<p>ಜೈಪುರ (ಪಿಟಿಐ): ಹಿಂಸಾಚಾರ ನಡೆಯುವ ಭೀತಿಯ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಸಾಹಿತ್ಯ ಉತ್ಸವದಲ್ಲಿ ನಡೆಯಬೇಕಿದ್ದ ಸಲ್ಮಾನ್ ರಶ್ದಿ ಅವರ ವಿಡಿಯೊ ಸಂವಾದವನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಯಿತು.<br /> ಮುಸ್ಲಿಂ ಸಂಘಟನೆಗಳು ಅವರ ವಿಡಿಯೊ ಸಂವಾದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.<br /> <br /> `ಅಪರಾಧಿ ಬರಹಗಾರ~ನ ಸಂವಾದಕ್ಕೆ ಅವಕಾಶ ಕಲ್ಪಿಸ್ದ್ದಿದೇ ಆದಲ್ಲಿ ರಕ್ತಪಾತ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು ಮತ್ತು ಲೇಖಕನ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರ ಒತ್ತಡ ಹೆಚ್ಚಿದ್ದರಿಂದ ಕಾರ್ಯಕ್ರಮದ ಆಯೋಜಕರು ಅನಿವಾರ್ಯವಾಗಿ ವಿಡಿಯೊ ಸಂವಾದವನ್ನು ರದ್ದುಪಡಿಸುವ ತೀರ್ಮಾನಕ್ಕೆ ಬರಬೇಕಾಯಿತು.<br /> <br /> `ಅಡ್ಡಿ ಉಂಟು ಮಾಡಲೆಂದೇ ಕೆಲವರು ಕಾರ್ಯಕ್ರಮ ನಡೆಯುವ ಸ್ಥಳದ ಒಳಗೆ ಪ್ರವೇಶಿಸಿದ್ದು, ಹಿಂಸಾಚಾರ ಉಂಟಾಗಬಹುದೆಂದು ಪೊಲೀಸರು ತಿಳಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸುವ ನಿರ್ಧಾರಕ್ಕೆ ಬರಲಾಯಿತು~ ಎಂದು ಆಯೋಜಕರಲ್ಲಿ ಒಬ್ಬರಾದ ಸಂಜಯ್ ರಾಯ್ ತಿಳಿಸಿದರು.<br /> <br /> `ಕೆಲವು ಸಂಘಟನೆಗಳು ತೀವ್ರ ಬೆದರಿಕೆ ಒಡ್ಡಿದ್ದವು. ಅಲ್ಲದೇ ಆಗಬಹುದಾಗಿದ್ದ ಹಿಂಸಾಚಾರವನ್ನು ತಡೆಗಟ್ಟುವುದು ಅನಿವಾರ್ಯವಾಗಿತ್ತು. ನಿಜಕ್ಕೂ ಇದೊಂದು ದುರದೃಷ್ಟಕರ ಮತ್ತು ಮೂರ್ಖತನದ ಪರಿಸ್ಥಿತಿ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ನಡೆಸುತ್ತಿರುವ ನಮ್ಮ ಹೋರಾಟಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ~ ಎಂದು ರಾಯ್ ಮಾರ್ಮಿಕವಾಗಿ ನುಡಿದರು.<br /> <br /> `ಕಾರ್ಯಕ್ರಮದಲ್ಲಿ ಮಕ್ಕಳು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು. ಯಾವುದೇ ತರಹದ ಅಹಿತಕರ ಘಟನೆ ನಡೆದು ತೊಂದರೆ ಉಂಟಾಗಬಾರದು ಎಂಬ ಕಾರಣಕ್ಕಾಗಿ ಅನಿವಾರ್ಯವಾಗಿ ತಲೆಬಾಗಬೇಕಾಯಿತು~ ಎಂದರು.<br /> <br /> ಇದಕ್ಕೂ ಮುನ್ನ ಸಹಾಯಕ ಪೊಲೀಸ್ ಕಮೀಷನರ್ ವಿರೇಂದ್ರ ಝಾಲಾ ಅವರು, ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಾಲೀಕರು ವಿಡಿಯೊ ಸಂವಾದಕ್ಕೆ ಅವಕಾಶ ಕಲ್ಪಿಸಿದರೆ ತೀವ್ರ ಪರಿಣಾಮವಾಗಬಹುದೆಂಬ ಭೀತಿಯಿಂದ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳ್ದ್ದಿದಾಗಿ ತಿಳಿಸಿದರು. <br /> <br /> ಸಂಘಟಕರ ಜತೆ ಸಭೆ ನಡೆಸಿದ ಬಳಿಕ ಪ್ರತಿಭಟನಾಕಾರರು ಸ್ಥಳದಲ್ಲಿಯೇ ಪ್ರಾರ್ಥನೆ ಮಾಡಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೈಪುರ (ಪಿಟಿಐ): ಹಿಂಸಾಚಾರ ನಡೆಯುವ ಭೀತಿಯ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಸಾಹಿತ್ಯ ಉತ್ಸವದಲ್ಲಿ ನಡೆಯಬೇಕಿದ್ದ ಸಲ್ಮಾನ್ ರಶ್ದಿ ಅವರ ವಿಡಿಯೊ ಸಂವಾದವನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಯಿತು.<br /> ಮುಸ್ಲಿಂ ಸಂಘಟನೆಗಳು ಅವರ ವಿಡಿಯೊ ಸಂವಾದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.<br /> <br /> `ಅಪರಾಧಿ ಬರಹಗಾರ~ನ ಸಂವಾದಕ್ಕೆ ಅವಕಾಶ ಕಲ್ಪಿಸ್ದ್ದಿದೇ ಆದಲ್ಲಿ ರಕ್ತಪಾತ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು ಮತ್ತು ಲೇಖಕನ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರ ಒತ್ತಡ ಹೆಚ್ಚಿದ್ದರಿಂದ ಕಾರ್ಯಕ್ರಮದ ಆಯೋಜಕರು ಅನಿವಾರ್ಯವಾಗಿ ವಿಡಿಯೊ ಸಂವಾದವನ್ನು ರದ್ದುಪಡಿಸುವ ತೀರ್ಮಾನಕ್ಕೆ ಬರಬೇಕಾಯಿತು.<br /> <br /> `ಅಡ್ಡಿ ಉಂಟು ಮಾಡಲೆಂದೇ ಕೆಲವರು ಕಾರ್ಯಕ್ರಮ ನಡೆಯುವ ಸ್ಥಳದ ಒಳಗೆ ಪ್ರವೇಶಿಸಿದ್ದು, ಹಿಂಸಾಚಾರ ಉಂಟಾಗಬಹುದೆಂದು ಪೊಲೀಸರು ತಿಳಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸುವ ನಿರ್ಧಾರಕ್ಕೆ ಬರಲಾಯಿತು~ ಎಂದು ಆಯೋಜಕರಲ್ಲಿ ಒಬ್ಬರಾದ ಸಂಜಯ್ ರಾಯ್ ತಿಳಿಸಿದರು.<br /> <br /> `ಕೆಲವು ಸಂಘಟನೆಗಳು ತೀವ್ರ ಬೆದರಿಕೆ ಒಡ್ಡಿದ್ದವು. ಅಲ್ಲದೇ ಆಗಬಹುದಾಗಿದ್ದ ಹಿಂಸಾಚಾರವನ್ನು ತಡೆಗಟ್ಟುವುದು ಅನಿವಾರ್ಯವಾಗಿತ್ತು. ನಿಜಕ್ಕೂ ಇದೊಂದು ದುರದೃಷ್ಟಕರ ಮತ್ತು ಮೂರ್ಖತನದ ಪರಿಸ್ಥಿತಿ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ನಡೆಸುತ್ತಿರುವ ನಮ್ಮ ಹೋರಾಟಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ~ ಎಂದು ರಾಯ್ ಮಾರ್ಮಿಕವಾಗಿ ನುಡಿದರು.<br /> <br /> `ಕಾರ್ಯಕ್ರಮದಲ್ಲಿ ಮಕ್ಕಳು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು. ಯಾವುದೇ ತರಹದ ಅಹಿತಕರ ಘಟನೆ ನಡೆದು ತೊಂದರೆ ಉಂಟಾಗಬಾರದು ಎಂಬ ಕಾರಣಕ್ಕಾಗಿ ಅನಿವಾರ್ಯವಾಗಿ ತಲೆಬಾಗಬೇಕಾಯಿತು~ ಎಂದರು.<br /> <br /> ಇದಕ್ಕೂ ಮುನ್ನ ಸಹಾಯಕ ಪೊಲೀಸ್ ಕಮೀಷನರ್ ವಿರೇಂದ್ರ ಝಾಲಾ ಅವರು, ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಾಲೀಕರು ವಿಡಿಯೊ ಸಂವಾದಕ್ಕೆ ಅವಕಾಶ ಕಲ್ಪಿಸಿದರೆ ತೀವ್ರ ಪರಿಣಾಮವಾಗಬಹುದೆಂಬ ಭೀತಿಯಿಂದ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳ್ದ್ದಿದಾಗಿ ತಿಳಿಸಿದರು. <br /> <br /> ಸಂಘಟಕರ ಜತೆ ಸಭೆ ನಡೆಸಿದ ಬಳಿಕ ಪ್ರತಿಭಟನಾಕಾರರು ಸ್ಥಳದಲ್ಲಿಯೇ ಪ್ರಾರ್ಥನೆ ಮಾಡಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>