<p><strong>ಹೊಸಕೋಟೆ: </strong>ಯೋಗ ಕಲಿಯುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದೇ ಯೋಗ ಶಿಬಿರದ ಮುಖ್ಯ ಉದ್ದೇಶ ಎಂದು ರಾಷ್ಟ್ರೋತ್ಥಾನ ಪರಿಷತ್ನ ಯೋಗ ತಜ್ಞ ಕೇಶವಭಟ್ ಹೇಳಿದರು.<br /> <br /> ಹೊಸಕೋಟೆಯ ಸ್ವಾಮಿ ವಿವೇಕಾನಂದ ಯೋಗ ಶಿಕ್ಷಣ ಸಮಿತಿ ಇಲ್ಲಿನ ವಿವೇಕಾನಂದ ವಿದ್ಯಾಕೇಂದ್ರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 16 ನೇ ಉಚಿತ ಯೋಗ ತರಬೇತಿ ಶಿಬಿರದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. <br /> <br /> ಅಧ್ಯಕ್ಷತೆ ವಹಿಸಿದ್ದ ಪದ್ಮಪಾದಸ್ವಾಮಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳಸುವಂತೆ ಪೋಷಕರಿಗೆ ಕಿವಿಮಾತು ಹೇಳಿದರು. ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಅಧ್ಯಕ್ಷ ಮುನಿಶಾಮಣ್ಣ ಶಿಬಿರ ಉದ್ಘಾಟಿಸಿದರು. ಯೋಗ ಗುರುಗಳಾದ ಎಂ.ಆರ್.ನಾಗರಾಜ್, ಶಿವಕುಮಾರ್ ಉಪಸ್ಥಿತರಿದ್ದರು. ರಾಮಕೃಷ್ಣಪ್ಪ ಸ್ವಾಗತಿಸಿದರು.<br /> <br /> ಬ್ರಹ್ಮ ರಥೋತ್ಸವ: ತಾಲ್ಲೂಕಿನ ವಾಗಟ ಅಗ್ರಹಾರ ಗ್ರಾಮದ ಯೋಗಪುರಿ ವರದರಾಜಸ್ವಾಮಿ ಬ್ರಹ್ಮ ರಥೋತ್ಸವ ಮಾ. 27 ರಂದು ನಡೆಯಲಿದೆ. ಅದೇ ದಿನ ರಾತ್ರಿ `ಕೃಷ್ಣ ಸಂಧಾನ~ ಎಂಬ ಪೌರಾಣಿಕ ನಾಟಕ ಪ್ರದರ್ಶನವಾಗಲಿದೆ. ಮಾ.29 ರ ರಾತ್ರಿ ವರದರಾಜಸ್ವಾಮಿ ಮುತ್ತಿನ ಪಲ್ಲಕ್ಕಿ ಸೇರಿದಂತೆ ವಿವಿಧ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಯೋಗ ಕಲಿಯುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದೇ ಯೋಗ ಶಿಬಿರದ ಮುಖ್ಯ ಉದ್ದೇಶ ಎಂದು ರಾಷ್ಟ್ರೋತ್ಥಾನ ಪರಿಷತ್ನ ಯೋಗ ತಜ್ಞ ಕೇಶವಭಟ್ ಹೇಳಿದರು.<br /> <br /> ಹೊಸಕೋಟೆಯ ಸ್ವಾಮಿ ವಿವೇಕಾನಂದ ಯೋಗ ಶಿಕ್ಷಣ ಸಮಿತಿ ಇಲ್ಲಿನ ವಿವೇಕಾನಂದ ವಿದ್ಯಾಕೇಂದ್ರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 16 ನೇ ಉಚಿತ ಯೋಗ ತರಬೇತಿ ಶಿಬಿರದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. <br /> <br /> ಅಧ್ಯಕ್ಷತೆ ವಹಿಸಿದ್ದ ಪದ್ಮಪಾದಸ್ವಾಮಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳಸುವಂತೆ ಪೋಷಕರಿಗೆ ಕಿವಿಮಾತು ಹೇಳಿದರು. ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಅಧ್ಯಕ್ಷ ಮುನಿಶಾಮಣ್ಣ ಶಿಬಿರ ಉದ್ಘಾಟಿಸಿದರು. ಯೋಗ ಗುರುಗಳಾದ ಎಂ.ಆರ್.ನಾಗರಾಜ್, ಶಿವಕುಮಾರ್ ಉಪಸ್ಥಿತರಿದ್ದರು. ರಾಮಕೃಷ್ಣಪ್ಪ ಸ್ವಾಗತಿಸಿದರು.<br /> <br /> ಬ್ರಹ್ಮ ರಥೋತ್ಸವ: ತಾಲ್ಲೂಕಿನ ವಾಗಟ ಅಗ್ರಹಾರ ಗ್ರಾಮದ ಯೋಗಪುರಿ ವರದರಾಜಸ್ವಾಮಿ ಬ್ರಹ್ಮ ರಥೋತ್ಸವ ಮಾ. 27 ರಂದು ನಡೆಯಲಿದೆ. ಅದೇ ದಿನ ರಾತ್ರಿ `ಕೃಷ್ಣ ಸಂಧಾನ~ ಎಂಬ ಪೌರಾಣಿಕ ನಾಟಕ ಪ್ರದರ್ಶನವಾಗಲಿದೆ. ಮಾ.29 ರ ರಾತ್ರಿ ವರದರಾಜಸ್ವಾಮಿ ಮುತ್ತಿನ ಪಲ್ಲಕ್ಕಿ ಸೇರಿದಂತೆ ವಿವಿಧ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>