<p>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ಮತ್ತು ದಾಸರಹಳ್ಳಿ ವಲಯಕ್ಕೆ ಸೇರಿರುವ ಲಗ್ಗೆರೆ ಮತ್ತು ಇತ್ತೀಚೆಗೆ ಅಭಿವೃದ್ಧಿಯಾದ ಚೌಡೇಶ್ವರಿ ನಗರ, ರಾಜೀವಗಾಂಧಿನಗರ ಕೆಂಪೇಗೌಡ ಬಡಾವಣೆಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಂಡಿವೆ. <br /> <br /> ಆದರೆ ಲಗ್ಗೆರೆ ಗ್ರಾಮದೊಳಗೆ ಹಾದುಹೋಗುವ ಮುಖ್ಯ ರಸ್ತೆಯು ಕಿರಿದಾಗಿದ್ದು ಬಿಎಂಟಿಸಿಯ 3-4 ಮಾರ್ಗಗಳ ಬಸ್ಸುಗಳು ಲಗ್ಗೆರೆಯ ಹೊರವಲಯದ ಬಸ್ಸು ನಿಲ್ದಾಣಕ್ಕೆ ಮಾತ್ರ ಬಂದು ಹೋಗುತ್ತವೆ. ಇದರಿಂದ ಲಗ್ಗೆರೆಯ ಹೊಸ ಬಡಾವಣೆಗಳ ನಿವಾಸಿಗಳು ಪ್ರತಿದಿನ 2-3 ಕಿ.ಮೀ. ದೂರ ನಡೆಯ ಬೇಕಾಗಿದೆ. ಮಹಿಳೆಯರಿಗೆ, ವೃದ್ಧರಿಗೆ ಇದು ತುಸು ತ್ರಾಸದಾಯಕವಾಗಿದೆ.<br /> <br /> ಈ ಬಗ್ಗೆ ಹಲವು ಸಲ ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ ಈ ತನಕ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಈಚೆಗೆ ಈ ಮುಖ್ಯ ರಸ್ತೆಯಲ್ಲಿ ದಿವಂಗತ ಚಲನಚಿತ್ರ ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದಾರೆ. <br /> <br /> ಕಾವೇರಿ 4ನೇ ಹಂತದ ನೀರಿನ ಪೈಪುಗಳನ್ನು ಇದೇ ಮುಖ್ಯ ರಸ್ತೆಯಲ್ಲಿ ಹಾಕುವ ಕಾಮಗಾರಿ ಆರಂಭವಾಗಿದೆ. ಈಗಲಾದರೂ ಬಿಬಿಎಂಪಿಯ ಆಯುಕ್ತರು ಮತ್ತು ಮೇಯರ್ ಕಿರಿದಾದ ಈ ರಸ್ತೆಯನ್ನು ವಿಸ್ತರಿಸುವತ್ತ ಗಮನ ಹರಿಸುವರೆ? ಬಿಎಂಟಿಸಿಯ ಬಸ್ಸುಗಳು ಮುಂದಿನ ಹೊಸ ಬಡಾವಣೆಗಳಿಗೆ ಸುಲಭವಾಗಿ ಬಂದು ಹೋಗುವಂತೆ ಕ್ರಮ ಕೈಗೊಳ್ಳುತ್ತಾರೆಂದು ಆಶಿಸೋಣವೇ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ಮತ್ತು ದಾಸರಹಳ್ಳಿ ವಲಯಕ್ಕೆ ಸೇರಿರುವ ಲಗ್ಗೆರೆ ಮತ್ತು ಇತ್ತೀಚೆಗೆ ಅಭಿವೃದ್ಧಿಯಾದ ಚೌಡೇಶ್ವರಿ ನಗರ, ರಾಜೀವಗಾಂಧಿನಗರ ಕೆಂಪೇಗೌಡ ಬಡಾವಣೆಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಂಡಿವೆ. <br /> <br /> ಆದರೆ ಲಗ್ಗೆರೆ ಗ್ರಾಮದೊಳಗೆ ಹಾದುಹೋಗುವ ಮುಖ್ಯ ರಸ್ತೆಯು ಕಿರಿದಾಗಿದ್ದು ಬಿಎಂಟಿಸಿಯ 3-4 ಮಾರ್ಗಗಳ ಬಸ್ಸುಗಳು ಲಗ್ಗೆರೆಯ ಹೊರವಲಯದ ಬಸ್ಸು ನಿಲ್ದಾಣಕ್ಕೆ ಮಾತ್ರ ಬಂದು ಹೋಗುತ್ತವೆ. ಇದರಿಂದ ಲಗ್ಗೆರೆಯ ಹೊಸ ಬಡಾವಣೆಗಳ ನಿವಾಸಿಗಳು ಪ್ರತಿದಿನ 2-3 ಕಿ.ಮೀ. ದೂರ ನಡೆಯ ಬೇಕಾಗಿದೆ. ಮಹಿಳೆಯರಿಗೆ, ವೃದ್ಧರಿಗೆ ಇದು ತುಸು ತ್ರಾಸದಾಯಕವಾಗಿದೆ.<br /> <br /> ಈ ಬಗ್ಗೆ ಹಲವು ಸಲ ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ ಈ ತನಕ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಈಚೆಗೆ ಈ ಮುಖ್ಯ ರಸ್ತೆಯಲ್ಲಿ ದಿವಂಗತ ಚಲನಚಿತ್ರ ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದಾರೆ. <br /> <br /> ಕಾವೇರಿ 4ನೇ ಹಂತದ ನೀರಿನ ಪೈಪುಗಳನ್ನು ಇದೇ ಮುಖ್ಯ ರಸ್ತೆಯಲ್ಲಿ ಹಾಕುವ ಕಾಮಗಾರಿ ಆರಂಭವಾಗಿದೆ. ಈಗಲಾದರೂ ಬಿಬಿಎಂಪಿಯ ಆಯುಕ್ತರು ಮತ್ತು ಮೇಯರ್ ಕಿರಿದಾದ ಈ ರಸ್ತೆಯನ್ನು ವಿಸ್ತರಿಸುವತ್ತ ಗಮನ ಹರಿಸುವರೆ? ಬಿಎಂಟಿಸಿಯ ಬಸ್ಸುಗಳು ಮುಂದಿನ ಹೊಸ ಬಡಾವಣೆಗಳಿಗೆ ಸುಲಭವಾಗಿ ಬಂದು ಹೋಗುವಂತೆ ಕ್ರಮ ಕೈಗೊಳ್ಳುತ್ತಾರೆಂದು ಆಶಿಸೋಣವೇ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>