<p>ಮೊಳಕಾಲ್ಮುರು: ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಲ್ಲೂಕು ಪಂಚಾಯ್ತಿ ಇಒ ರುದ್ರಮುನಿಯಪ್ಪ ಸೂಚಿಸಿದರು.<br /> <br /> ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಗುರುವಾರ ಉದ್ಯೋಗಖಾತ್ರಿ ಯೋಜನೆಯ ಕಾಯಕಬಂಧು, ಪಿಡಿಒ ಹಾಗೂ ಜನಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ನೂತನವಾಗಿ ಖಾತ್ರಿ ಯೋಜನೆ ಯಲ್ಲಿ ಕಾಯಕಬಂಧು ಹುದ್ದೆ ಸೃಷ್ಟಿ ಮಾಡಲಾಗಿದೆ. 20–25 ಮಂದಿ ಕಾರ್ಮಿಕರ ಗುಂಪು ರಚಿಸಿಕೊಂಡು ಗ್ರಾಮಪಂಚಾಯ್ತಿ ಅನುಮತಿ ಪಡೆದು ಕಾಮಗಾರಿ ಮಾಡಬೇಕು. ಕಾಯಕಬಂಧು ವ್ಯಕ್ತಿಗೆ ಪ್ರತಿ ಕಾರ್ಮಿಕರಿಗೆ ₨ 3ರಂತೆ ನೀಡಲಾಗುವುದು. ಒಂದು ರೀತಿ ಮೇಸ್ತ್ರಿ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.<br /> <br /> ನೂತನವಾಗಿ ಯೋಜನೆಯಲ್ಲಿ ನಮ್ಮಹೊಲ ನಮ್ಮರಸ್ತೆ, ವೈಯಕ್ತಿಕ ಶೌಚಾಲಯ ನಿರ್ಮಾಣ, ಆಟದ ಮೈದಾನ, ಅರಣ್ಯೀಕರಣ, ಕುಡಿಯುವ ನೀರಿನ ತೊಟ್ಟಿ, ಜಾನುವಾರು ಸಾಕಣೆ ಸ್ಥಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ.<br /> <br /> ಗ್ರಾಮ ಸಭೆಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅನುಕೂಲ ಕಲ್ಪಿಸಬೇಕು. ಬರ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ಗುಳೆ ಹೋಗದಂತೆ ತಡೆದು ಖಾತ್ರಿ ಯೋಜನೆಯಲ್ಲಿ ಉದ್ಯೋಗ ನೀಡಬೇಕು ಎಂದು ಹೇಳಿದರು.<br /> <br /> ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಈವರೆಗೆ ಪರಿಶಿಷ್ಟ ಜಾತಿ, ಪಂಗಡದವರಿಗೆ ₨ 10 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿತ್ತು, ಇದನ್ನು ನೂತನವಾಗಿ ₨ 15 ಸಾವಿರಕ್ಕೆ ಏರಿಸಲಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಿ ಕಡ್ಡಾಯವಾಗಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯ್ತಿ ಕ್ರಮ ಕೈಗೊಳ್ಳಬೇಕು.<br /> <br /> ಯೋಜನೆ ಬಗ್ಗೆ ಕರಪತ್ರ, ಆಟೊ ಪ್ರಚಾರ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು. ತಪ್ಪಿದಲ್ಲಿ ಪಿಡಿಒಗಳನ್ನು ಹೊಣೆಯಾಗಿಸಲಾಗುವುದು ಎಂದು ಇಒ ಹೇಳಿದರು. ಸಹಾಯಕ ಲೆಕ್ಕಾಧಿಕಾರಿ ಪಾಲಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಲ್ಲೂಕು ಪಂಚಾಯ್ತಿ ಇಒ ರುದ್ರಮುನಿಯಪ್ಪ ಸೂಚಿಸಿದರು.<br /> <br /> ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಗುರುವಾರ ಉದ್ಯೋಗಖಾತ್ರಿ ಯೋಜನೆಯ ಕಾಯಕಬಂಧು, ಪಿಡಿಒ ಹಾಗೂ ಜನಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ನೂತನವಾಗಿ ಖಾತ್ರಿ ಯೋಜನೆ ಯಲ್ಲಿ ಕಾಯಕಬಂಧು ಹುದ್ದೆ ಸೃಷ್ಟಿ ಮಾಡಲಾಗಿದೆ. 20–25 ಮಂದಿ ಕಾರ್ಮಿಕರ ಗುಂಪು ರಚಿಸಿಕೊಂಡು ಗ್ರಾಮಪಂಚಾಯ್ತಿ ಅನುಮತಿ ಪಡೆದು ಕಾಮಗಾರಿ ಮಾಡಬೇಕು. ಕಾಯಕಬಂಧು ವ್ಯಕ್ತಿಗೆ ಪ್ರತಿ ಕಾರ್ಮಿಕರಿಗೆ ₨ 3ರಂತೆ ನೀಡಲಾಗುವುದು. ಒಂದು ರೀತಿ ಮೇಸ್ತ್ರಿ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.<br /> <br /> ನೂತನವಾಗಿ ಯೋಜನೆಯಲ್ಲಿ ನಮ್ಮಹೊಲ ನಮ್ಮರಸ್ತೆ, ವೈಯಕ್ತಿಕ ಶೌಚಾಲಯ ನಿರ್ಮಾಣ, ಆಟದ ಮೈದಾನ, ಅರಣ್ಯೀಕರಣ, ಕುಡಿಯುವ ನೀರಿನ ತೊಟ್ಟಿ, ಜಾನುವಾರು ಸಾಕಣೆ ಸ್ಥಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ.<br /> <br /> ಗ್ರಾಮ ಸಭೆಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅನುಕೂಲ ಕಲ್ಪಿಸಬೇಕು. ಬರ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ಗುಳೆ ಹೋಗದಂತೆ ತಡೆದು ಖಾತ್ರಿ ಯೋಜನೆಯಲ್ಲಿ ಉದ್ಯೋಗ ನೀಡಬೇಕು ಎಂದು ಹೇಳಿದರು.<br /> <br /> ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಈವರೆಗೆ ಪರಿಶಿಷ್ಟ ಜಾತಿ, ಪಂಗಡದವರಿಗೆ ₨ 10 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿತ್ತು, ಇದನ್ನು ನೂತನವಾಗಿ ₨ 15 ಸಾವಿರಕ್ಕೆ ಏರಿಸಲಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಿ ಕಡ್ಡಾಯವಾಗಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯ್ತಿ ಕ್ರಮ ಕೈಗೊಳ್ಳಬೇಕು.<br /> <br /> ಯೋಜನೆ ಬಗ್ಗೆ ಕರಪತ್ರ, ಆಟೊ ಪ್ರಚಾರ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು. ತಪ್ಪಿದಲ್ಲಿ ಪಿಡಿಒಗಳನ್ನು ಹೊಣೆಯಾಗಿಸಲಾಗುವುದು ಎಂದು ಇಒ ಹೇಳಿದರು. ಸಹಾಯಕ ಲೆಕ್ಕಾಧಿಕಾರಿ ಪಾಲಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>