<p>ವಿಜಯಪುರ: ಸಮೀಪದ ಪಿ.ರಂಗನಾಥಪುರದ ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾದ ಕೆಎಸ್ಆರ್ಟಿಸಿ ನೂತನ ಬಸ್ ಸಂಚಾರಕ್ಕೆ ಭಾನುವಾರ ಚಾಲನೆ ನೀಡಲಾಯಿತು.<br /> <br /> ಚಿಕ್ಕಬಳಾಪುರದಿಂದ ಪಿ.ರಂಗನಾಥಪುರ ಮಾರ್ಗವಾಗಿ ವಿಜಯಪುರ ತಲುಪುವ ಕೆಎಸ್ಆರ್ಟಿಸಿ ಬಸ್ಗೆ ಹಸಿರು ನಿಶಾನೆ ತೊರಿ ಮಾತನಾಡಿದ ಗೊಡ್ಲು ಮುದ್ದೇನಹಳ್ಳಿ ಪಂಚಾಯ್ತಿ ಸದಸ್ಯ ಚಲುಪನ ನಟರಾಜ್, ಶಾಲಾ ಕಾಲೇಜುಗಳಿಗೆ ವಿಜಯಪುರಕ್ಕೆ ಬಂದು ಹೋಗುವ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಇದರಿಂದ ಸಂತಸವಾಗಿದೆ ಎಂದರು.<br /> <br /> ಸಮೀಪದ ಕಂತಳ್ಳಿ, ಸಿ.ಎನ್. ಹೊಸೂರು, ಎ.ರಂಗನಾಥಪುರ, ಪಿ.ರಂಗನಾಥಪುರ, ಕೊಮ್ಮಸಂದ್ರ, ಚಂದೇನಹಳ್ಳಿ ಕಡೆಯಿಂದ 150 ಕ್ಕೂ ಹೆಚ್ಚು ಮಕ್ಕಳು ವಿಜಯಪುರದ ಶಾಲಾ ಕಾಲೇಜುಗಳಿಗೆ ನಿತ್ಯವೂ ಬರುತ್ತಾರೆ. ಇವರಿಗೆ ಬಸ್ ವ್ಯವಸ್ಥೆ ಇಲ್ಲದೆ ಅನಾನುಕೂಲವಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಬಹಳ ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದರು. ಈಗ ಈ ಸೌಲಭ್ಯ ದೊರೆತಿದೆ ಎಂದರು.<br /> <br /> ಚಿಕ್ಕಬಳ್ಳಾಪುರದಿಂದ ಬೆಳಗ್ಗೆ 9 ಗಂಟೆಗೆ ಪಿ.ರಂಗನಾಥಪುರ ಮಾರ್ಗವಾಗಿ ವಿಜಯಪುರಕ್ಕೆ ಬರುವ ಬಸ್ ಅನ್ನು ಸಂಜೆ ವಿಜಯಪುರದಿಂದ 5 ಗಂಟೆಗೆ ಪಿ. ರಂಗನಾಥಪುರ ಮಾರ್ಗವಾಗಿ ಚಿಕ್ಕಬಳ್ಳಾಪುರಕ್ಕೆ ಹೋಗುವ ವ್ಯವಸ್ಥೆ ಮಾಡಿದರೆ ಗ್ರಾಮಸ್ಥರಿಗೆ ಹಾಗೂ ಶಾಲಾ-ಕಾಲೇಜು ಮಕ್ಕಳಿಗೆ ಓಡಾಡಲು ಇನ್ನೂ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಶಾಸಕರಲ್ಲಿ ತಾವು ಮನವಿ ಮಾಡುವುದಾಗಿಯೂ ಅವರು ತಿಳಿಸಿದರು.<br /> <br /> ಗೊಡ್ಲು ಮುದ್ದೇನಹಳ್ಳಿ ಪಂಚಾಯ್ತಿ ಸದಸ್ಯ ಮುನಿರಾಜು, ಪಿ.ರಂಗನಾಥಪುರ ಕಾಂಗ್ರೆಸ್ ಬೂತ್ ಅಧ್ಯಕ್ಷ ನಾರಾಯಣ ಸ್ವಾಮಿ, ಉಪಾಧ್ಯಕ್ಷ ಶಿವರಾಜ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಸಮೀಪದ ಪಿ.ರಂಗನಾಥಪುರದ ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾದ ಕೆಎಸ್ಆರ್ಟಿಸಿ ನೂತನ ಬಸ್ ಸಂಚಾರಕ್ಕೆ ಭಾನುವಾರ ಚಾಲನೆ ನೀಡಲಾಯಿತು.<br /> <br /> ಚಿಕ್ಕಬಳಾಪುರದಿಂದ ಪಿ.ರಂಗನಾಥಪುರ ಮಾರ್ಗವಾಗಿ ವಿಜಯಪುರ ತಲುಪುವ ಕೆಎಸ್ಆರ್ಟಿಸಿ ಬಸ್ಗೆ ಹಸಿರು ನಿಶಾನೆ ತೊರಿ ಮಾತನಾಡಿದ ಗೊಡ್ಲು ಮುದ್ದೇನಹಳ್ಳಿ ಪಂಚಾಯ್ತಿ ಸದಸ್ಯ ಚಲುಪನ ನಟರಾಜ್, ಶಾಲಾ ಕಾಲೇಜುಗಳಿಗೆ ವಿಜಯಪುರಕ್ಕೆ ಬಂದು ಹೋಗುವ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಇದರಿಂದ ಸಂತಸವಾಗಿದೆ ಎಂದರು.<br /> <br /> ಸಮೀಪದ ಕಂತಳ್ಳಿ, ಸಿ.ಎನ್. ಹೊಸೂರು, ಎ.ರಂಗನಾಥಪುರ, ಪಿ.ರಂಗನಾಥಪುರ, ಕೊಮ್ಮಸಂದ್ರ, ಚಂದೇನಹಳ್ಳಿ ಕಡೆಯಿಂದ 150 ಕ್ಕೂ ಹೆಚ್ಚು ಮಕ್ಕಳು ವಿಜಯಪುರದ ಶಾಲಾ ಕಾಲೇಜುಗಳಿಗೆ ನಿತ್ಯವೂ ಬರುತ್ತಾರೆ. ಇವರಿಗೆ ಬಸ್ ವ್ಯವಸ್ಥೆ ಇಲ್ಲದೆ ಅನಾನುಕೂಲವಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಬಹಳ ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದರು. ಈಗ ಈ ಸೌಲಭ್ಯ ದೊರೆತಿದೆ ಎಂದರು.<br /> <br /> ಚಿಕ್ಕಬಳ್ಳಾಪುರದಿಂದ ಬೆಳಗ್ಗೆ 9 ಗಂಟೆಗೆ ಪಿ.ರಂಗನಾಥಪುರ ಮಾರ್ಗವಾಗಿ ವಿಜಯಪುರಕ್ಕೆ ಬರುವ ಬಸ್ ಅನ್ನು ಸಂಜೆ ವಿಜಯಪುರದಿಂದ 5 ಗಂಟೆಗೆ ಪಿ. ರಂಗನಾಥಪುರ ಮಾರ್ಗವಾಗಿ ಚಿಕ್ಕಬಳ್ಳಾಪುರಕ್ಕೆ ಹೋಗುವ ವ್ಯವಸ್ಥೆ ಮಾಡಿದರೆ ಗ್ರಾಮಸ್ಥರಿಗೆ ಹಾಗೂ ಶಾಲಾ-ಕಾಲೇಜು ಮಕ್ಕಳಿಗೆ ಓಡಾಡಲು ಇನ್ನೂ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಶಾಸಕರಲ್ಲಿ ತಾವು ಮನವಿ ಮಾಡುವುದಾಗಿಯೂ ಅವರು ತಿಳಿಸಿದರು.<br /> <br /> ಗೊಡ್ಲು ಮುದ್ದೇನಹಳ್ಳಿ ಪಂಚಾಯ್ತಿ ಸದಸ್ಯ ಮುನಿರಾಜು, ಪಿ.ರಂಗನಾಥಪುರ ಕಾಂಗ್ರೆಸ್ ಬೂತ್ ಅಧ್ಯಕ್ಷ ನಾರಾಯಣ ಸ್ವಾಮಿ, ಉಪಾಧ್ಯಕ್ಷ ಶಿವರಾಜ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>