<p><strong>ನವದೆಹಲಿ (ಪಿಟಿಐ): </strong>ಕೇಂದ್ರ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಕಚೇರಿಯಲ್ಲಿ `ಕಳ್ಳಗಿವಿ~(ಕದ್ದಾಲಿಸುವ ಉಪಕರಣ) ಇರುವುದು ಪತ್ತೆಯಾಗಿದ್ದು, ಈ ಬಗ್ಗೆ ತನಿಖೆಗೆ ಜಾಗೃತಾದಳಕ್ಕೆ (ಇಂಟಲಿಜೆನ್ಸ್ ಬ್ಯೂರೋ) ಆದೇಶಿಸಲಾಗಿದೆ.<br /> <br /> ರಕ್ಷಣಾ ಕಾರ್ಯದರ್ಶಿ ಶಶಿಕಾಂತ ಶರ್ಮಾ ಅವರು ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಜಾಗೃತಾದಳಕ್ಕೆ ಸೂಚಿಸುವುದರೊಂದಿಗೆ ಈ ವಿಚಾರ ಬೆಳಕಿಗೆ ಬಂತು ಎಂದು ಸಚಿವಾಲಯ ಮೂಲಗಳು ಪಿಟಿಐಗೆ ತಿಳಿಸಿವೆ.</p>.<p>ದೂರವಾಣಿ ಲೈನ್ ಗಳನ್ನು ನಿರ್ವಹಿಸುತ್ತಿದ್ದ ಇಬ್ಬರು ಸೇನಾ ಸಿಬ್ಬಂದಿ ದೂರವಾಣಿ ಲೈನ್ಗಳಲ್ಲಿನ ದೋಷವನ್ನು ಪತ್ತೆ ಹಚ್ಚಿದರು. ಆ ನಂತರ ಸಚಿವಾಲಯದ ಅಧಿಕಾರಿಗಳು ಈ ಸೇನಾ ಸಿಬ್ಬಂದಿ ಮೂಲಕ ತಮ್ಮ ದೂರವಾಣಿ ಲೈನ್ಗಳ ತಪಾಸಣೆ ಮಾಡುವುದನ್ನು ನಿಲ್ಲಿಸಿದರು ಎನ್ನಲಾಗಿದೆ. <br /> <br /> ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಜನ್ಮದಿನಾಂಕ ವಿವಾದವು ಸುಪ್ರೀಂಕೋರ್ಟ್ ಮಧ್ಯ ಪ್ರವೇಶದೊಂದಿಗೆ ಇತ್ಯರ್ಥವಾದ ಬಳಿಕ ಇದೀಗ ಈ ಹೊಸ ಬೆಳವಣಿಗೆ ನಡೆದಿದೆ. ಕಳೆದ ವರ್ಷ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಕಚೇರಿಯಲ್ಲೂ ಇದೇ ಮಾದರಿ ಶಂಕಿತ ~ಕಳ್ಳಗಿವಿ~ ಪ್ರಕರಣ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕೇಂದ್ರ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಕಚೇರಿಯಲ್ಲಿ `ಕಳ್ಳಗಿವಿ~(ಕದ್ದಾಲಿಸುವ ಉಪಕರಣ) ಇರುವುದು ಪತ್ತೆಯಾಗಿದ್ದು, ಈ ಬಗ್ಗೆ ತನಿಖೆಗೆ ಜಾಗೃತಾದಳಕ್ಕೆ (ಇಂಟಲಿಜೆನ್ಸ್ ಬ್ಯೂರೋ) ಆದೇಶಿಸಲಾಗಿದೆ.<br /> <br /> ರಕ್ಷಣಾ ಕಾರ್ಯದರ್ಶಿ ಶಶಿಕಾಂತ ಶರ್ಮಾ ಅವರು ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಜಾಗೃತಾದಳಕ್ಕೆ ಸೂಚಿಸುವುದರೊಂದಿಗೆ ಈ ವಿಚಾರ ಬೆಳಕಿಗೆ ಬಂತು ಎಂದು ಸಚಿವಾಲಯ ಮೂಲಗಳು ಪಿಟಿಐಗೆ ತಿಳಿಸಿವೆ.</p>.<p>ದೂರವಾಣಿ ಲೈನ್ ಗಳನ್ನು ನಿರ್ವಹಿಸುತ್ತಿದ್ದ ಇಬ್ಬರು ಸೇನಾ ಸಿಬ್ಬಂದಿ ದೂರವಾಣಿ ಲೈನ್ಗಳಲ್ಲಿನ ದೋಷವನ್ನು ಪತ್ತೆ ಹಚ್ಚಿದರು. ಆ ನಂತರ ಸಚಿವಾಲಯದ ಅಧಿಕಾರಿಗಳು ಈ ಸೇನಾ ಸಿಬ್ಬಂದಿ ಮೂಲಕ ತಮ್ಮ ದೂರವಾಣಿ ಲೈನ್ಗಳ ತಪಾಸಣೆ ಮಾಡುವುದನ್ನು ನಿಲ್ಲಿಸಿದರು ಎನ್ನಲಾಗಿದೆ. <br /> <br /> ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಜನ್ಮದಿನಾಂಕ ವಿವಾದವು ಸುಪ್ರೀಂಕೋರ್ಟ್ ಮಧ್ಯ ಪ್ರವೇಶದೊಂದಿಗೆ ಇತ್ಯರ್ಥವಾದ ಬಳಿಕ ಇದೀಗ ಈ ಹೊಸ ಬೆಳವಣಿಗೆ ನಡೆದಿದೆ. ಕಳೆದ ವರ್ಷ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಕಚೇರಿಯಲ್ಲೂ ಇದೇ ಮಾದರಿ ಶಂಕಿತ ~ಕಳ್ಳಗಿವಿ~ ಪ್ರಕರಣ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>