<p>ಮುಂಡರಗಿ: `ರಕ್ತದಾನ ಮಾಡುವುದು ಒಂದು ಪವಿತ್ರ ಕಾರ್ಯವಾಗಿದ್ದು 18 ವರ್ಷ ಮೇಲ್ಪಟ್ಟವರು ನಿರ್ಭಯವಾಗಿ ರಕ್ತದಾನ ಮಾಡುವ ಮೂಲಕ ಇತರರಿಗೆ ಜೀವದಾನ ಮಾಡಬೇಕು~ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಡಾ.ಕೆ. ಅರುಂಧತಿ ಹೇಳಿದರು.<br /> <br /> ಕಾಲೇಜು ಶಿಕ್ಷಣ ಇಲಾಖೆ, ಸ್ಥಳೀಯ ಜಗದ್ಗುರು ತೋಂಟದಾರ್ಯ ಸರಕಾರಿ ಪದವಿ ಕಾಲೇಜು, ಕ.ರಾ.ಬೆಲ್ಲದ ಕಾಲೇಜು, ಜ.ಅ.ಪದವಿ ಪೂರ್ವ ಕಾಲೇಜು ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳ ಆಶ್ರಯದಲ್ಲಿ ಮಂಗಳವಾರ ಪುರಸಭೆ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಒಮ್ಮೆ ರಕ್ತದಾನ ಮಾಡಿದರೆ ಮೂರು ತಿಂಗಳೊಳಗೆ ಮಾನವನ ಶರೀರದಲ್ಲಿ ಮತ್ತೆ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಆ ಮೂಲಕ ದೇಹದಲ್ಲಿ ನವ ಚೈತನ್ಯ, ಉಲ್ಲಾಸ ಮೂಡುತ್ತದೆ. ಆದ್ದರಿಂದ ಯುವಜನತೆ ಯಾವುದೇ ಅಳುಕು, ಅಂಜಿಕೆ ಇಲ್ಲದೆ ರಕ್ತದಾನ ಮಾಡಬಹುದಾಗಿದೆ~ ಎಂದು ಅವರು ಸಲಹೆ ನೀಡಿದರು.<br /> <br /> `ದೇಶದಲ್ಲಿ ಲಕ್ಷಾಂತರ ಬಡ ರೋಗಿಗಳು ರಕ್ತ ಹೀನತೆಯಿಂದ ಬಳಲುತ್ತಿದ್ದು, ಸಕಾಲದಲ್ಲಿ ರಕ್ತ ದೊರೆ ಯದೆ ಹಲವಾರು ರೋಗಿಗಳು ಸಾವನ್ನ ಪ್ಪುತ್ತಿದ್ದಾರೆ. ದೇಹದಲ್ಲಿ ಸದಾ ಉತ್ಪತ್ತಿ ಯಾಗುತ್ತಲೇ ಇರುವ ರಕ್ತವನ್ನು ದಾನ ಮಾಡುವ ಮುಖಾಂತರ ವಿದ್ಯಾ ರ್ಥಿಗಳು ಬಡ ರೋಗಿಗಳಿಗೆ ನೆರವಾ ಗಬೇಕು~ ಎಂದು ಅವರು ಸಲಹೆ ನೀಡಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ಟಿ. ತಿಪ್ಪೇರುದ್ರಸ್ವಾಮಿ ಮಾತನಾ ಡಿದರು.<br /> ಬಿ.ಬಿ. ಮಾಲಕಟ್ಟಿ, ಡಾ. ರುಕ್ಮಿಣಿ, ಉಪನ್ಯಾಸಕ ಸಿ.ಎಸ್. ಅರಸನಾಳ ಹಾಜರಿದ್ದರು. ಶಾರದಾ ಹುಳ್ಳಿ ಪ್ರಾರ್ಥಿ ಸಿದರು. ಅಶ್ವತ್ಥ್ ಯಾದವ್ ಸ್ವಾಗತಿ ಸಿದರು. ಶರಣಪ್ಪ ಕಡ್ಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: `ರಕ್ತದಾನ ಮಾಡುವುದು ಒಂದು ಪವಿತ್ರ ಕಾರ್ಯವಾಗಿದ್ದು 18 ವರ್ಷ ಮೇಲ್ಪಟ್ಟವರು ನಿರ್ಭಯವಾಗಿ ರಕ್ತದಾನ ಮಾಡುವ ಮೂಲಕ ಇತರರಿಗೆ ಜೀವದಾನ ಮಾಡಬೇಕು~ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಡಾ.ಕೆ. ಅರುಂಧತಿ ಹೇಳಿದರು.<br /> <br /> ಕಾಲೇಜು ಶಿಕ್ಷಣ ಇಲಾಖೆ, ಸ್ಥಳೀಯ ಜಗದ್ಗುರು ತೋಂಟದಾರ್ಯ ಸರಕಾರಿ ಪದವಿ ಕಾಲೇಜು, ಕ.ರಾ.ಬೆಲ್ಲದ ಕಾಲೇಜು, ಜ.ಅ.ಪದವಿ ಪೂರ್ವ ಕಾಲೇಜು ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳ ಆಶ್ರಯದಲ್ಲಿ ಮಂಗಳವಾರ ಪುರಸಭೆ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಒಮ್ಮೆ ರಕ್ತದಾನ ಮಾಡಿದರೆ ಮೂರು ತಿಂಗಳೊಳಗೆ ಮಾನವನ ಶರೀರದಲ್ಲಿ ಮತ್ತೆ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಆ ಮೂಲಕ ದೇಹದಲ್ಲಿ ನವ ಚೈತನ್ಯ, ಉಲ್ಲಾಸ ಮೂಡುತ್ತದೆ. ಆದ್ದರಿಂದ ಯುವಜನತೆ ಯಾವುದೇ ಅಳುಕು, ಅಂಜಿಕೆ ಇಲ್ಲದೆ ರಕ್ತದಾನ ಮಾಡಬಹುದಾಗಿದೆ~ ಎಂದು ಅವರು ಸಲಹೆ ನೀಡಿದರು.<br /> <br /> `ದೇಶದಲ್ಲಿ ಲಕ್ಷಾಂತರ ಬಡ ರೋಗಿಗಳು ರಕ್ತ ಹೀನತೆಯಿಂದ ಬಳಲುತ್ತಿದ್ದು, ಸಕಾಲದಲ್ಲಿ ರಕ್ತ ದೊರೆ ಯದೆ ಹಲವಾರು ರೋಗಿಗಳು ಸಾವನ್ನ ಪ್ಪುತ್ತಿದ್ದಾರೆ. ದೇಹದಲ್ಲಿ ಸದಾ ಉತ್ಪತ್ತಿ ಯಾಗುತ್ತಲೇ ಇರುವ ರಕ್ತವನ್ನು ದಾನ ಮಾಡುವ ಮುಖಾಂತರ ವಿದ್ಯಾ ರ್ಥಿಗಳು ಬಡ ರೋಗಿಗಳಿಗೆ ನೆರವಾ ಗಬೇಕು~ ಎಂದು ಅವರು ಸಲಹೆ ನೀಡಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ಟಿ. ತಿಪ್ಪೇರುದ್ರಸ್ವಾಮಿ ಮಾತನಾ ಡಿದರು.<br /> ಬಿ.ಬಿ. ಮಾಲಕಟ್ಟಿ, ಡಾ. ರುಕ್ಮಿಣಿ, ಉಪನ್ಯಾಸಕ ಸಿ.ಎಸ್. ಅರಸನಾಳ ಹಾಜರಿದ್ದರು. ಶಾರದಾ ಹುಳ್ಳಿ ಪ್ರಾರ್ಥಿ ಸಿದರು. ಅಶ್ವತ್ಥ್ ಯಾದವ್ ಸ್ವಾಗತಿ ಸಿದರು. ಶರಣಪ್ಪ ಕಡ್ಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>