<p>ಮಂಡ್ಯ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ವಿವಿಧ ಯೋಜನೆಗಳ ಲಾಭವನ್ನು ಕಾರ್ಮಿಕರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಮಿಕ ಘಟಕವು ಶಕ್ತಿ ಮೀರಿ ಯತ್ನಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಭಾನುವಾರ ಸಲಹೆ ನೀಡಿದರು.<br /> <br /> ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಮತ್ತು ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಜನ್ಮದಿನ ಆಚರಣೆ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಮಜ್ದೂರ್ ಕಾಂಗ್ರೆಸ್ ಘಟಕವು ಪಕ್ಷವನ್ನು ಬಲಪಡಿಸಲು ನಿರೀಕ್ಷಿತ ಕೆಲಸ ಮಾಡುತ್ತಿದೆ. ಕಾರ್ಮಿಕರ ಸಮುದಾಯಕ್ಕೆ ವಿವಿಧ ಯೋಜನೆಗಳಿದ್ದು, ಅವುಗಳನ್ನು ಸಮರ್ಪಕವಾಗಿ ತಲುಪಿಸಲು ಕ್ರಮಕೈಗೊಳ್ಳಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ಜಿ.ಪಂ. ಮಾಜಿ ಸದಸ್ಯೆ ಸರೋಜಮ್ಮ ಮಾತನಾಡಿದರು. ಮಾಜಿ ಶಾಸಕ ಎಸ್.ಎಂ.ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. <br /> <br /> ಮಜ್ದೂರ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುದರ್ಶನ್, ಹಾಲಹಳ್ಳಿ ರಾಮಲಿಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಜಿ.ರಾಜು, ಹನ್ಸಿಯಾಬಾನು, ಮುಖಂಡ ಲಿಂಗಯ್ಯ, ಗ್ರಾಮಾಂತರ ಘಟಕದ ಅಧ್ಯಕ್ಷ ಜಿ.ಸಿ.ಆನಂದ್, ನಗರ ಘಟಕದ ಅಧ್ಯಕ್ಷ ಜಬೀವುಲ್ಲಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ವಿವಿಧ ಯೋಜನೆಗಳ ಲಾಭವನ್ನು ಕಾರ್ಮಿಕರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಮಿಕ ಘಟಕವು ಶಕ್ತಿ ಮೀರಿ ಯತ್ನಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಭಾನುವಾರ ಸಲಹೆ ನೀಡಿದರು.<br /> <br /> ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಮತ್ತು ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಜನ್ಮದಿನ ಆಚರಣೆ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಮಜ್ದೂರ್ ಕಾಂಗ್ರೆಸ್ ಘಟಕವು ಪಕ್ಷವನ್ನು ಬಲಪಡಿಸಲು ನಿರೀಕ್ಷಿತ ಕೆಲಸ ಮಾಡುತ್ತಿದೆ. ಕಾರ್ಮಿಕರ ಸಮುದಾಯಕ್ಕೆ ವಿವಿಧ ಯೋಜನೆಗಳಿದ್ದು, ಅವುಗಳನ್ನು ಸಮರ್ಪಕವಾಗಿ ತಲುಪಿಸಲು ಕ್ರಮಕೈಗೊಳ್ಳಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ಜಿ.ಪಂ. ಮಾಜಿ ಸದಸ್ಯೆ ಸರೋಜಮ್ಮ ಮಾತನಾಡಿದರು. ಮಾಜಿ ಶಾಸಕ ಎಸ್.ಎಂ.ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. <br /> <br /> ಮಜ್ದೂರ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುದರ್ಶನ್, ಹಾಲಹಳ್ಳಿ ರಾಮಲಿಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಜಿ.ರಾಜು, ಹನ್ಸಿಯಾಬಾನು, ಮುಖಂಡ ಲಿಂಗಯ್ಯ, ಗ್ರಾಮಾಂತರ ಘಟಕದ ಅಧ್ಯಕ್ಷ ಜಿ.ಸಿ.ಆನಂದ್, ನಗರ ಘಟಕದ ಅಧ್ಯಕ್ಷ ಜಬೀವುಲ್ಲಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>