<p><strong>ಚಾಮರಾಜನಗರ: </strong>ಜಿಲ್ಲಾ ಕೇಂದ್ರದಲ್ಲಿ ಪ್ರಗತಿಯಲ್ಲಿರುವ ರಂಗ ಮಂದಿರ, ಡಾ.ಬಿ.ಆರ್. ಅಂಬೇಡ್ಕರ್ ಭವನ ಹಿಂಭಾಗದ ಊಟದ ಸಭಾಂಗಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಸಂಸದ ಆರ್.ಧ್ರುವನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಪರಿಶೀಲಿಸಿದರು.<br /> <br /> ಸಂಸದ ಧ್ರುವನಾರಾಯಣ ಮಾತನಾಡಿ, ತ್ವರಿತವಾಗಿ ರಂಗ ಮಂದಿರದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಕಲಾವಿದರ ಅಭಿವೃದ್ಧಿಗೆ ಪೂರಕವಾದ ಭವನ ನಿರ್ಮಿಸಬೇಕು ಎಂದು ಸೂಚಿಸಿದರು.<br /> <br /> ರಂಗ ಮಂದಿರದ ಮುಂಭಾಗ ಉದ್ಯಾನ ನಿರ್ಮಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ, ಶೇ. 60ರಷ್ಟು ಕಾಮಗಾರಿ ಮುಗಿದಿದೆ. ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾಂಸ್ಕೃತಿಕ ಚಟುವಟಿಕೆ ಹಮ್ಮಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.<br /> <br /> ಮೂಲ ಸೌಲಭ್ಯ ಇಲ್ಲದೆ ಅಂಬೇಡ್ಕರ್ ಭವನ ಬಳಕೆಯಾಗುತ್ತಿಲ್ಲ. ಕೂಡಲೇ, ಅಡುಗೆ ಕೋಣೆ, ಊಟದ ಹಾಲ್ ಹಾಗೂ ಶೌಚಾಲಯ ನಿರ್ಮಾಣ ಮಾಡಬೇಕು. ಶುಭ ಸಮಾರಂಭ ಹಾಗೂ ಸಭೆಗಳಿಗೆ ಬಳಕೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲಾ ಕೇಂದ್ರದಲ್ಲಿ ಪ್ರಗತಿಯಲ್ಲಿರುವ ರಂಗ ಮಂದಿರ, ಡಾ.ಬಿ.ಆರ್. ಅಂಬೇಡ್ಕರ್ ಭವನ ಹಿಂಭಾಗದ ಊಟದ ಸಭಾಂಗಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಸಂಸದ ಆರ್.ಧ್ರುವನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಪರಿಶೀಲಿಸಿದರು.<br /> <br /> ಸಂಸದ ಧ್ರುವನಾರಾಯಣ ಮಾತನಾಡಿ, ತ್ವರಿತವಾಗಿ ರಂಗ ಮಂದಿರದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಕಲಾವಿದರ ಅಭಿವೃದ್ಧಿಗೆ ಪೂರಕವಾದ ಭವನ ನಿರ್ಮಿಸಬೇಕು ಎಂದು ಸೂಚಿಸಿದರು.<br /> <br /> ರಂಗ ಮಂದಿರದ ಮುಂಭಾಗ ಉದ್ಯಾನ ನಿರ್ಮಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ, ಶೇ. 60ರಷ್ಟು ಕಾಮಗಾರಿ ಮುಗಿದಿದೆ. ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾಂಸ್ಕೃತಿಕ ಚಟುವಟಿಕೆ ಹಮ್ಮಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.<br /> <br /> ಮೂಲ ಸೌಲಭ್ಯ ಇಲ್ಲದೆ ಅಂಬೇಡ್ಕರ್ ಭವನ ಬಳಕೆಯಾಗುತ್ತಿಲ್ಲ. ಕೂಡಲೇ, ಅಡುಗೆ ಕೋಣೆ, ಊಟದ ಹಾಲ್ ಹಾಗೂ ಶೌಚಾಲಯ ನಿರ್ಮಾಣ ಮಾಡಬೇಕು. ಶುಭ ಸಮಾರಂಭ ಹಾಗೂ ಸಭೆಗಳಿಗೆ ಬಳಕೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>