<p><strong>ಮಧುಗಿರಿ: </strong>ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ತಾಲ್ಲೂಕು ಬಿಜೆಪಿ ಘಟಕವು ಬುಧವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿತು.<br /> <br /> ಮನವಿ ಸಲ್ಲಿಸಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಎಸ್.ಪಾಂಡುರಂಗಾರೆಡ್ಡಿ, ದೇಶದ ಎಲ್ಲೆಡೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರಕ್ಕೆ ರೈತರ ಧ್ವನಿ ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಕೇಂದ್ರ ವರ್ಷದಿಂದ ವರ್ಷಕ್ಕೆ ರಸಗೊಬ್ಬರ ಬೆಲೆ ಹೆಚ್ಚಿಸುತ್ತಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ರೈತರಿಗೆ ಅಸಾಧ್ಯವಾಗಿದೆ. ಹಳ್ಳಿಗಳಲ್ಲಿ ಬೇಸಾಯ ನಂಬಿರುವ ರೈತರು ಇದೇ ಪರಿಸ್ಥಿತಿ ಮುಂದುವರೆದರೆ ಗ್ರಾಮ ತೊರೆದು ಗುಳೇ ಹೋಗುವ ದಿನಗಳು ದೂರ ಉಳಿದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಬೇಸಾಯ ದುಬಾರಿ ಎನಿಸಿ ರೈತರು ಕೃಷಿಯಿಂದ ದೂರ ಉಳಿದರೆ, ದೇಶ ಆಹಾರ ಅಭಾವ ಎದುರಿಸಬೇಕಾಗುತ್ತದೆ. ಕೇಂದ್ರ ಎಲ್ಲ ನಿಟ್ಟಿನಲ್ಲೂ ಆಲೋಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಬಿಜೆಪಿ ಮುಖಂಡರಾದ ಬಿ.ಎನ್.ಲಕ್ಷ್ಮೀಪತಿ, ಎಂ.ರಂಗಪ್ಪ, ನಾಗಾರೆಡ್ಡಿ, ಪದ್ಮಣ್ಣ, ರಂಗಶಾಮಯ್ಯ, ನರಸಿಂಹಮೂರ್ತಿ, ಲಕ್ಷ್ಮೀನಾರಾಯಣ, ಡಾ.ಶ್ರೀನಿವಾಸಮೂರ್ತಿ, ಪುರಸಭಾ ಸದಸ್ಯ ಎಂ.ಸುರೇಶ್, ಬಿ.ಪಿ.ನಾರಾಯಣ್ ಇತರರು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ: </strong>ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ತಾಲ್ಲೂಕು ಬಿಜೆಪಿ ಘಟಕವು ಬುಧವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿತು.<br /> <br /> ಮನವಿ ಸಲ್ಲಿಸಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಎಸ್.ಪಾಂಡುರಂಗಾರೆಡ್ಡಿ, ದೇಶದ ಎಲ್ಲೆಡೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರಕ್ಕೆ ರೈತರ ಧ್ವನಿ ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಕೇಂದ್ರ ವರ್ಷದಿಂದ ವರ್ಷಕ್ಕೆ ರಸಗೊಬ್ಬರ ಬೆಲೆ ಹೆಚ್ಚಿಸುತ್ತಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ರೈತರಿಗೆ ಅಸಾಧ್ಯವಾಗಿದೆ. ಹಳ್ಳಿಗಳಲ್ಲಿ ಬೇಸಾಯ ನಂಬಿರುವ ರೈತರು ಇದೇ ಪರಿಸ್ಥಿತಿ ಮುಂದುವರೆದರೆ ಗ್ರಾಮ ತೊರೆದು ಗುಳೇ ಹೋಗುವ ದಿನಗಳು ದೂರ ಉಳಿದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಬೇಸಾಯ ದುಬಾರಿ ಎನಿಸಿ ರೈತರು ಕೃಷಿಯಿಂದ ದೂರ ಉಳಿದರೆ, ದೇಶ ಆಹಾರ ಅಭಾವ ಎದುರಿಸಬೇಕಾಗುತ್ತದೆ. ಕೇಂದ್ರ ಎಲ್ಲ ನಿಟ್ಟಿನಲ್ಲೂ ಆಲೋಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಬಿಜೆಪಿ ಮುಖಂಡರಾದ ಬಿ.ಎನ್.ಲಕ್ಷ್ಮೀಪತಿ, ಎಂ.ರಂಗಪ್ಪ, ನಾಗಾರೆಡ್ಡಿ, ಪದ್ಮಣ್ಣ, ರಂಗಶಾಮಯ್ಯ, ನರಸಿಂಹಮೂರ್ತಿ, ಲಕ್ಷ್ಮೀನಾರಾಯಣ, ಡಾ.ಶ್ರೀನಿವಾಸಮೂರ್ತಿ, ಪುರಸಭಾ ಸದಸ್ಯ ಎಂ.ಸುರೇಶ್, ಬಿ.ಪಿ.ನಾರಾಯಣ್ ಇತರರು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>