<p><strong>ಬೆಂಗಳೂರು</strong>: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ರಮಣಶ್ರೀ ಪ್ರತಿಷ್ಠಾನದ ಸಹಯೋಗದಲ್ಲಿ ನೀಡುವ `ರಮಣಶ್ರೀ ಶರಣ ಪ್ರಶಸ್ತಿ~ಗೆ ಡಾ.ಎಸ್.ಆರ್. ಗುಂಜಾಳ್ (ಸಂಶೋಧನೆ), ಅಥಣಿ ಪ್ರಭುಬಸವ ಸ್ವಾಮೀಜಿ (ವಚನ ರಚನೆ), ದೀನಬಂಧು ಟ್ರಸ್ಟ್ (ಶರಣ ಸಂಸ್ಕೃತಿ ಪ್ರಸಾರ/ಜಿ.ಎಸ್. ಜಯದೇವ್) ಹಾಗೂ ಕುಮಾರದಾಸ್ (ವಚನ ಸಂಗೀತ) ಆಯ್ಕೆಯಾಗಿದ್ದಾರೆ.<br /> <br /> ಶರಣ ಸಾಹಿತ್ಯ, ವಚನ, ಸಂಸ್ಕೃತಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಅದರಂತೆ 2011ನೇ ಸಾಲಿನ ಪ್ರಶಸ್ತಿಗೆ ಈ ನಾಲ್ಕು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. <br /> <br /> ಪುರಸ್ಕೃತರಿಗೆ ತಲಾ 25 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 17ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ರಮಣಶ್ರೀ ಪ್ರತಿಷ್ಠಾನದ ಸಹಯೋಗದಲ್ಲಿ ನೀಡುವ `ರಮಣಶ್ರೀ ಶರಣ ಪ್ರಶಸ್ತಿ~ಗೆ ಡಾ.ಎಸ್.ಆರ್. ಗುಂಜಾಳ್ (ಸಂಶೋಧನೆ), ಅಥಣಿ ಪ್ರಭುಬಸವ ಸ್ವಾಮೀಜಿ (ವಚನ ರಚನೆ), ದೀನಬಂಧು ಟ್ರಸ್ಟ್ (ಶರಣ ಸಂಸ್ಕೃತಿ ಪ್ರಸಾರ/ಜಿ.ಎಸ್. ಜಯದೇವ್) ಹಾಗೂ ಕುಮಾರದಾಸ್ (ವಚನ ಸಂಗೀತ) ಆಯ್ಕೆಯಾಗಿದ್ದಾರೆ.<br /> <br /> ಶರಣ ಸಾಹಿತ್ಯ, ವಚನ, ಸಂಸ್ಕೃತಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಅದರಂತೆ 2011ನೇ ಸಾಲಿನ ಪ್ರಶಸ್ತಿಗೆ ಈ ನಾಲ್ಕು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. <br /> <br /> ಪುರಸ್ಕೃತರಿಗೆ ತಲಾ 25 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 17ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>