<p><strong>ನವದೆಹಲಿ (ಪಿಟಿಐ):</strong> ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಅಧ್ಯಕ್ಷ ಸಿ. ರಂಗರಾಜನ್ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಅನುಮೋದಿಸಿದರೆ, ಇನ್ನು ಮುಂದೆ ಮುಖ್ಯಮಂತ್ರಿಗಳು ಪ್ರತಿ ವರ್ಷ ವಾರ್ಷಿಕ ಯೋಜನಾ ವೆಚ್ಚದ ಅನುಮೋದನೆಗಾಗಿ ಕೇಂದ್ರ ಯೋಜನಾ ಭವನಕ್ಕೆ ಅಲೆಯುವ ಅಗತ್ಯವಿಲ್ಲ. <br /> `ಯೋಜನೆ ಮತ್ತು ಯೋಜನೇತರ ವೆಚ್ಚದ ನಡುವಿನ ಅಂತರವನ್ನು ತೆಗೆದುಹಾಕಿದರೆ, ಸದ್ಯ ಜಾರಿಯಲ್ಲಿರುವ ವಾರ್ಷಿಕ ಯೋಜನಾ ವೆಚ್ಚದ ಅನುಮೋದನೆಯ ಅಗತ್ಯ ಬೀಳುವುದಿಲ್ಲ ಎಂದು ಸರ್ಕಾರಿ ಆಯವ್ಯಯ ನಿರ್ವಹಣೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಅಭಿಪ್ರಾಯಟ್ಟಿದೆ. ರಂಗರಾಜನ್ ನೇತೃತ್ವದ ಈ ಸಮಿತಿ, ಕಳೆದ ಏಪ್ರಿಲ್ನಲ್ಲಿ ಸರ್ಕಾರಿ ಆಯವ್ಯಯ ನಿರ್ವಹಣೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿತ್ತು. <br /> <br /> ಸದ್ಯ ಜಾರಿಯಲ್ಲಿರುವ ಕ್ರಮದಂತೆ, ರಾಜ್ಯಗಳ ಮುಖ್ಯಮಂತ್ರಿಗಳು ವಾರ್ಷಿಕ ಯೋಜನಾ ವೆಚ್ಚದ ಅನುಮೋದನೆಗಾಗಿ ಪ್ರತಿ ವರ್ಷವೂ ಯೋಜನಾ ಆಯೋಗಕ್ಕೆ ಭೇಟಿ ನೀಡಬೇಕು. <br /> <br /> ಯೋಜನಾ ಆಯೋಗದ ಉಪಾಧ್ಯಕ್ಷರೊಂದಿಗೆ ನಡೆಯುವ ಚರ್ಚೆಯಲ್ಲಿ ಮುಖ್ಯಮಂತ್ರಿಗಳ ಜತೆಗೆ ಆಯಾ ರಾಜ್ಯಗಳ ಉನ್ನತ ಅಧಿಕಾರಿಗಳು ಮತ್ತು ಸಚಿವರು ಭಾಗವಹಿಸಬೇಕು ಎನ್ನುವ ನಿಯಮವಿದೆ. <br /> ಈ ಪದ್ಧತಿಯಲ್ಲಿ ಸುಧಾರಣೆ ತರುವುದು ಸಮಿತಿಯ ಉದ್ದೇಶವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಅಧ್ಯಕ್ಷ ಸಿ. ರಂಗರಾಜನ್ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಅನುಮೋದಿಸಿದರೆ, ಇನ್ನು ಮುಂದೆ ಮುಖ್ಯಮಂತ್ರಿಗಳು ಪ್ರತಿ ವರ್ಷ ವಾರ್ಷಿಕ ಯೋಜನಾ ವೆಚ್ಚದ ಅನುಮೋದನೆಗಾಗಿ ಕೇಂದ್ರ ಯೋಜನಾ ಭವನಕ್ಕೆ ಅಲೆಯುವ ಅಗತ್ಯವಿಲ್ಲ. <br /> `ಯೋಜನೆ ಮತ್ತು ಯೋಜನೇತರ ವೆಚ್ಚದ ನಡುವಿನ ಅಂತರವನ್ನು ತೆಗೆದುಹಾಕಿದರೆ, ಸದ್ಯ ಜಾರಿಯಲ್ಲಿರುವ ವಾರ್ಷಿಕ ಯೋಜನಾ ವೆಚ್ಚದ ಅನುಮೋದನೆಯ ಅಗತ್ಯ ಬೀಳುವುದಿಲ್ಲ ಎಂದು ಸರ್ಕಾರಿ ಆಯವ್ಯಯ ನಿರ್ವಹಣೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಅಭಿಪ್ರಾಯಟ್ಟಿದೆ. ರಂಗರಾಜನ್ ನೇತೃತ್ವದ ಈ ಸಮಿತಿ, ಕಳೆದ ಏಪ್ರಿಲ್ನಲ್ಲಿ ಸರ್ಕಾರಿ ಆಯವ್ಯಯ ನಿರ್ವಹಣೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿತ್ತು. <br /> <br /> ಸದ್ಯ ಜಾರಿಯಲ್ಲಿರುವ ಕ್ರಮದಂತೆ, ರಾಜ್ಯಗಳ ಮುಖ್ಯಮಂತ್ರಿಗಳು ವಾರ್ಷಿಕ ಯೋಜನಾ ವೆಚ್ಚದ ಅನುಮೋದನೆಗಾಗಿ ಪ್ರತಿ ವರ್ಷವೂ ಯೋಜನಾ ಆಯೋಗಕ್ಕೆ ಭೇಟಿ ನೀಡಬೇಕು. <br /> <br /> ಯೋಜನಾ ಆಯೋಗದ ಉಪಾಧ್ಯಕ್ಷರೊಂದಿಗೆ ನಡೆಯುವ ಚರ್ಚೆಯಲ್ಲಿ ಮುಖ್ಯಮಂತ್ರಿಗಳ ಜತೆಗೆ ಆಯಾ ರಾಜ್ಯಗಳ ಉನ್ನತ ಅಧಿಕಾರಿಗಳು ಮತ್ತು ಸಚಿವರು ಭಾಗವಹಿಸಬೇಕು ಎನ್ನುವ ನಿಯಮವಿದೆ. <br /> ಈ ಪದ್ಧತಿಯಲ್ಲಿ ಸುಧಾರಣೆ ತರುವುದು ಸಮಿತಿಯ ಉದ್ದೇಶವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>