<p><strong>ಬೆಂಗಳೂರು: </strong>ಬಹುಕೋಟಿ ರೂಪಾಯಿ ಮೊತ್ತದ ಮೆಗಾಸಿಟಿ ಯೋಜನೆಯಲ್ಲಿ ಕಾರ್ಪೊರೇಟ್ ವಂಚನೆ, ಮೋಸ, ಸಹಿ ನಕಲು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿರುವ ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ಕ್ರಮ ಜರುಗಿಸುವ ವಿಷಯದಲ್ಲಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಮೀನಮೇಷ ಎಣಿಸುತ್ತಿದೆ.<br /> <br /> ಮೆಗಾಸಿಟಿ (ಬೆಂಗಳೂರು) ಡೆವಲಪರ್ಸ್ ಮತ್ತು ಬಿಲ್ಡರ್ಸ್ ಲಿಮಿಟೆಡ್ನ ನಿವೇಶನ ಸದಸ್ಯರ ಕಲ್ಯಾಣ ಸಂಘದ ಅಧ್ಯಕ್ಷ ರವೀಂದ್ರ ಬೆಳೆಯೂರು ಅವರು 2006ರಲ್ಲಿ ಸಲ್ಲಿಸಿದ ದೂರಿನ ಅನ್ವಯ ಕಾರ್ಪೊರೆಟ್ ವ್ಯವಹಾರಗಳ ಇಲಾಖೆ 2009ರ ಏಪ್ರಿಲ್ನಲ್ಲಿ `ಗಂಭೀರ ವಂಚನೆಗಳ ತನಿಖಾ ಕಚೇರಿ~ಗೆ (ಎಸ್ಎಫ್ಐಒ) ತನಿಖೆ ನಡೆಸಲು ಆದೇಶಿಸಿತು.<br /> <br /> ಕಂಪೆನಿ ಕಾಯ್ದೆ ಅಥವಾ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಯೋಗೀಶ್ವರ್ ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಎಸ್ಎಫ್ಐಒ ಶಿಫಾರಸು ಮಾಡಿದ್ದರೂ ಕಾರ್ಪೊರೆಟ್ ವ್ಯವಹಾರಗಳ ಇಲಾಖೆ ಯೋಗೀಶ್ವರ್ ಅವರ ಮೇಲೆ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.<br /> <br /> ಯೋಗೀಶ್ವರ್ ಅವರ ವಿರುದ್ಧ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ಕ್ರಮ ಜರುಗಿಸಬೇಕೋ ಅಥವಾ ರಾಜ್ಯದ ತನಿಖಾ ಸಂಸ್ಥೆಗಳು ಕ್ರಮಕ್ಕೆ ಮುಂದಾಗಬೇಕೋ ಎಂಬ ಕುರಿತು ಕಾನೂನು ಸಲಹೆ ಪಡೆಯಲಾಗುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಈ ಕುರಿತ ಗೊಂದಲ ಪರಿಹಾರ ಆಗುವವರೆಗೂ ಯೋಗೀಶ್ವರ್ ಅವರ ಮೇಲೆ ಯಾವುದೇ ಕ್ರಮ ಇಲ್ಲ ಎಂದು ಮೂಲಗಳು ಖಚಿತಪಡಿಸಿವೆ.<br /> ಎಸ್ಎಫ್ಐಒ ಜುಲೈ 30ರಂದು ಎರಡು ಸಾವಿರ ಪುಟಗಳ ತನಿಖಾ ವರದಿಯನ್ನು ಇಲಾಖೆಗೆ ಸಲ್ಲಿಸಿತು. <br /> <br /> ಇದರ ಪ್ರತಿಯೊಂದನ್ನು ಯೋಗೀಶ್ವರ್ ಮತ್ತು ಸಿಐಡಿಗೆ ಆಗಸ್ಟ್ ಕೊನೆ ವಾರದಲ್ಲಿ ಸಲ್ಲಿಸಿತು.<br /> ಸುಮಾರು 9,300 ಮಂದಿ ಹೂಡಿಕೆದಾರರನ್ನು ಮೋಸಗೊಳಿಸಿರುವ ಆರೋಪ ಎದುರಿಸುತ್ತಿರುವ ಯೋಗೀಶ್ವರ್ ಎಸ್ಎಫ್ಐಒಗೂ ದಾಖಲೆಗಳನ್ನು ಒದಗಿಸಿಲ್ಲ ಎನ್ನಲಾಗಿದೆ. ಯೋಗೀಶ್ವರ್ ಅವರ ವಕೀಲರು ಸಲ್ಲಿಸಿದ ದಾಖಲೆಗಳನ್ನು ಇಲಾಖೆ ಪರಿಶೀಲಿಸುತ್ತಿದೆ ಎಂದು ತಿಳಿದು ಬಂದಿದೆ.<br /> <br /> <strong>ಎಸ್ಎಫ್ಐಒ ವರದಿ ಪರಿಶೀಲನೆ:</strong> 2006ರ ನವೆಂಬರ್ನಲ್ಲಿ ಈ ಪ್ರಕರಣದ ತನಿಖೆ ಆರಂಭಿಸಿದ ಸಿಐಡಿ 2010ರ ಮಾರ್ಚ್ನಲ್ಲಿ ಆರೋಪ ಪಟ್ಟಿ ಸಲ್ಲಿಸಿತು. ಈ ಪ್ರಕರಣದ ವಿಚಾರಣೆ ಬಾಕಿ ಇದೆ. `ಎಸ್ಎಫ್ಐಒ ಸಲ್ಲಿಸಿದ ವರದಿಯನ್ನೂ ನಾವು ಪರಿಗಣಿಸುತ್ತೇವೆ~ ಎಂದು ಸಿಐಡಿಯ ಡಿಜಿಪಿ ಎಸ್. ಮುರುಗನ್ ತಿಳಿಸಿದರು. <br /> <br /> ಯೋಗೀಶ್ವರ್ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ನಿವೇಶನ ಸದಸ್ಯರ ಕಲ್ಯಾಣ ಸಂಘವು ರಾಜ್ಯಪಾಲ ಎಚ್.ಆರ್. ಭಾರದ್ವಾಜ್, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಆ. 30ರಂದು ಮನವಿ ಸಲ್ಲಿಸಿದೆ.<br /> <br /> ಯೋಗೀಶ್ವರ್ ಪ್ರತಿಕ್ರಿಯೆ: ಪ್ರಕರಣದ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದ ಯೋಗೀಶ್ವರ್, `ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನನ್ನನ್ನು ರಾಜಕೀಯವಾಗಿ ಗುರಿ ಮಾಡಿಕೊಂಡಿದ್ದಾರೆ~ ಎಂದರು. `ನನ್ನ ವಿರುದ್ಧ ಮಾಡಲಾಗುತ್ತಿರುವ ಈ ಆರೋಪಕ್ಕೆ ಕುಮಾರಸ್ವಾಮಿ ಕುಮ್ಮಕ್ಕು ನೀಡುತ್ತಿದ್ದಾರೆ. ಅವರು ಮ್ಯುಮಂತ್ರಿಯಾಗಿದ್ದಾಗಲೂ ನನ್ನನ್ನು ಗುರಿಯಾಗಿಸಿಕೊಂಡಿದ್ದರು. <br /> <br /> ನನ್ನ ಜನಪ್ರಿಯತೆ ಸಹಿಸಲು ಸಾಧ್ಯವಾಗದೆ ನನ್ನ ತೇಜೋವಧೆಗೆ ಯತ್ನಿಸುತ್ತಿದ್ದಾರೆ~ ಎಂದರು.ತಾವು ಯಾವುದೇ ಸಹಿಯನ್ನು ನಕಲು ಮಾಡಿಲ್ಲ ಎಂದ ಅವರು `ನನ್ನ ಪಾಸ್ಪೋರ್ಟ್ ನವೀಕರಿಸುವಾಗ ನನ್ನ ಹೆಸರು ಬೇರೆ ರೀತಿಯಲ್ಲಿ ನಮೂದಾಯಿತು. ಅದನ್ನು ಸರಿಪಡಿಸಲು ಇನ್ನೂ ಸಾಧ್ಯವಾಗಿಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಹುಕೋಟಿ ರೂಪಾಯಿ ಮೊತ್ತದ ಮೆಗಾಸಿಟಿ ಯೋಜನೆಯಲ್ಲಿ ಕಾರ್ಪೊರೇಟ್ ವಂಚನೆ, ಮೋಸ, ಸಹಿ ನಕಲು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿರುವ ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ಕ್ರಮ ಜರುಗಿಸುವ ವಿಷಯದಲ್ಲಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಮೀನಮೇಷ ಎಣಿಸುತ್ತಿದೆ.<br /> <br /> ಮೆಗಾಸಿಟಿ (ಬೆಂಗಳೂರು) ಡೆವಲಪರ್ಸ್ ಮತ್ತು ಬಿಲ್ಡರ್ಸ್ ಲಿಮಿಟೆಡ್ನ ನಿವೇಶನ ಸದಸ್ಯರ ಕಲ್ಯಾಣ ಸಂಘದ ಅಧ್ಯಕ್ಷ ರವೀಂದ್ರ ಬೆಳೆಯೂರು ಅವರು 2006ರಲ್ಲಿ ಸಲ್ಲಿಸಿದ ದೂರಿನ ಅನ್ವಯ ಕಾರ್ಪೊರೆಟ್ ವ್ಯವಹಾರಗಳ ಇಲಾಖೆ 2009ರ ಏಪ್ರಿಲ್ನಲ್ಲಿ `ಗಂಭೀರ ವಂಚನೆಗಳ ತನಿಖಾ ಕಚೇರಿ~ಗೆ (ಎಸ್ಎಫ್ಐಒ) ತನಿಖೆ ನಡೆಸಲು ಆದೇಶಿಸಿತು.<br /> <br /> ಕಂಪೆನಿ ಕಾಯ್ದೆ ಅಥವಾ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಯೋಗೀಶ್ವರ್ ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಎಸ್ಎಫ್ಐಒ ಶಿಫಾರಸು ಮಾಡಿದ್ದರೂ ಕಾರ್ಪೊರೆಟ್ ವ್ಯವಹಾರಗಳ ಇಲಾಖೆ ಯೋಗೀಶ್ವರ್ ಅವರ ಮೇಲೆ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.<br /> <br /> ಯೋಗೀಶ್ವರ್ ಅವರ ವಿರುದ್ಧ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ಕ್ರಮ ಜರುಗಿಸಬೇಕೋ ಅಥವಾ ರಾಜ್ಯದ ತನಿಖಾ ಸಂಸ್ಥೆಗಳು ಕ್ರಮಕ್ಕೆ ಮುಂದಾಗಬೇಕೋ ಎಂಬ ಕುರಿತು ಕಾನೂನು ಸಲಹೆ ಪಡೆಯಲಾಗುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಈ ಕುರಿತ ಗೊಂದಲ ಪರಿಹಾರ ಆಗುವವರೆಗೂ ಯೋಗೀಶ್ವರ್ ಅವರ ಮೇಲೆ ಯಾವುದೇ ಕ್ರಮ ಇಲ್ಲ ಎಂದು ಮೂಲಗಳು ಖಚಿತಪಡಿಸಿವೆ.<br /> ಎಸ್ಎಫ್ಐಒ ಜುಲೈ 30ರಂದು ಎರಡು ಸಾವಿರ ಪುಟಗಳ ತನಿಖಾ ವರದಿಯನ್ನು ಇಲಾಖೆಗೆ ಸಲ್ಲಿಸಿತು. <br /> <br /> ಇದರ ಪ್ರತಿಯೊಂದನ್ನು ಯೋಗೀಶ್ವರ್ ಮತ್ತು ಸಿಐಡಿಗೆ ಆಗಸ್ಟ್ ಕೊನೆ ವಾರದಲ್ಲಿ ಸಲ್ಲಿಸಿತು.<br /> ಸುಮಾರು 9,300 ಮಂದಿ ಹೂಡಿಕೆದಾರರನ್ನು ಮೋಸಗೊಳಿಸಿರುವ ಆರೋಪ ಎದುರಿಸುತ್ತಿರುವ ಯೋಗೀಶ್ವರ್ ಎಸ್ಎಫ್ಐಒಗೂ ದಾಖಲೆಗಳನ್ನು ಒದಗಿಸಿಲ್ಲ ಎನ್ನಲಾಗಿದೆ. ಯೋಗೀಶ್ವರ್ ಅವರ ವಕೀಲರು ಸಲ್ಲಿಸಿದ ದಾಖಲೆಗಳನ್ನು ಇಲಾಖೆ ಪರಿಶೀಲಿಸುತ್ತಿದೆ ಎಂದು ತಿಳಿದು ಬಂದಿದೆ.<br /> <br /> <strong>ಎಸ್ಎಫ್ಐಒ ವರದಿ ಪರಿಶೀಲನೆ:</strong> 2006ರ ನವೆಂಬರ್ನಲ್ಲಿ ಈ ಪ್ರಕರಣದ ತನಿಖೆ ಆರಂಭಿಸಿದ ಸಿಐಡಿ 2010ರ ಮಾರ್ಚ್ನಲ್ಲಿ ಆರೋಪ ಪಟ್ಟಿ ಸಲ್ಲಿಸಿತು. ಈ ಪ್ರಕರಣದ ವಿಚಾರಣೆ ಬಾಕಿ ಇದೆ. `ಎಸ್ಎಫ್ಐಒ ಸಲ್ಲಿಸಿದ ವರದಿಯನ್ನೂ ನಾವು ಪರಿಗಣಿಸುತ್ತೇವೆ~ ಎಂದು ಸಿಐಡಿಯ ಡಿಜಿಪಿ ಎಸ್. ಮುರುಗನ್ ತಿಳಿಸಿದರು. <br /> <br /> ಯೋಗೀಶ್ವರ್ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ನಿವೇಶನ ಸದಸ್ಯರ ಕಲ್ಯಾಣ ಸಂಘವು ರಾಜ್ಯಪಾಲ ಎಚ್.ಆರ್. ಭಾರದ್ವಾಜ್, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಆ. 30ರಂದು ಮನವಿ ಸಲ್ಲಿಸಿದೆ.<br /> <br /> ಯೋಗೀಶ್ವರ್ ಪ್ರತಿಕ್ರಿಯೆ: ಪ್ರಕರಣದ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದ ಯೋಗೀಶ್ವರ್, `ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನನ್ನನ್ನು ರಾಜಕೀಯವಾಗಿ ಗುರಿ ಮಾಡಿಕೊಂಡಿದ್ದಾರೆ~ ಎಂದರು. `ನನ್ನ ವಿರುದ್ಧ ಮಾಡಲಾಗುತ್ತಿರುವ ಈ ಆರೋಪಕ್ಕೆ ಕುಮಾರಸ್ವಾಮಿ ಕುಮ್ಮಕ್ಕು ನೀಡುತ್ತಿದ್ದಾರೆ. ಅವರು ಮ್ಯುಮಂತ್ರಿಯಾಗಿದ್ದಾಗಲೂ ನನ್ನನ್ನು ಗುರಿಯಾಗಿಸಿಕೊಂಡಿದ್ದರು. <br /> <br /> ನನ್ನ ಜನಪ್ರಿಯತೆ ಸಹಿಸಲು ಸಾಧ್ಯವಾಗದೆ ನನ್ನ ತೇಜೋವಧೆಗೆ ಯತ್ನಿಸುತ್ತಿದ್ದಾರೆ~ ಎಂದರು.ತಾವು ಯಾವುದೇ ಸಹಿಯನ್ನು ನಕಲು ಮಾಡಿಲ್ಲ ಎಂದ ಅವರು `ನನ್ನ ಪಾಸ್ಪೋರ್ಟ್ ನವೀಕರಿಸುವಾಗ ನನ್ನ ಹೆಸರು ಬೇರೆ ರೀತಿಯಲ್ಲಿ ನಮೂದಾಯಿತು. ಅದನ್ನು ಸರಿಪಡಿಸಲು ಇನ್ನೂ ಸಾಧ್ಯವಾಗಿಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>