗಳ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.<br /> <br /> ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿರ್ಲಿಪ್ತವಾಗಿ ವರ್ತಿಸಿರುವುದು ಕಂಡುಬಂದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಿ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಈ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಬಂಧಿಸಿದರೂ ಶಿಕ್ಷೆ ನೀಡದ ಕಾರಣ ಮತ್ತೆಮತ್ತೆ ದಾಳಿ ನಡೆಯುತ್ತಿದೆ. ಇದರಲ್ಲಿ ಮೂಲಭೂತವಾದಿಗಳ ಸ್ವಹಿತಾಸಕ್ತಿ ಅಡಗಿದೆ. ಹಿಂದೂ ಜಾಗರಣ ವೇದಿಕೆ, ಭಜರಂಗದಳ ಮುಂತಾದ ಸಂಘಟನೆಗಳ ಕೈವಾಡವಿದೆ ಎಂದು ಆಪಾದಿಸಿದರು.<br /> <br /> ಮುಖಂಡರಾದ ರಾಜೇಶ್ ದೊಡ್ಮನೆ, ರವಿಕಿರಣ್, ಸಂದೀಪ್, ಲಕ್ಕಪ್ಪ, ಜಿ.ಶ್ರೀನಿವಾಸ್, ಆರ್.ರಾಜೇಂದ್ರ, ರಾಘವೇಂದ್ರಸ್ವಾಮಿ, ಶಶಿಧರ್, ರವಿಕುಮಾರ್ ಮೋಹನ್, ದಿನೇಶ್ಬಾಬು, ಶಿವಪ್ರಸಾದ್, ಶರತ್, ಮುಬಾರಕ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.<br /> <strong><br /> `ಗ್ರಾಮಾಂತರದಿಂದ ಸ್ಪರ್ಧೆ~</strong><br /> ಮಧುಗಿರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.<br /> <br /> ರಾಜಕೀಯವಾಗಿ ಜನ್ಮ ನೀಡಿದ ಈ ಕ್ಷೇತ್ರದಲ್ಲಿ ಅಭಿಮಾನಿಗಳು, ಹಿತೈಷಿಗಳಿರುವುದರಿಂದ ಬರುತ್ತೇನೆ. ಮುಂದಿನ ಚುನಾವಣೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ನಗರದ ಟೌನ್ಹಾಲ್ ವೃತ್ತದಲ್ಲಿ ಶುಕ್ರವಾರ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯಕರ್ತರು ಮಂಗಳೂರಿನಲ್ಲಿ ಹೋಂ ಸ್ಟೇ ಮೇಲೆ ನಡೆದ ದಾಳಿ ವಿರೋಧಿಸಿ ಪ್ರತಿಭಟನೆ ನಡೆಸಿದರು.<br /> <br /> ನಗರದ ಟೌನ್ಹಾಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ದಾಳಿ ನಡೆಸುವುದು, ಯುವತಿಯರನ್ನು ಅಸಭ್ಯವಾಗಿ ಎಳೆದಾಡುವುದು, ಹುಟ್ಟುಹಬ್ಬದ ಆಚರಣೆಯನ್ನು ಸಹ ಅಕ್ರಮ ಎಂದು ಪರಿಗಣಿಸಿ ಅಸಭ್ಯವಾಗಿ ವರ್ತಿಸುವುದು ಮಂಗಳೂರಿನಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಇದರ ಹಿಂದೆ ಕೆಲವು ರಾಜಕೀಯ ಪ್ರೇರಿತ ಸಂಘಟನೆಗಳ ಕೈವಾಡವಿದೆ. ಈ ಬಗ್ಗೆ ತನಿಖೆ ನಡೆಸಿ ನಿರಂತರವಾಗಿ ನಡೆಯುವ ದಾಳಿಗಳ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.<br /> <br /> ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿರ್ಲಿಪ್ತವಾಗಿ ವರ್ತಿಸಿರುವುದು ಕಂಡುಬಂದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಿ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಈ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಬಂಧಿಸಿದರೂ ಶಿಕ್ಷೆ ನೀಡದ ಕಾರಣ ಮತ್ತೆಮತ್ತೆ ದಾಳಿ ನಡೆಯುತ್ತಿದೆ. ಇದರಲ್ಲಿ ಮೂಲಭೂತವಾದಿಗಳ ಸ್ವಹಿತಾಸಕ್ತಿ ಅಡಗಿದೆ. ಹಿಂದೂ ಜಾಗರಣ ವೇದಿಕೆ, ಭಜರಂಗದಳ ಮುಂತಾದ ಸಂಘಟನೆಗಳ ಕೈವಾಡವಿದೆ ಎಂದು ಆಪಾದಿಸಿದರು.<br /> <br /> ಮುಖಂಡರಾದ ರಾಜೇಶ್ ದೊಡ್ಮನೆ, ರವಿಕಿರಣ್, ಸಂದೀಪ್, ಲಕ್ಕಪ್ಪ, ಜಿ.ಶ್ರೀನಿವಾಸ್, ಆರ್.ರಾಜೇಂದ್ರ, ರಾಘವೇಂದ್ರಸ್ವಾಮಿ, ಶಶಿಧರ್, ರವಿಕುಮಾರ್ ಮೋಹನ್, ದಿನೇಶ್ಬಾಬು, ಶಿವಪ್ರಸಾದ್, ಶರತ್, ಮುಬಾರಕ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.<br /> <strong><br /> `ಗ್ರಾಮಾಂತರದಿಂದ ಸ್ಪರ್ಧೆ~</strong><br /> ಮಧುಗಿರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.<br /> <br /> ರಾಜಕೀಯವಾಗಿ ಜನ್ಮ ನೀಡಿದ ಈ ಕ್ಷೇತ್ರದಲ್ಲಿ ಅಭಿಮಾನಿಗಳು, ಹಿತೈಷಿಗಳಿರುವುದರಿಂದ ಬರುತ್ತೇನೆ. ಮುಂದಿನ ಚುನಾವಣೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>