<p>ಗೌರಿಬಿದನೂರು: ಪಟ್ಟಣದ ಬಿ.ಎಚ್.ರಸ್ತೆ ಮತ್ತು ಎಂ.ಜಿ.ರಸ್ತೆ ವಿಸ್ತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ರಸ್ತೆ ಒತ್ತುವರಿ ಮಾಡಿಕೊಂಡಿರುವ ಮಳಿಗೆದಾರರಿಗೆ ನೋಟಿಸ್ ಹೊರಡಿಸಿ, ಕೆಲವೇ ದಿನಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ತಿಳಿಸಿದರು.<br /> <br /> ಎರಡೂ ರಸ್ತೆಗಳ ವಿಸ್ತರಣೆಗೆ ಸಂಬಂಧಿಸಿದಂತೆ ಪಟ್ಟಣದ ಪುರಸಭೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, `ಮಳಿಗೆದಾರರು ಸ್ವಯಂ ಪ್ರೇರಣೆಯಿಂದ ಒತ್ತುವರಿ ತೆರವುಗೊಳಿಸಿದ್ದಲ್ಲಿ, ಉತ್ತಮ ರಸ್ತೆ ನಿರ್ಮಾಣಕ್ಕೆ ಅವಕಾಶ ದೊರೆಯುತ್ತದೆ~ ಎಂದರು.<br /> <br /> `ರಾಜ್ಯದ ಹೆದ್ದಾರಿ ಪ್ರಾಧಿಕಾರದ ನಿಯಮವಾಳಿ ಪ್ರಕಾರ, ರಸ್ತೆ ಮಧ್ಯಭಾಗದಿಂದ 11 ಮೀಟರ್ಗಳಷ್ಟು ರಸ್ತೆ ವಿಸ್ತಾರವಾಗಿರಬೇಕು. ಎರಡೂ ರಸ್ತೆಗಳಲ್ಲಿ ಮಳಿಗೆದಾರರು 6.5 ಮೀಟರ್ನಷ್ಟು ಒತ್ತುವರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. <br /> <br /> ಒತ್ತುವರಿ ತೆರವುಗೊಳಿಸಿದ್ದಲ್ಲಿ, ಪರಿಹಾರ ಬೇಕೆಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಟ್ಟಡಗಳನ್ನು ನಿರ್ಮಿಸುವ ಮೂಲಕ ರಸ್ತೆ ಒತ್ತುವರಿ ಮಾಡಿಕೊಂಡಿರುವ ಮಳಿಗೆದಾರರ ಪಟ್ಟಿ ಸಿದ್ಧಪಡಿಸಲಾಗುವುದು. ಒತ್ತುವರಿ ತೆರವುಗೊಳಿಸುವಂತೆ ಅವರಿಗೆ ನೋಟಿಸ್ ಹೊರಡಿಸಲಾಗುವುದು. ಬಳಿಕ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು~ ಎಂದು ಅವರು ತಿಳಿಸಿದರು.<br /> <br /> ಪುರಸಭೆ ಸದಸ್ಯ ಗೋಪಿ ಮಾತನಾಡಿ, `ಪುರಸಭೆ ವತಿಯಿಂದ ನಿರ್ಮಿಸಲಾಗಿರುವ ನೂತನ ತರಕಾರಿ ಮಾರಾಟ ವಾಣಿಜ್ಯ ಕಟ್ಟಡ ಸಂಕೀರ್ಣವನ್ನು ಅರ್ಹರಿಗೆ ನೀಡಬೇಕು. ನೂತನ ಮಳಿಗೆಗಳನ್ನು ಅರ್ಹ ವ್ಯಾಪಾರಸ್ಥರಿಗೆ ನೀಡಲಾಗುವುದು. ಹರಾಜು ಪ್ರಕ್ರಿಯೆ ನಡೆಸಲಾಗುವುದು~ ಎಂದರು.<br /> <br /> ಮತ್ತೊಬ್ಬ ಸದಸ್ಯ ರಫೀಕ್ ಮಾತನಾಡಿ, `ಹಂದಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಬರುತ್ತಿಲ್ಲ. ಪರಿಸರ ಶುಚಿಯಾಗಿಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕಿದೆ. ಜನರ ಆರೋಗ್ಯ ಕಾಪಾಡಲು ಆದ್ಯತೆ ಕೊಡಬೇಕು~ ಎಂದರು. <br /> <br /> ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ತಹಶೀಲ್ದಾರ್ ಡಾ. ಬಿ.ಸುಧಾ, ಪುರಸಭೆ ಅಧ್ಯಕ್ಷೆ ಪ್ರಮೀಳಾ ಬಾಲಾಜಿ, ಉಪಾಧ್ಯಕ್ಷ ವಿ.ರಮೇಶ್, ಸದಸ್ಯರಾದ ರಾಧಾಕೃಷ್ಣ ಗುಪ್ತ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಪಟ್ಟಣದ ಬಿ.ಎಚ್.ರಸ್ತೆ ಮತ್ತು ಎಂ.ಜಿ.ರಸ್ತೆ ವಿಸ್ತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ರಸ್ತೆ ಒತ್ತುವರಿ ಮಾಡಿಕೊಂಡಿರುವ ಮಳಿಗೆದಾರರಿಗೆ ನೋಟಿಸ್ ಹೊರಡಿಸಿ, ಕೆಲವೇ ದಿನಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ತಿಳಿಸಿದರು.<br /> <br /> ಎರಡೂ ರಸ್ತೆಗಳ ವಿಸ್ತರಣೆಗೆ ಸಂಬಂಧಿಸಿದಂತೆ ಪಟ್ಟಣದ ಪುರಸಭೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, `ಮಳಿಗೆದಾರರು ಸ್ವಯಂ ಪ್ರೇರಣೆಯಿಂದ ಒತ್ತುವರಿ ತೆರವುಗೊಳಿಸಿದ್ದಲ್ಲಿ, ಉತ್ತಮ ರಸ್ತೆ ನಿರ್ಮಾಣಕ್ಕೆ ಅವಕಾಶ ದೊರೆಯುತ್ತದೆ~ ಎಂದರು.<br /> <br /> `ರಾಜ್ಯದ ಹೆದ್ದಾರಿ ಪ್ರಾಧಿಕಾರದ ನಿಯಮವಾಳಿ ಪ್ರಕಾರ, ರಸ್ತೆ ಮಧ್ಯಭಾಗದಿಂದ 11 ಮೀಟರ್ಗಳಷ್ಟು ರಸ್ತೆ ವಿಸ್ತಾರವಾಗಿರಬೇಕು. ಎರಡೂ ರಸ್ತೆಗಳಲ್ಲಿ ಮಳಿಗೆದಾರರು 6.5 ಮೀಟರ್ನಷ್ಟು ಒತ್ತುವರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. <br /> <br /> ಒತ್ತುವರಿ ತೆರವುಗೊಳಿಸಿದ್ದಲ್ಲಿ, ಪರಿಹಾರ ಬೇಕೆಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಟ್ಟಡಗಳನ್ನು ನಿರ್ಮಿಸುವ ಮೂಲಕ ರಸ್ತೆ ಒತ್ತುವರಿ ಮಾಡಿಕೊಂಡಿರುವ ಮಳಿಗೆದಾರರ ಪಟ್ಟಿ ಸಿದ್ಧಪಡಿಸಲಾಗುವುದು. ಒತ್ತುವರಿ ತೆರವುಗೊಳಿಸುವಂತೆ ಅವರಿಗೆ ನೋಟಿಸ್ ಹೊರಡಿಸಲಾಗುವುದು. ಬಳಿಕ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು~ ಎಂದು ಅವರು ತಿಳಿಸಿದರು.<br /> <br /> ಪುರಸಭೆ ಸದಸ್ಯ ಗೋಪಿ ಮಾತನಾಡಿ, `ಪುರಸಭೆ ವತಿಯಿಂದ ನಿರ್ಮಿಸಲಾಗಿರುವ ನೂತನ ತರಕಾರಿ ಮಾರಾಟ ವಾಣಿಜ್ಯ ಕಟ್ಟಡ ಸಂಕೀರ್ಣವನ್ನು ಅರ್ಹರಿಗೆ ನೀಡಬೇಕು. ನೂತನ ಮಳಿಗೆಗಳನ್ನು ಅರ್ಹ ವ್ಯಾಪಾರಸ್ಥರಿಗೆ ನೀಡಲಾಗುವುದು. ಹರಾಜು ಪ್ರಕ್ರಿಯೆ ನಡೆಸಲಾಗುವುದು~ ಎಂದರು.<br /> <br /> ಮತ್ತೊಬ್ಬ ಸದಸ್ಯ ರಫೀಕ್ ಮಾತನಾಡಿ, `ಹಂದಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಬರುತ್ತಿಲ್ಲ. ಪರಿಸರ ಶುಚಿಯಾಗಿಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕಿದೆ. ಜನರ ಆರೋಗ್ಯ ಕಾಪಾಡಲು ಆದ್ಯತೆ ಕೊಡಬೇಕು~ ಎಂದರು. <br /> <br /> ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ತಹಶೀಲ್ದಾರ್ ಡಾ. ಬಿ.ಸುಧಾ, ಪುರಸಭೆ ಅಧ್ಯಕ್ಷೆ ಪ್ರಮೀಳಾ ಬಾಲಾಜಿ, ಉಪಾಧ್ಯಕ್ಷ ವಿ.ರಮೇಶ್, ಸದಸ್ಯರಾದ ರಾಧಾಕೃಷ್ಣ ಗುಪ್ತ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>