<p><strong>ಕೃಷ್ಣರಾಜಪುರ: </strong>ವಿಜ್ಞಾನ ನಗರ ವ್ಯಾಪ್ತಿಯ ಅಬ್ಬಯ್ಯರೆಡ್ಡಿ, ನಾಗಪ್ಪರೆಡ್ಡಿ ಮತ್ತು ಕುಶಾಲ್ ಬಡಾವಣೆಯ ಮುಖ್ಯ ರಸ್ತೆ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಎಸ್.ನಂದೀಶರೆಡ್ಡಿ ಅವರು ಗುರುವಾರ ಚಾಲನೆ ನೀಡಿದರು.<br /> <br /> ಬಳಿಕ ವಾರ್ಡ್ ಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ 1.40 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಕಾಮಗಾರಿಗಳು ಮೂರ್ನಾಲ್ಕು ತಿಂಗಳೊಳಗೆ ಮುಗಿಯಲಿವೆ. <br /> ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.<br /> <br /> ನಾಗರಿಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, `ಚುನಾವಣೆ ಎದುರಾಗಲಿದೆ ಎಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮತದಾರರನ್ನು ಓಲೈಸುವ ಪ್ರಯತ್ನ ಮಾಡುವುದಿಲ್ಲ. ಆದರೆ ಈಗಾಗಲೇ 122 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಷೇತ್ರವ್ಯಾಪಿ ಒಳಚರಂಡಿ ವ್ಯವಸ್ಥೆ ಮುಗಿದಿದೆ. <br /> <br /> ಇಲ್ಲಿಯೂ ಈ ಭಾಗದ್ಲ್ಲಲಿ ಒಳ ಚರಂಡಿ ವ್ಯವಸ್ಥೆ ಮುಗಿದಿದ್ದು, ಕೊನೆಯ ಹಂತವಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ~ ಎಂದು ಅವರು ವಿವರಿಸಿದರು.<br /> <br /> ಪಾಲಿಕೆ ಸದಸ್ಯರಾದ ಗೀತಾ ವಿವೇಕಾನಂದಬಾಬು, ಕಾಮಗಾರಿ ಸಂದರ್ಭದಲ್ಲಿ ನಾಗರಿಕರ ಸಹಕಾರ ಅಗತ್ಯ. ನಂತರ ಉಚಿತವಾಗಿ ಸಸಿಗಳನ್ನು ರಸ್ತೆ ಬದಿಗಳಲ್ಲಿ ನೆಡಲು ನಾಗರಿಕರಿಗೆ ವಿತರಿಸಲಾಗುತ್ತದೆ. ಅವುಗಳ ಪೋಷಣೆ ಮತ್ತು ಆರೈಕೆಯಲ್ಲಿ ಆಸಕ್ತಿ ವಹಿಸಬೇಕು ಎಂದು ಕೋರಿದರು.<br /> <br /> ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ವೇಣುಗೋಪಾಲ್, ಎಂಜಿನಿಯರ್ ಭೀಮೇಶ್, ರಾಮಕೃಷ್ಣರೆಡ್ಡಿ, ಬಿಜೆಪಿ ವಾರ್ಡ್ ಅಧ್ಯಕ್ಷ ಪುಟ್ಟು, ಮುಖಂಡ ಟಿ.ರಮೇಶ್, ಸುರೇಶ್ರೆಡ್ಡಿ, ಶ್ರೀನಿವಾಸ್, ರಾಮನ್ಕುಟ್ಟಿ ಮತ್ತಿತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ: </strong>ವಿಜ್ಞಾನ ನಗರ ವ್ಯಾಪ್ತಿಯ ಅಬ್ಬಯ್ಯರೆಡ್ಡಿ, ನಾಗಪ್ಪರೆಡ್ಡಿ ಮತ್ತು ಕುಶಾಲ್ ಬಡಾವಣೆಯ ಮುಖ್ಯ ರಸ್ತೆ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಎಸ್.ನಂದೀಶರೆಡ್ಡಿ ಅವರು ಗುರುವಾರ ಚಾಲನೆ ನೀಡಿದರು.<br /> <br /> ಬಳಿಕ ವಾರ್ಡ್ ಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ 1.40 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಕಾಮಗಾರಿಗಳು ಮೂರ್ನಾಲ್ಕು ತಿಂಗಳೊಳಗೆ ಮುಗಿಯಲಿವೆ. <br /> ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.<br /> <br /> ನಾಗರಿಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, `ಚುನಾವಣೆ ಎದುರಾಗಲಿದೆ ಎಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮತದಾರರನ್ನು ಓಲೈಸುವ ಪ್ರಯತ್ನ ಮಾಡುವುದಿಲ್ಲ. ಆದರೆ ಈಗಾಗಲೇ 122 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಷೇತ್ರವ್ಯಾಪಿ ಒಳಚರಂಡಿ ವ್ಯವಸ್ಥೆ ಮುಗಿದಿದೆ. <br /> <br /> ಇಲ್ಲಿಯೂ ಈ ಭಾಗದ್ಲ್ಲಲಿ ಒಳ ಚರಂಡಿ ವ್ಯವಸ್ಥೆ ಮುಗಿದಿದ್ದು, ಕೊನೆಯ ಹಂತವಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ~ ಎಂದು ಅವರು ವಿವರಿಸಿದರು.<br /> <br /> ಪಾಲಿಕೆ ಸದಸ್ಯರಾದ ಗೀತಾ ವಿವೇಕಾನಂದಬಾಬು, ಕಾಮಗಾರಿ ಸಂದರ್ಭದಲ್ಲಿ ನಾಗರಿಕರ ಸಹಕಾರ ಅಗತ್ಯ. ನಂತರ ಉಚಿತವಾಗಿ ಸಸಿಗಳನ್ನು ರಸ್ತೆ ಬದಿಗಳಲ್ಲಿ ನೆಡಲು ನಾಗರಿಕರಿಗೆ ವಿತರಿಸಲಾಗುತ್ತದೆ. ಅವುಗಳ ಪೋಷಣೆ ಮತ್ತು ಆರೈಕೆಯಲ್ಲಿ ಆಸಕ್ತಿ ವಹಿಸಬೇಕು ಎಂದು ಕೋರಿದರು.<br /> <br /> ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ವೇಣುಗೋಪಾಲ್, ಎಂಜಿನಿಯರ್ ಭೀಮೇಶ್, ರಾಮಕೃಷ್ಣರೆಡ್ಡಿ, ಬಿಜೆಪಿ ವಾರ್ಡ್ ಅಧ್ಯಕ್ಷ ಪುಟ್ಟು, ಮುಖಂಡ ಟಿ.ರಮೇಶ್, ಸುರೇಶ್ರೆಡ್ಡಿ, ಶ್ರೀನಿವಾಸ್, ರಾಮನ್ಕುಟ್ಟಿ ಮತ್ತಿತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>