<p><strong>ರಿಪ್ಪನ್ಪೇಟೆ: </strong>ಪ್ರತಿಯೊಬ್ಬರು ರಕ್ತದಾನ ಮಾಡುವುದು ಶ್ರೇಷ್ಠ ಕಾರ್ಯ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪದ್ಮಾ ಸುರೇಶ ಹೇಳಿದರು.ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಶನಿವಾರ ಜಿಎಸ್ಬಿ ಸಮಾಜದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಜೀವ ರಕ್ಷಣೆಗೆ ಅನಿರೀಕ್ಷಿತ ನಡೆಯುವ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರು ಮಾಡಲು ರಕ್ತ ಅವಶ್ಯ .ಈ ನಿಟ್ಟಿನಲ್ಲಿ ಗ್ರಾಮೀಣ ಜನತೆಗೆ ಇದರ ಉಪಯೋಗ ಪಡೆಯಲು ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.<br /> <br /> ತಾ.ಪಂ. ಸದಸ್ಯೆ ನಾಗರತ್ನಾ ದೇವರಾಜ್ ಮಾತನಾಡಿ, ಜನ ಪರಕಾಳಜಿಯಿಂದ ಸಂಸ್ಥೆ ಹಲವಾರು ಕಾರ್ಯಕ್ರಮಗಳನ್ನು ನಿರ್ವಹಿಸಿದೆ ಇದರ ಸದುಪಯೋಗ ಪಡೆದುಕೊಳ್ಳಬೆಕು ಎಂದರು.ರೋಟರಿ ಅಧ್ಯಕ್ಷ ಎಂಬಿ ಲಕ್ಷ್ಮಣ್ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸದಾ ಸಮಾಜ ಮುಖಿ ಚಿಂತನೆಯಲ್ಲಿ ಶ್ರಮಿಸುವ ಸಂಸ್ಥೆಗೆ ನಾಗರಿಕರ ಸಹಕಾರ ಅತ್ಯಗತ್ಯವೆಂದು ಹೇಳಿದರು. <br /> <br /> ಸಭೆಯಲ್ಲಿ ಉಪಾಧ್ಯಕ್ಷ ಎನ್. ವರ್ತೇಶ, ಶಿವಮೊಗ್ಗ ರೋಟರಿ ರಕ್ತನಿಧಿ ಡಾ.ಭಾಸ್ಕರ್ ರಾವ್, ಚರ್ಚ್ ಫಾದರ್ ವಿನ್ಸೆಂಟ್ ಹಾಜರಿದ್ದರು.ರೋಟರಿಯನ್ ಗಣೇಶ ಸ್ವಾಗತಿಸಿದರು, ರಾಧಕೃಷ್ಣ ನಿರೂಪಿಸಿದರು, ಎಲ್ಐಸಿ ರಾಧಕೃಷ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ: </strong>ಪ್ರತಿಯೊಬ್ಬರು ರಕ್ತದಾನ ಮಾಡುವುದು ಶ್ರೇಷ್ಠ ಕಾರ್ಯ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪದ್ಮಾ ಸುರೇಶ ಹೇಳಿದರು.ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಶನಿವಾರ ಜಿಎಸ್ಬಿ ಸಮಾಜದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಜೀವ ರಕ್ಷಣೆಗೆ ಅನಿರೀಕ್ಷಿತ ನಡೆಯುವ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರು ಮಾಡಲು ರಕ್ತ ಅವಶ್ಯ .ಈ ನಿಟ್ಟಿನಲ್ಲಿ ಗ್ರಾಮೀಣ ಜನತೆಗೆ ಇದರ ಉಪಯೋಗ ಪಡೆಯಲು ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.<br /> <br /> ತಾ.ಪಂ. ಸದಸ್ಯೆ ನಾಗರತ್ನಾ ದೇವರಾಜ್ ಮಾತನಾಡಿ, ಜನ ಪರಕಾಳಜಿಯಿಂದ ಸಂಸ್ಥೆ ಹಲವಾರು ಕಾರ್ಯಕ್ರಮಗಳನ್ನು ನಿರ್ವಹಿಸಿದೆ ಇದರ ಸದುಪಯೋಗ ಪಡೆದುಕೊಳ್ಳಬೆಕು ಎಂದರು.ರೋಟರಿ ಅಧ್ಯಕ್ಷ ಎಂಬಿ ಲಕ್ಷ್ಮಣ್ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸದಾ ಸಮಾಜ ಮುಖಿ ಚಿಂತನೆಯಲ್ಲಿ ಶ್ರಮಿಸುವ ಸಂಸ್ಥೆಗೆ ನಾಗರಿಕರ ಸಹಕಾರ ಅತ್ಯಗತ್ಯವೆಂದು ಹೇಳಿದರು. <br /> <br /> ಸಭೆಯಲ್ಲಿ ಉಪಾಧ್ಯಕ್ಷ ಎನ್. ವರ್ತೇಶ, ಶಿವಮೊಗ್ಗ ರೋಟರಿ ರಕ್ತನಿಧಿ ಡಾ.ಭಾಸ್ಕರ್ ರಾವ್, ಚರ್ಚ್ ಫಾದರ್ ವಿನ್ಸೆಂಟ್ ಹಾಜರಿದ್ದರು.ರೋಟರಿಯನ್ ಗಣೇಶ ಸ್ವಾಗತಿಸಿದರು, ರಾಧಕೃಷ್ಣ ನಿರೂಪಿಸಿದರು, ಎಲ್ಐಸಿ ರಾಧಕೃಷ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>