<p>ರಾಯಚೂರು: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಿಮಿತ್ತ ಆಚರಿಸಲಾಗುವ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಜೆಡಿಎಸ್ ರಾಯಚೂರು ನಗರ ಯುವ ಜನತಾದಳ ಘಟಕವು ಶುಕ್ರವಾರ `ಯುವ ಮತದಾರರ ನೋಂದಣಿ ಅಭಿಯಾನ~ ನಡೆಸಿತು.<br /> <br /> ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ನಡೆದ ದ್ವಿಚಕ್ರ ವಾಹನ ರ್ಯಾಲಿಗೆ ಯುವ ಘಟಕದ ಜಿಲ್ಲಾ ಅಧ್ಯಕ್ಷ ಪವನಕುಮಾರ ಚಾಲನೆ ನೀಡಿದರು.<br /> <br /> ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಶಿವಶಂಕರ ವಕೀಲ ಮಾತನಾಡಿ, ಮತದಾನದ ಹಕ್ಕು, ಮತದಾನದ ಮಹತ್ವವನ್ನು ಯುವ ಸಮುದಾಯ ಅರಿತುಕೊಂಡಿರಬೇಕು. ಹದಿನೆಂಟು ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಜನ್ಮ ದಿನಾಂಕ ಪ್ರಮಾಣ ಪತ್ರ, ವಿಳಾಸ ಪ್ರಮಾಣಪತ್ರದೊಂದಿಗೆ ತಹಶೀಲ್ದಾರ ಕಚೇರಿಯಲ್ಲಿ ಈ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.<br /> <br /> ಈ ದೇಶ ಬಲಿಷ್ಠವಾಗಿ ಕಟ್ಟಲು ಹತ್ತು ಜನ ಯುವಕರು ತಮಗೆ ಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಭಾರತ ಅಭಿವೃದ್ಧಿ ದೇಶವಾಗಿ ರೂಪುಗೊಳ್ಳಬೇಕಾದರೆ ಆಳುವ ನಾಯಕರು ಅತ್ಯುತ್ತಮರಾಗಿರಬೇಕು. ಈ ಆಶಯ ಈಡೇರಬೇಕಾದರೆ ಯುವ ಮತದಾರರ ನೋಂದಣಿಯಿಂದ ಸಾಧ್ಯ ಎಂದು ಪಕ್ಷದ ಮುಖಂಡರು ಹೇಳಿದರು.<br /> <br /> ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮಹಾಂತೇಶ ಪಾಟೀಲ ಅತ್ತನೂರು, ನಗರ ಘಟಕದ ಅಧ್ಯಕ್ಷ ಬಿ ತಿಮ್ಮಾರೆಡ್ಡಿ, ನಗರ ಯುವ ಘಟಕದ ಅಧ್ಯಕ್ಷ ರಾಮಕೃಷ್ಣ ಆರ್, ಜಂಬುಲಿಂಗ ಯಾದವ್, ಖಲೀಲ್, ಅರಾಫತ್, ಆಂಜನೇಯ ವಕೀಲ, ಮಕ್ಬೂಲ್, ನಾಗರಾಜಸ್ವಾಮಿ, ಈರಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಿಮಿತ್ತ ಆಚರಿಸಲಾಗುವ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಜೆಡಿಎಸ್ ರಾಯಚೂರು ನಗರ ಯುವ ಜನತಾದಳ ಘಟಕವು ಶುಕ್ರವಾರ `ಯುವ ಮತದಾರರ ನೋಂದಣಿ ಅಭಿಯಾನ~ ನಡೆಸಿತು.<br /> <br /> ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ನಡೆದ ದ್ವಿಚಕ್ರ ವಾಹನ ರ್ಯಾಲಿಗೆ ಯುವ ಘಟಕದ ಜಿಲ್ಲಾ ಅಧ್ಯಕ್ಷ ಪವನಕುಮಾರ ಚಾಲನೆ ನೀಡಿದರು.<br /> <br /> ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಶಿವಶಂಕರ ವಕೀಲ ಮಾತನಾಡಿ, ಮತದಾನದ ಹಕ್ಕು, ಮತದಾನದ ಮಹತ್ವವನ್ನು ಯುವ ಸಮುದಾಯ ಅರಿತುಕೊಂಡಿರಬೇಕು. ಹದಿನೆಂಟು ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಜನ್ಮ ದಿನಾಂಕ ಪ್ರಮಾಣ ಪತ್ರ, ವಿಳಾಸ ಪ್ರಮಾಣಪತ್ರದೊಂದಿಗೆ ತಹಶೀಲ್ದಾರ ಕಚೇರಿಯಲ್ಲಿ ಈ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.<br /> <br /> ಈ ದೇಶ ಬಲಿಷ್ಠವಾಗಿ ಕಟ್ಟಲು ಹತ್ತು ಜನ ಯುವಕರು ತಮಗೆ ಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಭಾರತ ಅಭಿವೃದ್ಧಿ ದೇಶವಾಗಿ ರೂಪುಗೊಳ್ಳಬೇಕಾದರೆ ಆಳುವ ನಾಯಕರು ಅತ್ಯುತ್ತಮರಾಗಿರಬೇಕು. ಈ ಆಶಯ ಈಡೇರಬೇಕಾದರೆ ಯುವ ಮತದಾರರ ನೋಂದಣಿಯಿಂದ ಸಾಧ್ಯ ಎಂದು ಪಕ್ಷದ ಮುಖಂಡರು ಹೇಳಿದರು.<br /> <br /> ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮಹಾಂತೇಶ ಪಾಟೀಲ ಅತ್ತನೂರು, ನಗರ ಘಟಕದ ಅಧ್ಯಕ್ಷ ಬಿ ತಿಮ್ಮಾರೆಡ್ಡಿ, ನಗರ ಯುವ ಘಟಕದ ಅಧ್ಯಕ್ಷ ರಾಮಕೃಷ್ಣ ಆರ್, ಜಂಬುಲಿಂಗ ಯಾದವ್, ಖಲೀಲ್, ಅರಾಫತ್, ಆಂಜನೇಯ ವಕೀಲ, ಮಕ್ಬೂಲ್, ನಾಗರಾಜಸ್ವಾಮಿ, ಈರಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>